ಸಮಾಜೋದ್ಧಾರಕ್ಕೆ ಶ್ರೀಕೃಷ್ಣ ಮಂತ್ರ ಪಠನವಾಗಲಿ

ಶ್ರೀಕೃಷ್ಣ ಜನ್ಮಾಷ್ಟಮಿ: ಪರ್ಯಾಯ ಶ್ರೀಗಳ ಸಂದೇಶ

Team Udayavani, Aug 23, 2019, 8:08 PM IST

Palimaru-Swaniji-7263

ಶ್ರೀಕೃಷ್ಣ ಮಥುರಾ ಪಟ್ಟಣದಲ್ಲಿ ಜನಿಸಿದ. ಶರೀರವೇ ಮಥುರಾ ಪಟ್ಟಣ. ಶರೀರ ಇದ್ದರೆ ಎಲ್ಲವೂ ಇರುತ್ತದೆ. ಶರೀರದಲ್ಲಿ ದೇವರು ಜನ್ಮತಾಳಲು ಮಥುರಾ ಪಟ್ಟಣವನ್ನು ಬಿಟ್ಟುಕೊಡಬೇಕಷ್ಟೆ. ಹಾಗೆ ಮಾಡಿದರೆ ಆತ ನಮ್ಮ ಜತೆಗೆ ಬರುತ್ತಾನೆ.

ದೇವಕೀ ಎಂದರೆ ದೇವರನ್ನು ಕರೆಯುವವರು. ಆಕೆ ಯಾವಾಗಲೂ ಕರೆಯುತ್ತ ಇರುತ್ತಿದ್ದಳು. ಆಕೆಗೆ ಎಲ್ಲವೂ ಸಿಕ್ಕಿತ್ತು, ದೇವರು ಮಾತ್ರ ಸಿಕ್ಕಿರಲಿಲ್ಲ. ಅತಿಥಿಗಳು ನಮ್ಮ ಮನೆಗೆ ಬರಬೇಕಾದರೆ ಒಂದು ಸಲ ಕರೆದರೆ ಬರುತ್ತಾರಾ? ಮಂತ್ರಿ, ಮುಖ್ಯಮಂತ್ರಿ, ಪ್ರಧಾನಿಗಳು ಬರಬೇಕಾದರೆ ಅನೇಕ ಬಾರಿ ಕರೆಯಬೇಕು. ನಮ್ಮ ಪ್ರಯತ್ನ ನಿಲ್ಲಿಸಬಾರದು.

ಲೌಕಿಕ ವ್ಯಕ್ತಿಗಳಿಗೇ ಹೀಗಿರುವಾಗ ಭಗವಂತನನ್ನು ಕರೆಯುತ್ತಿರಲೇಬೇಕು. ದೇವಕಿ ಜತೆ ವಸುದೇವನೂ ಬೇಕು. ವಸು=ಸಂಪತ್ತು. ಶುದ್ಧವಾದ ಸಂಪತ್ತು. ಮನಸ್ಸು ವಸು ಆಗಬೇಕು. ಅದಕ್ಕಿಂತ ದೊಡ್ಡ ಸಂಪತ್ತು ಇನ್ನೊಂದಿಲ್ಲ. ಎಲ್ಲರೂ ಪ್ರೀತಿಯನ್ನು ಬಯಸುತ್ತಾರೆ.

ಪ್ರೀತಿಯಿಂದ ಕೊಟ್ಟರೆ ಸಣ್ಣ ವಸ್ತುವೂ ದೊಡ್ಡದಾಗುತ್ತದೆ. ಪ್ರೀತಿ ಇಲ್ಲದಿದ್ದರೆ ದೊಡ್ಡ ವಸ್ತುವೂ ಸಣ್ಣದಾಗುತ್ತದೆ. ವಸುದೇವನಲ್ಲಿದ್ದದ್ದು ನಿಷ್ಕಲ್ಮಶ ಮನಸ್ಸು. ದೇವರ ಮೇಲೆ ಅಪಾರ ಭಕ್ತಿ ಇತ್ತು. ಶುದ್ಧ ಮನಸ್ಸು ಇತ್ತು. ಬೇರೆ ವಸ್ತುಗಳ ಬಗ್ಗೆ ಅನಪೇಕ್ಷೆ ಇತ್ತು. ವಸುದೇವ ದೇವಕಿಯರ ಕರೆಗೆ ಅಷ್ಟಮಿ ಮಧ್ಯರಾತ್ರಿ ಭಗವಂತ ಬಂದ. ಎಲ್ಲ ಪಾಪಗಳನ್ನು ನಾಶ ಮಾಡುವ ಜಯಂತಿಯಂದು ಬರುತ್ತಾನೆ.

ಶ್ರೀಕೃಷ್ಣ ಭೂಮಿಯಲ್ಲಿ ಅವತರಿಸಿದ ಈ ಸಂದರ್ಭ ಮಳೆ, ಬೆಳೆ ಸಮಸ್ಯೆಗಳು ನೀಗಲಿ. ಎಲ್ಲರೂ ಆನಂದ ಪಡಲಿ. ರೈತರು ಸಮೃದ್ಧರಾಗಲಿ, ಲೋಕಃ ಸಮಸ್ತಾ ಸುಖೀನೋ ಭವಂತು. ಎಲ್ಲರೂ ಶ್ರೀ ಕೃಷ್ಣಾಯ ನಮಃ ಎಂದು ನೂರು ಬಾರಿ ನಿತ್ಯವೂ ಹೇಳಿ. ಎಲ್ಲರ ಮನಸ್ಸನ್ನು ಆತ ಪ್ರವೇಶ ಮಾಡಿ ಭಾರತ ವಿಶ್ವಗುರುವಾಗುವಂತೆ ಆಗಲಿ ಎಂದು ಹಾರೈಸುತ್ತೇವೆ.
– ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಪರ್ಯಾಯ ಶ್ರೀ ಪಲಿಮಾರು ಮಠ, ಶ್ರೀಕೃಷ್ಣಮಠ ಉಡುಪಿ

ಅರಿಷಡ್ವೈರಿ ಸಂಹಾರಕ್ಕೆ ಶ್ರೀಕೃಷ್ಣಾಗಮನ
ವಸುದೇವ ದೇವಕಿಯರ ಸಂಯೋಗದಿಂದ ಶ್ರೀಕೃಷ್ಣ ಅವತರಿಸುತ್ತಾನೆ ಮತ್ತು ದುಷ್ಟ ಕಂಸಾದಿಗಳನ್ನು ಸಂಹರಿಸುತ್ತಾನೆ. ಇದರರ್ಥ ಶ್ರೀಕೃಷ್ಣ ನಮ್ಮೊಳಗಿರುವ ಆರು ಬಗೆಯ ವೈರಿಗಳನ್ನು (ಅರಿಷಡ್ವೈರಿ) ಸಂಹರಿಸುತ್ತಾನೆ. ಹೀಗಾದರೆ ಮಾತ್ರ ನಮಗೆ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಶ್ರೀಕೃಷ್ಣ ಜನ್ಮಾಷ್ಟಮಿ ಪರ್ವಕಾಲದಲ್ಲಿ
ನಮ್ಮೊಳಗೆ ಅವತರಿಸುವಂತೆ ವಿಶೇಷ ಪ್ರಾರ್ಥನೆ ಮಾಡಬೇಕು. ದೇಶ, ಸಮಾಜದಲ್ಲಿರುವ ಕಂಸಾದಿಗಳನ್ನು ಸಂಹರಿಸಬೇಕು.

– ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಕಿರಿಯ ಯತಿ, ಪರ್ಯಾಯ ಶ್ರೀ ಪಲಿಮಾರು ಮಠ, ಶ್ರೀಕೃಷ್ಣಮಠ, ಉಡುಪಿ

ಟಾಪ್ ನ್ಯೂಸ್

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.