ಪಂಜಿಮಾರು: ಮನೆಗೆ ಸಿಡಿಲು ಬಡಿದು ಹಾನಿ
Team Udayavani, Jun 14, 2019, 6:10 AM IST
ಶಿರ್ವ: ಕಟಪಾಡಿ-ಶಿರ್ವ ಮುಖ್ಯರಸ್ತೆಯ ಪಂಜಿಮಾರು ಫಲ್ಕೆ ಗಿಲ್ಬರ್ಟ್ ಡಿ’ಸೋಜಾ ಅವರ ಮನೆಗೆ ಬುಧವಾರ ರಾತ್ರಿ 11.30ರ ವೇಳೆಗೆ ಸಿಡಿಲು ಬಡಿದು ಹಾನಿ ಸಂಭವಿಸಿದೆ.
ಸಿಡಿಲಿನ ರಭಸಕ್ಕೆ ಮನೆಯ ಮನೆಯ ಫ್ಯಾನ್ಗಳು,ವಿದ್ಯುತ್ ಮೀಟರ್, ಸ್ವಿಚ್ ಬೋರ್ಡ್ ಹಾಗೂ ವಿದ್ಯುತ್ ಪಂಪ್ನ ಸ್ಟಾರ್ಟರ್ಸುಟ್ಟು ಹೋಗಿದೆ . ಮನೆಯ ಮೇಲ್ಛಾವಣಿಯ ಗೋಡೆ ಒಡೆದು ಬಿರುಕು ಬಿಟ್ಟಿದೆ. ಮನೆಯ ವಿದ್ಯುತ್ ವಯರಿಂಗ್ ಸಂಪೂರ್ಣಸುಟ್ಟು ಹೋಗಿದ್ದು ವಿದ್ಯುತ್ ಉಪಕರಣಗಳು ಪುಡಿ ಪುಡಿಯಾಗಿ ಸುಮಾರು 2 ಲಕ್ಷ ರೂ.ಹಾನಿ ಸಂಭವಿಸಿದೆ. ಮನೆಯ ಕೆಳಅಂತಸ್ತಿನಲ್ಲಿ ತಂದೆ, ತಾಯಿ ಮಲಗಿದ್ದರು. ಮಹಡಿಯಲ್ಲಿ ಮಗ, ಸೊಸೆ ಮತ್ತು ಮಗು ಮಲಗಿದ್ದ ಕೋಣೆಗೆ ಸಿಡಿಲು ಬಿದ್ದಿದ್ದು ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಕಾಪು ತಹಶೀಲ್ದಾರ್ ಸಂತೋಷ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಶಿರ್ವ ಗ್ರಾಮ ಕರಣಿಕ ವಿಜಯ್ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಶಿರ್ವ ಗ್ರಾ.ಪಂ. ಸದಸ್ಯ ಕೆ.ಆರ್.ಪಾಟ್ಕರ್, ವೈಲೆಟ್ ಕ್ಯಾಸ್ತಲಿನೊ ಮತ್ತಿತರ ಮುಖಂಡರು ಮನೆಗೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ