ಅದಮಾರು ಶ್ರೀಗಳ ಪರ್ಯಾಯ ಆರಂಭ

ಶ್ರೀ ಈಶಪ್ರಿಯತೀರ್ಥರಿಂದ ಸರ್ವಜ್ಞ ಪೀಠಾರೋಹಣ

Team Udayavani, Jan 19, 2020, 7:00 AM IST

meg-37

ಅದಮಾರು ಹಿರಿಯ ಶ್ರೀಗಳಿಂದ ಗುರು ಪರಂಪರೆ ಅನುಸರಣೆ ಮೊದಲು ತಾನು ಕುಳಿತು ಶಿಷ್ಯನಿಗೆ ಪಟ್ಟ ಹಸ್ತಾಂತರ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಪರ್ಯಾಯ ಉತ್ಸವದಲ್ಲಿ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶನಿವಾರ ಮುಂಜಾವ ಶ್ರೀಕೃಷ್ಣ ದೇವರ ಪೂಜಾಕೈಂಕರ್ಯದ ಸಂಕಲ್ಪ ಮಾಡಿದರು. 1522ರಲ್ಲಿ ಎರಡು ವರ್ಷಗಳ ಪರ್ಯಾಯ ಪೂಜಾ ಕ್ರಮ ಆರಂಭವಾದ ಬಳಿಕ ಈಗ 250ನೆಯ ಪರ್ಯಾಯ ಪೂಜಾವಧಿಯ ಅಧಿಕಾರ ಹಸ್ತಾಂತರ ಮೊದಲಾದ ಧಾರ್ಮಿಕ ವಿಧಿಗಳು ನಡೆದವು.

ಶುಕ್ರವಾರ ಮಧ್ಯರಾತ್ರಿ ಬಳಿಕ ಕಾಪು ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ ಬಂದ ಶ್ರೀ ಈಶಪ್ರಿಯ ತೀರ್ಥರು ಉಡುಪಿ ಜೋಡುಕಟ್ಟೆ ಮಂಟಪದಲ್ಲಿ ಪಟ್ಟದ ದೇವರ ಪೂಜೆ ನಡೆಸಿದರು. ಬಳಿಕ ಪರ್ಯಾಯ ಮೆರವಣಿಗೆ ಆರಂಭಗೊಂಡಿತು. ಇದರ ಜತೆಗೆ ವಿವಿಧ ಮಠಾಧೀಶರೂ ಮೆರವಣಿಗೆಯಲ್ಲಿ ಸಾಗಿಬಂದರು. ಮೆರವಣಿಗೆ ಶನಿವಾರ ಬೆಳಗ್ಗೆ ರಥಬೀದಿಯನ್ನು ತಲುಪಿದಾಗ ಮೇನೆಯಿಂದ ಇಳಿದ ಶ್ರೀಪಾದರು ಹಾಸುಗಂಬಳಿಯ ಮೇಲೆ ನಡೆದುಕೊಂಡು ಬಂದು ಕನಕನಕಿಂಡಿಯಲ್ಲಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಅಲ್ಲಿ ಶಿಬರೂರು ವಾಸುದೇವ ಆಚಾರ್ಯರು ಎರಡು ವರ್ಷಗಳ ಪರ್ಯಾಯ ಪೂಜಾ ವ್ರತವನ್ನು ಕೈಗೊಳ್ಳುವ ಸಂಕಲ್ಪವನ್ನು ಸ್ವಾಮೀಜಿಯವರಿಂದ ಮಾಡಿಸಿದರು. ನವಗ್ರಹದಾನಗಳನ್ನು ನೀಡಲಾಯಿತು. ಅಲ್ಲಿಂದ ಶ್ರೀಪಾದರು ಶ್ರೀ ಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ ದೇಗುಲಗಳಿಗೆ ತೆರಳಿ ದೇವರ ದರ್ಶನ ಪಡೆದರು. ಅನಂತೇಶ್ವರ ದೇವಸ್ಥಾನದೊಳಗೆ ಇರುವ ಮಧ್ವರು ಕೊನೆಯದಾಗಿ ಕಾಣಿಸಿಕೊಂಡ ಸ್ಥಳದಲ್ಲಿ ಪ್ರಾರ್ಥಿಸಿದರು. ಶ್ರೀಪಾದರ ದೇವರ ದರ್ಶನದ ವೇಳೆ ಚಂದ್ರಮೌಳೀಶ್ವರ ಮತ್ತು ಅನಂತೇಶ್ವರನ ಸನ್ನಿಧಿಯಲ್ಲಿ ಆಯಾ ದೇವತಾ ಧ್ಯಾನಶ್ಲೋಕಗಳನ್ನು ಅರ್ಚಕರು ಪಠಿಸಿದರು.

ಪಲಿಮಾರು ಶ್ರೀಗಳಿಂದ ನೈರ್ಮಾಲ್ಯ ವಿಸರ್ಜನ ಪೂಜೆ
ಶ್ರೀಕೃಷ್ಣ ಮಠದಲ್ಲಿ ನಿರ್ಗಮನ ಪರ್ಯಾಯ ಪೀಠಾಧೀಶ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಶುಕ್ರವಾರ ಮಧ್ಯರಾತ್ರಿಯಿಂದಲೇ ಪರ್ಯಾಯ ಪೀಠದಲ್ಲಿ ಕುಳಿತುಕೊಂಡು ಭಕ್ತರಿಗೆ ಪ್ರಸಾದ ವಿತರಿಸಿ ಪ್ರಾತಃಕಾಲ ಸ್ನಾನ ಮಾಡಿ ಶ್ರೀಕೃಷ್ಣನಿಗೆ ನೈರ್ಮಾಲ್ಯ ವಿಸರ್ಜನೆ ಪೂಜೆ ನಡೆಸಿದರು. ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥರೂ ಉಪಸ್ಥಿತರಿದ್ದು, ಪೂಜೆಗೆ ಸಹಕರಿಸಿದರು.

ಅದಮಾರು ಕಿರಿಯ ಶ್ರೀಗಳಿಗೆ ಸ್ವಾಗತ
ಶ್ರೀ ಈಶಪ್ರಿಯತೀರ್ಥರು ಶ್ರೀಕೃಷ್ಣ ಮಠವನ್ನು ಪ್ರವೇಶಿಸುವಾಗ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಇದಿರುಗೊಂಡು ಮಠದೊಳಗೆ ಕರೆದೊಯ್ದರು. ಮಧ್ವಸರೋವರದಲ್ಲಿ ಪಾದಪ್ರಕ್ಷಾಲನ ನಡೆಸಿದ ಬಳಿಕ ದೇವರ ದರ್ಶನವನ್ನು ಮಾಡಿಸಿದರು. ಶ್ರೀಕೃಷ್ಣಮಠದ ಗರ್ಭಗುಡಿ ಹೊರಗೆ ಇರುವ ಆಚಾರ್ಯ ಮಧ್ವರ ಪ್ರತಿಮೆ ಎದುರು ಪಲಿಮಾರು ಮಠಾಧೀಶರು ಅಕ್ಷಯಪಾತ್ರೆ, ಬೀಗದ ಕೀಲಿಗಳನ್ನು ಅದಮಾರು ಮಠದ ಹಿರಿಯ ಮತ್ತು ಕಿರಿಯ ಶ್ರೀಗಳಿಗೆ ಹಸ್ತಾಂತರಿಸಿದರು.

ನೈರ್ಮಾಲ್ಯ ವಿಸರ್ಜನೆ ಪೂಜೆಯ ಬಳಿಕ ಉಷಃಕಾಲ ಪೂಜೆ, ಪಂಚಾಮೃತ ಅಭಿಷೇಕ, ಕಲಶ ಪೂಜೆಯೇ ಮೊದಲಾದ ವಿಧಿಗಳನ್ನು ಇತರ ಮಠಾಧೀಶರು ನಡೆಸಿದರೆ, ಪರ್ಯಾಯ ಪೀಠಸ್ಥ ಶ್ರೀ ಈಶಪ್ರಿಯತೀರ್ಥರು ಅರ್ಚನೆ, ಮಹಾಪೂಜೆಗಳನ್ನು ಪ್ರಥಮ ಬಾರಿಗೆ ನಡೆಸಿದರು. ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು.

ಸರ್ವಜ್ಞ ಪೀಠಾರೋಹಣ
ಸರ್ವಜ್ಞ ಪೀಠಾರೋಹಣ ಮಾಡುವ ಸಂದರ್ಭದಲ್ಲಿ ಮೊದಲಿಗೆ ಪಲಿಮಾರು ಶ್ರೀಪಾದರು ಅದಮಾರು ಹಿರಿಯ ಶ್ರೀಗಳನ್ನು ಪೀಠದಲ್ಲಿ ಕುಳ್ಳಿರಿಸಿದರು. ಬಳಿಕ ಹಿರಿಯ ಶ್ರೀಗಳು ತಮ್ಮ ಪಟ್ಟಶಿಷ್ಯ ಶ್ರೀ ಈಶಪ್ರಿಯತೀರ್ಥರನ್ನು ಪೀಠದಲ್ಲಿ ಕುಳ್ಳಿರಿಸಿದರು. ಅಲ್ಲಿಂದ ನೇರವಾಗಿ ಬಡಗುಮಾಳಿಗೆಯಲ್ಲಿ ನಿರ್ಮಿಸಲಾದ ಅರಳು ಗದ್ದಿಗೆಯಲ್ಲಿ ವಿವಿಧ ಮಠಾಧೀಶರು ಅಲಂಕೃತರಾದರು. ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು,

ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥರು, ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥರು, ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥರು ಮತ್ತು ಶ್ರೀ ವಿದ್ಯಾರಾಜೇಶ್ವರತೀರ್ಥರಿಗೆ ಶ್ರೀ ಈಶಪ್ರಿಯತೀರ್ಥರು ಗಂಧಾದಿ ಉಪಚಾರಗಳನ್ನು ಮಾಡಿದರು. ಇತರ ಮಠಾಧೀಶರು ಶ್ರೀ ಈಶಪ್ರಿಯತೀರ್ಥರಿಗೆ ಪಟ್ಟದ ಕಾಣಿಕೆಯನ್ನು ಸಮರ್ಪಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.