ಪ್ರವೀಣ್ ಹತ್ಯೆ : ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಪೇಜಾವರ ಶ್ರೀ
Team Udayavani, Jul 27, 2022, 8:47 PM IST
ಉಡುಪಿ : ಪ್ರವೀಣ್ ನೆಟ್ಟಾರು ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥರು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದು, ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ, ಎಚ್ಚೆತ್ತುಕೊಳ್ಳಿ ಎಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಪೇಜಾವರ ಶ್ರೀಗಳು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಂತ ಪ್ರವೀಣ್ ಹತ್ಯೆಯನ್ನು ಉಗ್ರವಾದ ಮಾತುಗಳಿಂದ ನಾವು ಖಂಡಿಸುತ್ತಿದ್ದೇವೆ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಕೃಷ್ಣನಲ್ಲಿ ಪ್ರಾರ್ಥಿಸುತ್ತೇವೆ. ಇತ್ತೀಚೆಗೆ ಈ ತರಹದ ಕೊಲೆಗಳು ರಾಜ್ಯದಲ್ಲಿ ನಡೆಯುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತೆ ಆಗಿದೆ.
ಜನರು ದಂಗೆ ಏಳುವ ಮೊದಲೇ ಸರ್ಕಾರ ಎತ್ತುಕೊಳ್ಳಬೇಕು. ಜನ ವಿಶ್ವಾಸ ಕಳೆದುಕೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ. ತೀವ್ರವಾಗಿರುವ ಕ್ರಮಗಳನ್ನು ಕೈಗೊಳ್ಳಬೇಕು, ನಾವು ಸರಕಾರವನ್ನು ಆಗ್ರಹ ಮಾಡುತ್ತಿದ್ದೇವೆ. ಸಾಲು ಸಾಲು ಹಿಂದೂ ಯುವಕರ ಕೊಲೆಯಾಗುತ್ತಿವೆ. ಯುವಕರ ಸಹನೆ ಕಟ್ಟೆ ಒಡೆಯುವುದು ಸಹಜ. ಕಾರ್ಯಕರ್ತರು ತಮ್ಮ ಸಂಯಮ ಕಳೆದುಕೊಳ್ಳಬಾರದು. ಕಾನೂನನ್ನು ಕೈಗೆತ್ತಿಕೊಳ್ಳದೆ , ಒಗ್ಗಟ್ಟಿನಿಂದ ಕಾನೂನಿನ ರೀತಿಯಲ್ಲಿ ಹೋರಾಟ ಮಾಡಬೇಕು. ನಿಮ್ಮೆಲ್ಲರ ನೋವಿನ ಜೊತೆಯಲ್ಲಿ ನಾವಿದ್ದೇವೆ. ಸಂವಿಧಾನದ ಮೇಲಿರುವ ಗೌರವವನ್ನು ನಾವು ಉಳಿಸಿಕೊಳ್ಳೋಣ. ನ್ಯಾಯಯುತ ಹೋರಾಟಗಾರರನ್ನು ನಿರಂತರವಾಗಿ ಮಾಡೋಣ. ಯತೋ ಧರ್ಮಃ ತಥೋ ಜಯ ಎಂದು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ