ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ; ಪೊಲೀಸರಿಗೆ ಮಹತ್ವದ ಮಾಹಿತಿ ಲಭ್ಯ ?
Team Udayavani, Feb 10, 2023, 6:50 AM IST
ಕಾಪು : ಪಾಂಗಾಳ ಶರತ್ ಶೆಟ್ಟಿ ಕೊಲೆ ವಿಚಾರಕ್ಕೆ ಸಂಬಂಧಿಸಿ ಬಿರುಸಿನ ತನಿಖೆಯ ವೇಳೆ ಪೊಲೀಸರಿಗೆ ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು ಆರೋಪಿಗಳ ಬೆನ್ನತ್ತಿ ತೀವ್ರ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕಳೆದ ರವಿವಾರ ಸಂಜೆ ಶರತ್ ಶೆಟ್ಟಿ ಅವರನ್ನು ಪಾಂಗಾಳದ ಅಂಗಡಿಯೊಂದರ ಬಳಿಗೆ ಮಾತುಕತೆಗೆ ಕರೆದ ಯುವಕರ ತಂಡ ಬಳಿಕ ಅಲ್ಲೇ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿತ್ತು. ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತತ್ಕ್ಷಣದಿಂದಲೇ ಚುರುಕಿನ ತನಿಖೆ ಮುಂದುವರಿಸಿದ್ದರು.
ಹತ್ಯೆಗೆ ಸಂಬಂಧಿಸಿ ಸಂಶಯದ ಮೇರೆಗೆ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿರುವ ಪೊಲೀಸರಿಗೆ ಮಹತ್ವದ ವಿಚಾರಗಳು ದೊರಕಿವೆಯಾದರೂ ಅದನ್ನು ಇನ್ನೂ ಧೃಡಪಡಿಸಿಲ್ಲ. ಪ್ರಮುಖ ಆರೋಪಿಗಳ ಬೆನ್ನತ್ತಿರುವ ಪೊಲೀಸರಿಗೆ ಹತ್ಯೆಯ ಹಿಂದೆ ಹೊರಗಿನ ವ್ಯಕ್ತಿಗಳ ಕೈವಾಡ ಇರುವ ಬಗ್ಗೆಯೂ ಸುಳಿವು ಲಭ್ಯವಾಗಿದ್ದು ಆ ಆಯಾಮದಲ್ಲೂ ತನಿಖೆಯನ್ನು ಮುಂದುವರಿಸಿದ್ದಾರೆ.
ಉಡುಪಿ ಎಸ್ಪಿ, ಅಡಿಷನಲ್ ಎಸ್ಪಿ, ಕಾರ್ಕಳ ಡಿವೈಎಸ್ಪಿ ಸಹಿತ ಮೇಲಧಿಕಾರಿಗಳು ಕಾಪು ವೃತ್ತ ನಿರೀಕ್ಷಕರ ಕಛೇರಿಗೆ ಪದೇ ಪದೇ ಭೇಟಿ ನೀಡುತ್ತಿದ್ದು ವೃತ್ತ ನಿರೀಕ್ಷಕ ಕೆ. ಸಿ. ಪೂವಯ್ಯ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮುಂದಿನ ಒಂದೆರಡು ದಿನಗಳಲ್ಲಿ ಹತ್ಯೆಯ ಹಿಂದಿನ ಸಂಪೂರ್ಣ ಚಿತ್ರಣ ಹೊರ ಬೀಳುವ ಸಾಧ್ಯತೆಗಳಿವೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಕಾಪು: ಸ್ಕೂಟಿ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಯುವ ಛಾಯಾಚಿತ್ರಗ್ರಾಹಕ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ