ವೃಂದಾವನಸ್ತ ಶ್ರೀಗಳ ಸ್ಮರಣಾರ್ಥ ವಿದ್ಯಾಪೀಠದಲ್ಲಿ ಸವಿತೃಯಾಗ


Team Udayavani, Jan 1, 2020, 1:14 AM IST

savitruyaga

ಬೆಂಗಳೂರು: ವೃಂದಾವನಸ್ತರಾದ ಪೇಜಾವರ ಶ್ರೀ ವಿಶ್ವೇಶತೀರ್ಥರ ಸ್ಮರಣೆಯಲ್ಲಿ ಮಂಗಳವಾರ ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಸವಿತೃಯಾಗ ನೆರವೇರಿತು.

ರವಿವಾರದಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳ ಜತೆಗೆ ಭಜನೆ, ಪಾರಾಯಣ, ಶ್ಲೋಕ ಪಠಣ ನಿರಂತರವಾಗಿ ನಡೆಯು ತ್ತಲೇ ಇದೆ. ವಿದ್ಯಾಪೀಠದ ವಿದ್ಯಾರ್ಥಿಗಳು ಮತ್ತು ವಿದ್ವಾಂಸರು, ಶಿಷ್ಯವೃಂದ ಸೇರಿ ಅಹೋರಾತ್ರಿ ಶಾಸ್ತ್ರ, ಪಾರಾಯಣ, ಭಜನೆಯನ್ನು ಶ್ರೀಗಳ ವೃಂದಾವನದ ಎದುರು ನಡೆಸುತ್ತಿದ್ದಾರೆ.

ಮಂಗಳವಾರ ಸಂಜೆ ಸಾಮಾನ್ಯ ಜಿಜ್ಞಾಸುಗಳಿಗೆ ಶಾಸ್ತ್ರಚರ್ಚೆ, ಸುಧಾ ಉಪನ್ಯಾಸ ಮತ್ತು ಭಗವತ್‌ ಗೀತಾ ಪ್ರವಚನ ನಡೆಯಿತು. ವೃಂದಾವನಕ್ಕೆ ಹಸ್ತೋದಕ, ಸಾರ್ವಜನಿಕರ ಅನ್ನಸಂತರ್ಪಣೆ ನಡೆಯಿತು.

ಮಂಗಳವಾರವೂ ಹರಿದುಬಂದ ಭಕ್ತಸಾಗರ
ಪೇಜಾವರ ಶ್ರೀಗಳ ವೃಂದಾವನ ವೀಕ್ಷಣೆಗೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು, ಶಿಷ್ಯರು ಅಪಾರ ಸಂಖ್ಯೆಯಲ್ಲಿ ಬಂದು ದರ್ಶನ ಪಡೆದರು. ಶ್ರೀಗಳ ವೃಂದಾವನ ವೀಕ್ಷಿಸಲು ಬಂದವರು ಕೂಡ ಸ್ವಲ್ಪ ಕಾಲ ಮಂತ್ರಪಠಣ ಮಾಡುತ್ತಿದ್ದುದು ವಿಶೇಷವಾಗಿತ್ತು. ಭಕ್ತ ವೃಂದ ಶ್ರೀಗಳ ವೃಂದಾವನಕ್ಕೆ ಹೂ, ತುಳಸಿಮಾಲೆ ಮತ್ತು ಹೂಮಾಲೆಗಳನ್ನು ಅರ್ಪಿಸಿದರು.

ವಿಶೇಷ ಆರಾಧನೆ
ವೃಂದಾವನಸ್ತರಾದ ಪೇಜಾವರ ಶ್ರೀಗಳ ಆರಾಧನೆ ಕಾರ್ಯಕ್ರಮ ಜ.29ರಂದು ನಡೆಯಲಿದೆ. ಶ್ರೀಗಳು ವೃಂದಾವನಸ್ತರಾದ 12ನೇ ದಿನ ಮಾಧ್ವ ಪೀಠಾ ಧಿಪತಿಗಳನ್ನು ಆಹ್ವಾನಿಸಲಾಗುತ್ತದೆ. 24 ವಿದ್ವಾಂಸರಿಂದ ವಿಶೇಷವಾಗಿ ಭಗವಂತನ ಆರಾಧನೆ ನಡೆಯಲಿದೆ. ಇದು ಆರಾಧನೆ ಒಂದು ಕ್ರಮವಾಗಿದ್ದು, ಭಗವಂತನ 24 ಮೂರ್ತಿಗಳನ್ನು ಅಲ್ಲಿ ಆವಾಹನೆ ಮಾಡಿ ವಿಶೇಷವಾದ ಸತ್ಕಾರ ನಡೆಯಲಿದೆ.

ಭಕ್ತರಿಗೆ ಪಾದುಕೆ ನೀಡುವ ವ್ಯವಸ್ಥೆ
ವೃಂದಾವನಸ್ತರಾದ ಪೇಜಾವರ ಶ್ರೀಗಳ ಪಾದುಕೆಯನ್ನು ಭಕ್ತರ ಅಪೇಕ್ಷೆಯಂತೆ ನೀಡುವ ವ್ಯವಸ್ಥೆಯನ್ನು ಮಾಡಲಿದ್ದೇವೆ. ಅತಿ ಶೀಘ್ರದಲ್ಲಿಯೇ ಮರದ ಪಾದುಕೆಗಳನ್ನು ಸಿದ್ಧಪಡಿಸಲಿದ್ದೇವೆ. ಸೇವಾ ರಶೀದಿ ಮಾಡಿ, ನಿರ್ದಿಷ್ಟ ಹಣ ಪಾವತಿಸಿ ಭಕ್ತರು ವೃಂದಾವನದಲ್ಲಿ ಪೂಜೆ, ಮಂತ್ರಾಕ್ಷತೆಯ ಅನಂತರ ಪಾದುಕೆಯನ್ನು ತಮ್ಮ ಮನೆಗೆ ಕೊಂಡೊಯ್ಯಬಹುದಾದ ವ್ಯವಸ್ಥೆ ಮಾಡಲಿದ್ದೇವೆ. ಎಷ್ಟು ಸಾಧ್ಯವಾಗುತ್ತದೆ ಅಷ್ಟನ್ನು ಸಿದ್ಧಪಡಿಸಿ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಪೂರ್ಣಪ್ರಜ್ಞ ವಿದ್ಯಾಪೀಠದ ಹಿರಿಯ ವಿದ್ವಾಂಸರೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.