ಪರ್ಕಳ ಶ್ರೀ ಗಣೇಶೋತ್ಸವ: ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
Team Udayavani, Aug 27, 2017, 11:30 AM IST
ಉಡುಪಿ: ಮಣಿಪಾಲ-ಪರ್ಕಳ ರಸ್ತೆ ವಿಸ್ತರಣೆಗೆ ರಾಜ್ಯ ಸರಕಾರದ ಸಹಕಾರವಿದೆ. ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಸುವರ್ಣ ಸಂಗಮದ ಅಂಗವಾಗಿ
9 ದಿನಗಳ ಕಾಲ ನಡೆಯುವ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಉದ್ಯಾನವನಕ್ಕೆ ಸ್ಥಳ – ಭರವಸೆ
ಹೆಚ್ಚು ಧಾರ್ಮಿಕ ಭಾವನೆಯುಳ್ಳ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆ ನಡೆಯುವ ಜಿಲ್ಲೆ ಉಡುಪಿ. ಈ ಗಣೇಶೋತ್ಸವ ಸಮಿತಿ ಸಾರ್ವಜನಿಕ ಉದ್ಯಾನವನ ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದು, ಮನವಿ ಕೊಟ್ಟಲ್ಲಿ ಸ್ಥಳ ಒದಗಿಸಲು ಪ್ರಯತ್ನಿಸುವ ಭರವಸೆ ನೀಡಿದರು.
ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಪತಿ ಡಾ| ಎಚ್.ಎಸ್. ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಗರಸಭೆ ಸದಸ್ಯೆ ಸುಮಿತ್ರಾ ನಾಯಕ್, ಮಂಗಳೂರು ಕೆಎಂಎಫ್ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ, ಕೈಗಾರಿಕೋದ್ಯಮಿ ಕೆ. ಬಾಲಕೃಷ್ಣ ಶೆಣೈ, ಸುವರ್ಣ ಮಹೋತ್ಸವ ಸಮಿತಿ ಗೌರವಾಧ್ಯಕ್ಷರಾದ ಶ್ರೀನಿವಾಸ ಉಪಾಧ್ಯ, ಪಿ. ಬಾಲಕೃಷ್ಣ ನಾಯಕ್, ದಿನೇಶ ಶೆಟ್ಟಿ ಹೆರ್ಗ, ಸಂಚಾಲಕ ದೀಲಿಪ್ರಾಜ್ ಹೆಗ್ಡೆ, ಉಪಾಧ್ಯಕ್ಷ ಸುರೇಶ್ ಶಾನುಭಾಗ್ ಉಪಸ್ಥಿತರಿದ್ದರು.
ಅಧ್ಯಕ್ಷ ಮಹೇಶ ಠಾಕೂರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪ್ರಸ್ತಾವನೆಗೈದರು. ಶಂಕರ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಪ್ರಮೋದ ಕುಮಾರ್ ವಂದಿಸಿದರು.
ಇಂದು ಪರ್ಕಳಕ್ಕೆ ತಿಲಕ್ ಮೊಮ್ಮಗ
ಬಾಲಗಂಗಾಧರ ತಿಲಕ್ ಅವರ ಮೊಮ್ಮಗ ಪುಣೆ ತಿಲಕ್ ಮಹಾರಾಷ್ಟ್ರ ವಿದ್ಯಾಪೀಠದ ಕುಲಪತಿ ಡಾ| ದೀಪಕ್ ಜೆ. ತಿಲಕ್ ಅವರು ಆ. 27ರ ಸಂಜೆ 5.30ಕ್ಕೆ ಪಾಲ್ಗೊಂಡು ಮಾತನಾಡುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ