ಜಿಲ್ಲೆಯಲ್ಲಿ ಪೌತಿ ಆಂದೋಲನ ಆರಂಭ

ಮನೆ ಬಾಗಿಲಿಗೆ ಬಂದು ಅಧಿಕಾರಿಗಳಿಂದ ದಾಖಲೆ ವಿಲೇವಾರಿ

Team Udayavani, Nov 22, 2020, 1:06 PM IST

udpi-tdy-1

ಕೋಟ, ನ. 21:  ಪಹಣಿಯಲ್ಲಿ  ದಾಖಲಿಸಿರುವ ಖಾತೆದಾರ ಮೃತಪಟ್ಟ ಅನಂತರ  ಅವರ ಉತ್ತರಾಧಿಕಾರಿಗಳು ಹೆಸರು  ತಿದ್ದುಪಡಿ  ಮಾಡದಿರುವುದರಿಂದ ಆಸ್ತಿ ಮುಂದಿನ ತಲೆಮಾರಿಗೆ ವರ್ಗಾವಣೆಯಾಗದೆ ಉಳಿದುಕೊಳ್ಳುವುದು ಹಾಗೂ ಇದರಿಂದಾಗಿ ಆ ಕುಟುಂಬ ಸರಕಾರದ ಸೌಲಭ್ಯಗಳಿಂದ ವಂಚಿತವಾಗುವ ಲಕ್ಷಾಂತರ ಪ್ರಕರಣ ಗಳು ರಾಜ್ಯದಲ್ಲಿವೆ.

ಇಂತಹ ದೀರ್ಘ‌ ಕಾಲಿಕ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪೌತಿ ಅಭಿಯಾನ ಯೋಜನೆಯನ್ನು ಜಾರಿಗೆ ತಂದಿದೆ.  ಇದೀಗ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಯೋಜನೆ ಅನುಷ್ಠಾನಗೊಂಡಿದೆ ಮತ್ತು ಈ ರೀತಿಯ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಹಾಗೂ ಮನೆಗಳಿಗೆ ಭೇಟಿ ನೀಡಿ ದಾಖಲೆ ಸಂಗ್ರಹಿಸುವಲ್ಲಿ  ಅಧಿಕಾರಿಗಳು ತೊಡಗಿಸಿಕೊಂಡಿದ್ದಾರೆ.

ವರ್ಗಾವಣೆ ಹೇಗೆ? :  ಮುಂದಿನ ತಲೆಮಾರಿಗೆ ವರ್ಗಾವಣೆ ಯಾಗದೆ ಉಳಿದುಕೊಂಡ  ಪಹಣಿ ಪ್ರಕರಣಗಳು ತಮ್ಮ  ವ್ಯಾಪ್ತಿಯಲ್ಲಿ ಎಷ್ಟಿವೆ ಎನ್ನುವುದನ್ನು ಪತ್ತೆಹಚ್ಚುವ ಕಾರ್ಯವನ್ನು ಸ್ಥಳೀಯ ತಹಶೀಲ್ದಾರರ ಮಾರ್ಗದರ್ಶನದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ಅಧಿಕಾರಿಗಳು ಮಾಡುತ್ತಾರೆ. ಜನರೇ ನೇರವಾಗಿ ತಮ್ಮ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿದರೂ ಪರಿಗಣಿಸಲಾಗುತ್ತದೆ. ಅನಂತರ ಇವುಗಳನ್ನು ಮೂರು ಹಂತವಾಗಿ ವಿಭಾಗಿಸಿ ಸುಲಭದಲ್ಲಿ ಇತ್ಯರ್ಥ ಪಡಿಸುವ ಪ್ರಕರಣಗಳನ್ನು ಮೊದಲ  ಹಂತದಲ್ಲಿ ಕೈಗೆತ್ತಿಕೊಂಡು ಸೂಕ್ತ ದಾಖಲೆ ಗಳನ್ನು ಸಂಗ್ರಹಿಸುತ್ತಾರೆ.

ಮನೆ ಬಾಗಿಲಿಗೆ ಅಧಿಕಾರಿಗಳು :  ಕಚೇರಿಗಳಿಗೆ ಬರಲು ಸಾಮರ್ಥ್ಯ ವಿಲ್ಲದ ಕುಟುಂಬಗಳನ್ನು ಗುರುತಿಸಿ ನೇರವಾಗಿ ಅವರ ಮನೆಗಳಿಗೆ ತೆರಳಿ ದಾಖಲೆ  ಪತ್ರಗಳನ್ನು  ಪಡೆದು ವಾರಸುದಾರರಿಗೆ ಆಸ್ತಿ ವರ್ಗಾವಣೆಗೊಳಿಸುವ ಪ್ರಕ್ರಿಯೆ ನಡೆಸುತ್ತಾರೆ ಹಾಗೂ ಅಗತ್ಯ ದಾಖಲೆಗಳಿಲ್ಲದ ಕುಟುಂಬಗಳಿಗೆ ನ್ಯಾಯಾಲಯದ ಮೂಲಕ  ದಾಖಲೆಗಳನ್ನು ಪಡೆದು ಹಾಜರುಪಡಿಸು ವಂತೆ ತಿಳಿಸಲಾಗುತ್ತದೆ. ಆದರೆ ನ್ಯಾಯಾಲಯದಲ್ಲಿ ವಿವಾದ, ವೀಲುನಾಮೆ ಮುಂತಾದ  ಪ್ರಕರಣಗಳನ್ನು ಇಲ್ಲಿ ಕೈಗೆತ್ತಿ ಕೊಳ್ಳಲಾಗುವುದಿಲ್ಲ.

ಜಿಲ್ಲೆಯಲ್ಲಿ ಶುರು  : ಕಂದಾಯ ಇಲಾಖೆಗೆ ಸಂಬಂಧಿಸಿದ ಕರ್ತವ್ಯ ಪಾಲನೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿರುವ ಉಡುಪಿ ಜಿಲ್ಲೆಯಲ್ಲಿ  ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರ ಮಾರ್ಗದರ್ಶನದಂತೆ ಜಿಲ್ಲಾದ್ಯಂತ  ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ. ಸೂಕ್ತ ದಾಖಲೆಯ ಕೊರತೆ, ಅಧಿಕಾರಿಗಳ ಅಸಹಕಾರ ಮುಂತಾದ ಕಾರಣಗಳಿಂದ ಹಲವು ಬಾರಿ ಕಚೆೇರಿಗಳಿಗೆ ಅಲೆದಾಡಿದರೂ ಇತ್ಯರ್ಥವಾಗದೆ ಬಾಕಿ ಉಳಿದ ಪಹಣಿ ಪ್ರಕರಣ ಇದೀಗ ಈ ಯೋಜನೆಯಿಂದಾಗಿ ಮನೆಬಾಗಿಲಲ್ಲೇ ಪರಿಹಾರವಾಗುತ್ತಿದೆ.

ಜಿಲ್ಲಾದ್ಯಂತ ಯಶಸ್ಸಿಗೆ ಯತ್ನ :  ಪೌತಿ ಅದಾಲತ್‌ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದ ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಬೇಕು ಎನ್ನುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಸಮಸ್ಯೆ ಇರುವ ನೂರಾರು ಕುಟುಂಬಗಳನ್ನು ಪತ್ತೆ ಹಚ್ಚಿ ಅವರ ಮನೆಗಳಿಗೆ ಭೇಟಿ ನೀಡಿ ಉತ್ತರಾಧಿಕಾರ ವರ್ಗಾಯಿಸುವ ಕಾರ್ಯಚಾಲ್ತಿಯಲ್ಲಿದೆ.ಜಿ.ಜಗದೀಶ್‌, ಜಿಲ್ಲಾಧಿಕಾರಿಗಳು, ಉಡುಪಿ

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.