ಪರ್ತಗಾಳಿ ಶ್ರೀ ವಿದ್ಯಾಧಿರಾಜತೀರ್ಥ ಸ್ವಾಮಿಗಳು ಅಸ್ತಂಗತ


Team Udayavani, Jul 19, 2021, 3:36 PM IST

pardhagali-sri-vidyadhirajatirtha-wadera-swamy-passed-away

ಉಡುಪಿ :  ಪರ್ತಗಾಳಿ ಶ್ರೀ ವಿದ್ಯಾಧಿರಾಜತೀರ್ಥ ವಡೇರ ಸ್ವಾಮಿಗಳು ಇಂದು(ಸೋಮವಾರ, ಜುಲೈ 19) ಇಹಲೋಕ ತ್ಯಜಿಸಿ ವಿಷ್ಣು ಪಾದ ಸೇರಿದ್ದಾರೆ.

ಇದನ್ನೂ ಓದಿ :  ಕಟೀಲ್ ಆಡಿಯೋ ತಮ್ಮದಲ್ಲ ಎಂದಿರುವಾಗ ಈ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ:ಅಶ್ವತ್ಥ್ ನಾರಾಯಣ್

ಸನ್ಯಾಸ ಸ್ವೀಕರಿಸಿ 54 ವರ್ಷ ಸುಧೀರ್ಘವಾಗಿ ಮಠವನ್ನು, ಮಠದ ಆಡಳಿತದಲ್ಲಿರುವ ದೇವಾಲಯಗಳನ್ನು, ಮಠದ ಲಕ್ಷಾಂತರ  ಶಿಷ್ಯರನ್ನು  ಧಾರ್ಮಿಕವಾಗಿ ಮುನ್ನಡೆಸಿ ಅಪಾರ ಪ್ರಗತಿಗೆ ಕಾರಣರಾಗಿದ್ದ ಶ್ರೀಗಳು ಹೃದಯಾಘಾತದಿಂದ ತಮ್ಮ 76ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಗಂಗೊಳ್ಳಿಯಲ್ಲಿ 3-8-1945ರಲ್ಲಿ ಜನಿಸಿದ ರಾಘವೇಂದ್ರ ಆಚಾರ್ಯ  ಫೇ.26, 1967 ರಲ್ಲಿ ಸನ್ಯಾಸ ಸ್ವಿಕರಿಸಿದ್ದರು. ಅಸೇತು ಹಿಮಾಚಲ ತೀರ್ಥ ಯಾತ್ರೆ ಮಾಡಿದ ಶ್ರೀಗಳು ತಮ್ಮ ಶಿಷ್ಯರ ಸರ್ವತೋಮುಖ ಅಭಿವೃದ್ಧಿಯ ಹೊರತಾಗಿ ಇನ್ನಾವುದನ್ನು ಆಲೋಚಿಸಲೇ ಇಲ್ಲ. ಶಿಸ್ತು, ಸಮಯ ಪಾಲನೆಗೆ ಹೆಸರಾಗಿದ್ದ ಶ್ರೀಗಳು ಶಿಷ್ಯರನ್ನು ಸ್ವಿಕರಿಸಿ ಅವರಿಗೆ ಮಾರ್ಗದರ್ಶನ ಮಾಡಿದ ಶ್ರೀಗಳು ಕರ್ತವ್ಯ ಮುಗಿಯಿತು ಎಂಬಂತೆ ಹೊರಟು ಹೋಗಿದ್ದು ಶಿಷ್ಯರಿಗೆ ಮತ್ತು ಅವರ ಬಂಧುಗಳಿಗೆ ಅಪಾರ ದುಃಖ ಉಂಟುಮಾಡಿದೆ.

ಮೂಲತಃ ಉಡುಪಿ ಜಿಲ್ಲೆಯ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ಶ್ರೀ ವೇಂಕಟರಮಣ ದೇವಾಲಯದ ಅರ್ಚಕ ಮನೆತನದವರು. ಶ್ರೀ ಲಕ್ಷ್ಮೀನಾರಾಯಣ ಆಚಾರ್ಯ ಮತ್ತ ಶ್ರೀಮತಿ ದಂಪತಿಯ ದ್ವಿತೀಯ ಪುತ್ರರಾಗಿ ಜನಿಸಿದರು.

ಅವರ ಪೂರ್ವಾಶ್ರಮದ ಹೆಸರು ರಾಘವೇಂದ್ರ. ಗಂಗೊಳ್ಳಿಯಲ್ಲಿ ಪ್ರಾಥಮಿಕ, ಮಾಧ್ಯಮ ಶಿಕ್ಷಣ ಪಡೆದು ಕುಂದಾಪುರದ ಭಂಡಾರಕರ ಕಾಲೇಜಿನಲ್ಲಿ ಓದುವಾಗ ಶ್ರೀ ದ್ವಾರಕಾನಾಥ ಶ್ರೀಗಳ ಶಿಷ್ಯತ್ವ ಹೊಂದುವ ಅವಕಾಶ ಬಂತು. ಗುರುವರ್ಯರ ಆದೇಶ ಕೇಳಿ ಖುಷಿಯಿಂದ ಸನ್ಯಾಸಾಶ್ರಮ ಸ್ವೀಕಾರಕ್ಕೆ ಒಪ್ಪಿದರು. ಮುಂಬಯಿ ವಡಾಲಾದ ದ್ವಾರಕಾನಾಥ ಭವನದಲ್ಲಿ ಅವರು ಶ್ರೀ ದ್ವಾರಕಾನಾಥ ಸ್ವಾಮಿಗಳಿಂದ  ಫೇ.26, 1967 ರಲ್ಲಿ ಸನ್ಯಾಸ ದೀಕ್ಷೆ ಪಡೆದು ಶ್ರೀ ಮದ್ ವಿದ್ಯಾಧಿರಾಜ ತೀರ್ಥ ಸ್ವಾಮಿಗಳಾಗಿ ನಾಮಕರಣಗೊಂಡರು.

ಸುಮಾರು ಐದು ದಶಕಗಳ ಸನ್ಯಾಸಾಶ್ರಮದಲ್ಲಿದ್ದ ಅವರು ಶ್ರೀಗಳು  1971 ರಲ್ಲಿ ಗೋಕರ್ಣ ಪರ್ಥಗಾಳಿ ಮಠದ ಪೀಠಾಧಿಪತಿಗಳಾಗಿದ್ದರು. ಮೂಲತಃ ಉಡಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯವರಾದ ಶ್ರೀಗಳು ಇದೇ ಜುಲೈ 28 ರಂದು ಪರ್ತಗಾಳಿ ಮಠದಲ್ಲಿ ಚಾತುರ್ಮಾಸ್ಯ ವ್ರತ ಸ್ವೀಕಾರ ಮಾಡುವವರಿದ್ದರು.
ಶ್ರೀಗಳು ತಮ್ಮ ಅವಧಿಯಲ್ಲಿ ಪರ್ತಗಾಳಿ ಮೂಲಮಠದ ಜೊತೆಗೆ ಶಾಖಾ ಮಠಗಳ ಅಭಿವೃದ್ಧಿ ಮಾಡಿದ್ದರು. ಭಕ್ತರ ಪ್ರೀತಿಗೆ ಪಾತ್ರರಾಗಿದ್ದರು. ಅವರ ನಿಧನ ಅಪಾರ ಭಕ್ತರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.

ಇದನ್ನೂ ಓದಿ :  ಕಟೀಲ್ ಆಡಿಯೋ ತಮ್ಮದಲ್ಲ ಎಂದಿರುವಾಗ ಈ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ:ಅಶ್ವತ್ಥ್ ನಾರಾಯಣ್

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.