ಆಕರ್ಷಣೆಯ ಕೇಂದ್ರವಾದ ಮಲ್ಪೆ ಸೀ ವಾಕ್‌ ಉದ್ಯಾನ

ವಾರಾಂತ್ಯದಲ್ಲಿ ಹೆಚ್ಚಿದ ಜನಸಂದಣಿ

Team Udayavani, Dec 7, 2020, 1:43 PM IST

ಆಕರ್ಷಣೆಯ ಕೇಂದ್ರವಾದ ಮಲ್ಪೆ ಸೀ ವಾಕ್‌ ಉದ್ಯಾನ

ಮಲ್ಪೆ, ಡಿ. 6: ಇಲ್ಲಿನ ಸೀ ವಾಕ್‌ ಬಳಿ ಹೊಸದಾಗಿ ರೂಪುಗೊಂಡ ಉದ್ಯಾನ ಜನಾಕರ್ಷಣೆಯ ಕೇಂದ್ರವಾಗಿದ್ದು,  ಪ್ರವಾಸಿಗರು ಸೇರಿದಂತೆ ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ  :

ಮಲ್ಪೆ ಸೀ ವಾಕ್‌ ವೇ ಸಮೀಪ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿಯ ಅನುದಾನದಲ್ಲಿ ಸುಮಾರು 2 ಕೋ.ರೂ. ವೆಚ್ಚದಲ್ಲಿ ಸುಂದರ ಕಲಾಕೃತಿಗಳೊಂದಿಗೆ ಉದ್ಯಾನ ನಿರ್ಮಾಣವಾಗಿದ್ದು, ಡಿ. 3ರಂದು ಲೋಕಾರ್ಪಣೆಗೊಂಡಿದೆ. ಆರಂಭದಿಂದಲೇ ಪ್ರತಿದಿನ ಜನರು ಇಲ್ಲಿ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ವಾರಾಂತ್ಯದಲ್ಲಿ ಇಲ್ಲಿಗೆ ಆಗಮಿಸುವವರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ.

ಆಕರ್ಷಣೀಯ :

ಉದ್ಯಾನ ಆರಂಭಕ್ಕೆ ಮೊದಲು ಸೀ ವಾಕ್‌ಗೆ ಜನರು ಅಪಾರ ಸಂಖ್ಯೆಯಲ್ಲಿ ಬರುತ್ತಿದ್ದರು. ಇದೀಗ ಉದ್ಯಾನ ನಿರ್ಮಾಣಗೊಂಡ ಬಳಿಕ ಇಲ್ಲಿಗೆ ಭೇಟಿ ನೀಡುವ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಈ ಪ್ರದೇಶ ಎಲ್ಲ ವಯೋಮಾನದವರನ್ನೂ ಸೆಳೆಯುತ್ತಿದೆ. ಮಕ್ಕಳು ಜಾರುಬಂಡಿಯಲ್ಲಿ ಆಟವಾಡುವುದು, ಯುವ ಜನತೆ ವಿವಿಧ ಕಲಾಕೃತಿಗಳ ಎದುರು ಸೆಲ್ಫಿ ತೆಗೆಯುತ್ತ ಸಂಭ್ರಮಿಸುತ್ತಿದ್ದಾರೆ. ಆದರೆ ಕತ್ತಲಾದ ಮೇಲೆ ಇಲ್ಲಿ ಬೆಳಕಿನ ವ್ಯವಸ್ಥೆ ಕಡಿಮೆ ಇದೆ.

ಪಾರ್ಕ್‌ನಲ್ಲಿ ಹೆಚ್ಚುವರಿ ದೀಪದ ವ್ಯವಸ್ಥೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಇಲ್ಲಿ  ಸೈಕಲ್‌ ಟ್ರಾÂಕ್‌ ಕೂಡ ನಿರ್ಮಾಣವಾಗಲಿದೆ ಎಂದು ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿಯ ಉಸ್ತುವಾರಿ ಸುದೇಶ್‌ ಶೆಟ್ಟಿ ತಿಳಿಸಿದ್ದಾರೆ.

ಜನರ ಪ್ರಶಂಸೆ :

ಒಂದು ಕಾಲದಲ್ಲಿ ಜನ ಸಾಮಾನ್ಯರು ನಡೆದಾಡಲು ಭಯಪಡುತ್ತಿದ್ದ ಬ್ರೇಕ್‌ವಾಟರ್‌ ಪ್ರದೇಶದಲ್ಲಿ, ಸೀ ವಾಕ್‌ ರೂಪಿಸುವ ಮೂಲಕ ಈ ಪ್ರದೇಶವನ್ನು  ವ್ಯವಸ್ಥಿತವಾಗಿ ಅಭಿವೃದ್ಧಿ ಪಡಿಸಿದ್ದರಿಂದ ಇಲ್ಲಿಗೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡಿ,  ವಾಯು ವಿಹಾರದೊಂದಿಗೆ ಪ್ರಾಕೃತಿಕ ಸೌಂದರ್ಯವನ್ನು ಆಸ್ವಾದಿಸುತ್ತಿದ್ದಾರೆ. ಇದೀಗ ಅಲ್ಲಿಯೇ ಉದ್ಯಾನ  ನಿರ್ಮಿಸಿ ಮತ್ತಷ್ಟು ಅಭಿವೃದ್ಧಿಪಡಿಸಿರುವುದು ಜನರ ಪ್ರಶಂಸೆಗೆ ಪಾತ್ರವಾಗಿದೆ.

ಉದ್ಯಾನದಲ್ಲಿ ಏನೇನಿದೆ? : ಸಾಂಸ್ಕೃತಿಕ ಕಲಾ ಪ್ರದರ್ಶನಕ್ಕಾಗಿ ಅರ್ಧ ಚಂದ್ರಾಕಾರದ ಆ್ಯಂಫಿಥಿಯೇಟರ್‌, 15 ಅಡಿ ಎತ್ತರದ ಸಿಮೆಂಟ್‌ ಕಲಾಕೃತಿ ಜಟಾಯು ಪ್ರತಿಮೆ, ಮೀನುಗಾರರು ಪಾತಿದೋಣಿಯನ್ನು ತೀರಕ್ಕೆ ಎಳೆಯುವ ಕಲಾಕೃತಿ, ಪಾತಿದೋಣಿಯಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರ, 250 ವಾಹನಗಳ ನಿಲುಗಡೆಗೆ ಅನುಕೂಲವಾದ 50 ಸಾವಿರ ಚದರಡಿ ವಿಸ್ತೀರ್ಣದ ಪಾರ್ಕಿಂಗ್‌, ಮಕ್ಕಳ ಆಕರ್ಷಣೆಗಾಗಿ ಬೃಹತ್‌ ಗಾತ್ರದ ಕಲರ್‌ ಫುಲ್‌ ಬೆಕ್ಕು ಮತ್ತು ಮೀನು, ವಾಕಿಂಗ್‌ ಟ್ರ್ಯಾಕ್‌, ಮಕ್ಕಳ ಆಟಕ್ಕೆ ಸಂಬಂಧಿಸಿದಂತೆ, ಜಾರುಬಂಡಿ, ಸ್ಯಾಂಡ್‌ಪಿಟ್‌, ಕುಳಿತು ಕೊಳ್ಳಲು ಕಲ್ಲು ಬೆಂಚುಗಳು, ಲೈಟಿಂಗ್‌ ಆಕರ್ಷಣೀಯವಾಗಿವೆ.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.