ಬೈಂದೂರು: ಅಬ್ಬಾ..! ಹೇಗಿದೆ ನೋಡಿ 20 ಅಡಿ ಉದ್ದದ ‘ದೈತ್ಯ’ ಹೆಬ್ಬಾವು!


Team Udayavani, Sep 29, 2020, 7:05 PM IST

Hebbavu-01

ಬೈಂದೂರು: ಗೋಳಿಹೊಳೆ ಗ್ರಾಮದ ಅರೆಶಿರೂರು ರವಿ ಶೆಟ್ಟಿ ಬೈಂದೂರು ಅವರ ಮನೆಯ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ಭಾರೀ ಪ್ರಯತ್ನದ ಬಳಿಕ ಈ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಯಿತು.

ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ ಕಾರ್ಮಿಕ ಮುಖಂಡ ಡಾ.ರವಿ ಶೆಟ್ಟಿ ಬೈಂದೂರು ಅವರ ಮನೆಯ ಅಡಿಕೆ ತೋಟದಲ್ಲಿ ಅವರು ಸಾಕಿದ ನಾಯಿಯನ್ನು ಈ ಹೆಬ್ಬಾವು ಹಿಡಿದು ನುಂಗುತ್ತಿತ್ತು.

ಈ ಸಂದರ್ಭದಲ್ಲಿ ರವಿ ಶೆಟ್ಟಿಯವರು ಹಾವಿನ ಬಾಯಿಂದ ನಾಯಿಯನ್ನು ಬಿಡಿಸಿದ್ದಲ್ಲದೆ ಸುಮಾರು 20 ಅಡಿ ಉದ್ದ 50ಕೆಜಿಯಷ್ಟು ಭಾರ ಇರುವ ಹಾವನ್ನು ಅದಕ್ಕೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಹಿಡಿದರು.

ಆ ಬಳಿಕ ಗೋಳಿಹೊಳೆ ವಿಭಾಗಿಯ ಪ್ರಭಾರ ಅರಣ್ಯ ರಕ್ಷಕ  ರಾಜೀವ ಎಸ್ ಗೌಡರ ಸಹಾಯದೊಂದಿಗೆ ಈ ಬೃಹತ್ ಹೆಬ್ಬಾವನ್ನು ಮೀಸಲು ಅರಣ್ಯ ಪ್ರದೇಶದಲ್ಲಿ ಬಿಡಲಾಯಿತು.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ದೊಡ್ಡಗಾತ್ರದ ಈ ಹೆಬ್ಬಾವನ್ನು ಒಬ್ಬರಿಂದ ಎತ್ತಿ ಹಿಡಿಯುವುದು ಸಾಧ್ಯವಾಗದೇ ಇದ್ದಾಗ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಯಿತು.

ಮಾಹಿತಿ ಸಿಕ್ಕಿದ ತಕ್ಷಣ ಸಮೀಪದಲ್ಲೇ ಇದ್ದ ಅರಣ್ಯ ರಕ್ಷಕರಾದ ರಾಜೀವ್ ಎಸ್ ಗೌಡರು ಮತ್ತು ಸಹಾಯಕರಾದ ನಾರಾಯಣ ಗೌಡರು ಆಗಮಿಸಿ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿಯಲು ಸಹಕರಿಸಿದರು.

ರವಿ ಶೆಟ್ಟಿಯವರು ಇಂದು ಬೆಂಗಳೂರಿನಿಂದ ಬಂದ ಹತ್ತೇ ನಿಮಿಷದಲ್ಲಿ ಈ ಘಟನೆ ನಡೆದಿದ್ದು ಇನ್ನು ಎರಡೇ ನಿಮಿಷ ಕಳೆದಿದ್ದರು ಹಾವು ನಾಯಿಯನ್ನು ನುಂಗುತ್ತಿತ್ತು ಮತ್ತು ಅಕ್ಕಪಕ್ಕದ ಮನೆಯವರು ಮತ್ತು ಮಕ್ಕಳು ಓಡಾಡುವ ಸ್ಥಳ ಆಗಿರುವುದರಿಂದ ಹಾವನ್ನು ಎಚ್ಚರಿಕೆಯಿಂದ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಗಿದೆ.

ಇಷ್ಟು ದೊಡ್ಡ ಹಾವನ್ನು, ಅದೂ ಸಹ ತನ್ನ ಆಹಾರವನ್ನು ಬೇಟೆಯಾಡುತ್ತಿದ್ದ ಸಂದರ್ಭದಲ್ಲಿ ಇದನ್ನು ಹಿಡಿಯುವುದು ತಕ್ಷಣಕ್ಕೆ ನಮಗೆ ದೊಡ್ಡ ಸವಾಲಾಗಿತ್ತು ಎಂದು ತನ್ನ ರವಿ ಶೆಟ್ಟಿಯವರು ತನ್ನ ಅನುಭವವನ್ನು ಹಂಚಿಕೊಂಡರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.