“ದುಡಿಮೆಯ ಸ್ವಲ್ಪ ಅಂಶ ಬಡಜನರ ಸೇವೆಗೆ ಮೀಸಲಿಡಿ’
Team Udayavani, Sep 2, 2017, 7:25 AM IST
ಉಡುಪಿ: ಗಣಪತಿಯ ಸೇವೆ ಯೊಂದಿಗೆ ಸಮಾಜಕ್ಕೆ ಪ್ರಯೋಜನ ಕಾರಿಯಾಗುವಂತ ಕೆಲಸವಾಗಬೇಕು.ಮಾತ್ರವಲ್ಲದೆ ತಮ್ಮ ದುಡಿಮೆಯಲ್ಲಿ ಸ್ವಲ್ಪ ಅಂಶವನ್ನು ಬಡಜನರ ಸೇವೆಗೆ ಮೀಸಲು ಇಡಬೇಕು. ಆಗ ಗಣಪತಿಯ ಪರಿಪೂರ್ಣ ಅನುಗ್ರಹ ನಮ್ಮ ಮೇಲೆ ಇರುತ್ತದೆ ಎಂದು ಮೈಸೂರಿನ ಖ್ಯಾತ ಹೃದ್ರೋಗ ತಜ್ಞ ಡಾ| ಪಿ.ಹರಿದಾಸ ಉಪಾಧ್ಯ ಹೇಳಿದರು.
ಅವರು ಸೆ. 31ರಂದು ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಸುವರ್ಣ ಮಹೋತ್ಸವದ ಸುವರ್ಣ ಸಂಗಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಣಿಪಾಲ ವಿಶ್ವವಿದ್ಯಾಲಯದ ಉಪಕುಲಪತಿ ಡಾ| ಜಿ.ಕೆ.ಪ್ರಭು ಅಧ್ಯಕ್ಷತೆ ವಹಿಸಿದರು.
ಮಾಜಿ ಶಾಸಕ ಲಾಲಾಜಿ ಮೆಂಡನ್, ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ , ಬೆಂಗಳೂರು ಉದ್ಯಮಿ ಪಿ. ಕೃಷ್ಣಮೂರ್ತಿ ಉಪಾಧ್ಯ, ರೋಟರಿಯ ಬಾಲಕೃಷ್ಣ ಮಧ್ದೋಡಿ, ಸುವರ್ಣ ಮಹೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಶ್ರೀನಿವಾಸ ಉಪಾಧ್ಯ, ಕಬ್ಯಾಡಿ ಜಯರಾಮ ಆಚಾರ್ಯ, ಪಿ.ಬಾಲಕೃಷ್ಣ ನಾಯಕ್, ದಿನೇಶ ಶೆಟ್ಟಿ ಹೆರ್ಗ, ಸಂಚಾಲಕ ದಿಲೀಪ್ ರಾಜ್ ಹೆಗ್ಡೆ, ಉಪಾಧ್ಯಕ್ಷ ಸುಬ್ರಾಯ ಆಚಾರ್ಯ, ಕೋಶಾಧಿಕಾರಿ ಪ್ರಮೋದ ಕುಮಾರ್, ಆಚರಣಾ ಸಮಿತಿಯ ಕಾರ್ಯದರ್ಶಿ ಮನೋ ಜ್ ಹೆಗ್ಡೆ ಉಪಸ್ಥಿತರಿದ್ದರು.ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿದರು. ಉಪಾಧ್ಯಕ್ಷ ಶಿವರಾಮ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕ ಸಂಪರ್ಕ ಅಧಿಕಾರಿ ದಿನೇಶ ಹೆಗ್ಡೆ ಆತ್ರಾಡಿ ಪ್ರಸ್ತಾವನೆ ಗೈದರು. ಅಧ್ಯಕ್ಷ ಮಹೇಶ ಠಾಕೂರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ