ಭ್ರಷ್ಟಾಚಾರದಿಂದ ಜನತೆ ತತ್ತರ: ಮಟ್ಟಾರು


Team Udayavani, Feb 21, 2017, 12:35 PM IST

mattar.jpg

ಉಡುಪಿ: ದಿನೇ ದಿನೇ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ, ನಿರಾತಂಕವಾಗಿ ಸಾಗುತ್ತಿರುವ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳ ಜತೆಗೆ ಬ್ರಹ್ಮಾಂಡ ಭ್ರಷ್ಟಾಚಾರಗಳಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

ಅವರು ರಾಜ್ಯ ಸರಕಾರದ ವೈಫ‌ಲ್ಯದ ವಿರುದ್ಧ ಫೆ. 20ರಂದು ಉಡುಪಿ ಗಾಂಧಿ ಕಟ್ಟೆ ಎದುರು ಜರಗಿದ ಪ್ರತಿಭಟನ ಸಭೆ ಉದ್ದೇಶಿಸಿ ಮಾತನಾಡಿದರು.

ನಾಚಿಕೆಗೇಡು: ಮುಖ್ಯಮಂತ್ರಿ ಆಪ್ತರ ಮನೆ ಮೇಲೆ ಐಟಿ ದಾಳಿ ನಿರಂತರ ನಡೆಯುತ್ತಲೇ ಇದೆ. ಕೆಜಿಗಟ್ಟಲೆ ಬಂಗಾರ, ಕೋಟ್ಯಂತರ ರೂಪಾಯಿ ನಗದು ದೊರಕುತ್ತಲೇ ಇದೆ. ಆದರೆ ರಾಜ್ಯದ ಮುಖ್ಯಮಂತ್ರಿ ಮಾತ್ರ ಏನೂ ಸಂಭವಿಸಿಯೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಕಾಂಗ್ರೆಸ್‌ ಸರಕಾರ ಆಡಳಿತ ಚುಕ್ಕಾಣಿ ಹಿಡಿಯುತ್ತಿದ್ದಂತೆ ಅರ್ಕಾವತಿ ಲೇಔಟ್‌ ಭೂಹಗರಣ ಮುಖ್ಯಮಂತ್ರಿ ಅವರನ್ನು ಬಾಧಿಸಿತು. ಅಂದಿನಿಂದ ಇಂದಿನ ವರೆಗೆ ಹಗರಣಗಳಿಂದ ತಪ್ಪಿಸಿಕೊಳ್ಳಲು ಹೋರಾಟ ನಡೆಸಲಾಗುತ್ತಿದೆ. ವಾಚ್‌ ಹಗರಣದಲ್ಲಿ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ
 ನೀಡಬೇಕಿತು ಆದರೂ ಅಧಿಕಾರದಲ್ಲಿ ಮುಂದುವರಿದಿರುವುದು ನಾಚಿಕೆ ಗೇಡು ಎಂದರು.

ಮುಖ್ಯಮಂತ್ರಿ ಕಾರ್ಯದರ್ಶಿ ಗೋವಿಂದರಾಜು ಅವರ ಮನೆಯ ಲ್ಲಿಯೂ ಡೈರಿ, ಸಾವಿರಾರು ಕೋಟಿ ರೂಪಾಯಿ ನಗದು, ಕೆಜಿಗಟ್ಟಲೆ ಚಿನ್ನ-ಬೆಳ್ಳಿ ಸಿಕ್ಕಿರುವುದು ರಾಜ್ಯ ಸರಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಎಂದು ಅವರು ಹೇಳಿದರು.

ಪ್ರತಿಭಟನ ಸಭೆಯಲ್ಲಿ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌, ಮಾಜಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಲಾಲಾಜಿ ಮೆಂಡನ್‌, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಷನ್‌ ಅಧ್ಯಕ್ಷ ಯಶಪಾಲ್‌ ಸುವರ್ಣ, ರಾಜ್ಯ ಕಾರ್ಯಕಾರಣಿಯ ಶ್ಯಾಮಲಾ ಕುಂದರ್‌, ಉಡುಪಿ ಜಿ.ಪಂ. ಉಪಾಧ್ಯಕ್ಷ ಶೀಲಾ ಶೆಟ್ಟಿ, ಮುಖಂಡರಾದ ಗುರ್ಮೆ ಸುರೇಶ್‌ ಶೆಟ್ಟಿ, ಕುಯಿಲಾಡಿ ಸುರೇಶ್‌ ನಾಯಕ್‌, ಉದಯಕುಮಾರ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಗೀತಾಂಜಲಿ ಸುವರ್ಣ, ಪ್ರಕಾಶ್‌ ಹೆಗ್ಡೆ, ಸುಕುಮಾರ್‌ ಶೆಟ್ಟಿ, ಕುತ್ಯಾರು ನವೀನ್‌ ಶೆಟ್ಟಿ, ಅಂಡಾರು
ದೇವಿಪ್ರಸಾದ್‌ ಹೆಗ್ಡೆ ಮೊದಲಾದ ವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.