ರಾಜ್ಯದ ಶೇ. 33 ಪ್ರದೇಶಕ್ಕೆ ಹಸಿರು ಹೊದಿಕೆ ಗುರಿ

ಹಸಿರಾಗುವತ್ತ ಕರ್ನಾಟಕ

Team Udayavani, Aug 14, 2019, 7:04 AM IST

hasiru-hodike

ಉಡುಪಿ: ರಾಜ್ಯ ಸರಕಾರವು ಬಜೆಟ್‌ನಲ್ಲಿ ಘೋಷಿಸಿರುವ ಹಸಿರು ಕರ್ನಾಟಕ ಯೋಜನೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದ್ದು, ಈಗಾಗಲೇ ಉಭಯ ಜಿಲ್ಲೆಗಳಲ್ಲಿ ಅರಣ್ಯ ಇಲಾಖೆ ಯಡಿ 71,500 ಮತ್ತು ಸಾಮಾಜಿಕ ಅರಣ್ಯ ವಿಭಾಗದಡಿ 1,13,362 ಗಿಡಗಳನ್ನು ನೆಡಲಾಗಿದೆ.

“ಮನೆಗೊಂದು ಮರ, ಊರಿಗೊಂದು ತೋಪು, ತಾಲೂಕಿ ಗೊಂದು ಕಿರು ಅರಣ್ಯ, ಜಿಲ್ಲೆಗೊಂದು ಕಾಡು’ ಹಸಿರು ಕರ್ನಾ ಟಕದ ಧ್ಯೇಯ. ಪ್ರತೀ ಮನೆಗೆ ಒಂದು ಗಿಡ ನೆಡುವ ಯೋಜನೆ ಇದು. ಇದರಡಿ ಪ್ರತೀ ಗ್ರಾ.ಪಂ.ಗೆ
ತಲಾ 500 ಗಿಡ ವಿತರಿಸಲಾಗಿದೆ. ಸುಮಾರು 20ರಷ್ಟು ವಿವಿಧ ಜಾತಿಯ ಗಿಡಗಳನ್ನು ಈ ಯೋಜನೆಯನ್ವಯ ವಿತರಿಸಲಾಗುತ್ತಿದೆ.

ಗಿಡ ನೆಟ್ಟು ಹಣ ಪಡೆಯಬಹುದು!
ಕೃಷಿ ಮತ್ತು ಖಾಸಗಿ ಜಮೀನುಗಳಲ್ಲಿ ನೆಡಲು ಸಸಿಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ. ಬದುಕುಳಿ ಯುವ ಗಿಡಗಳಿಗೆ ಮೂರು ವರ್ಷಗಳವರೆಗೆ ಪ್ರತೀ ವರ್ಷವೂ ನಿಗದಿತ ಪ್ರೋತ್ಸಾಹಧನ ನೀಡುವ ಮೂಲಕ ಹೆಚ್ಚು ಸಸಿ ಬೆಳೆಸಲು ಪ್ರೇರೇಪಿಸಲಾಗುತ್ತದೆ. ಪ್ರತೀ ವರ್ಷ ಶಿಕ್ಷಣ ಸಂಸ್ಥೆಗಳು, ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವನಮಹೋತ್ಸವ ಹಮ್ಮಿಕೊಳ್ಳಲಾಗುತ್ತಿದೆ.

ಹೆಚ್ಚುವರಿ ಗಿಡಕ್ಕೆ ದರ ನಿಗದಿ
ಮನೆಗೊಂದು ಗಿಡವಲ್ಲದೆ ಹೆಚ್ಚುವರಿ ಬೇಕಿದ್ದರೆ ಜಾಗದ ದಾಖಲೆ ನೀಡಿ ಪಡೆದುಕೊಳ್ಳಬಹುದು. 6ರಿಂದ 9 ಇಂಚಿನವರೆಗಿನ ಗಿಡಕ್ಕೆ 1 ರೂ. ಮತ್ತು 8ರಿಂದ 12 ಇಂಚು ಎತ್ತರದ ಗಿಡಗಳಿಗೆ 3 ರೂ. ನಿಗದಿ ಮಾಡಲಾಗಿದೆ.

ಶೇ. 23 ಭಾಗದಲ್ಲಿ ಮಾತ್ರ ಹಸಿರು ಹೊದಿಕೆ
ರಾಷ್ಟ್ರೀಯ ಅರಣ್ಯ ನೀತಿ ಪ್ರಕಾರ ರಾಜ್ಯದ ಶೇ. 33ರಷ್ಟು ಪ್ರದೇಶ ಹಸಿರು ಹೊದಿಕೆಯಿರಬೇಕು. ಆದರೆ 2017ರ ಸಮೀಕ್ಷೆ ಪ್ರಕಾರ ರಾಜ್ಯದ ಶೇ.23 ಭಾಗ ಮಾತ್ರ ಹಸಿರಿದೆ.

ಅನಿವಾರ್ಯವೂ ಹೌದು
ಹವಾಮಾನ ವೈಪರೀತ್ಯದಿಂದ ತಾಪಮಾನ ಹೆಚ್ಚಾಗಿದೆ. ರಸ್ತೆ ವಿಸ್ತರಣೆ ಗಾಗಿ ಮರ ಕಡಿಯಲಾಗುತ್ತಿದೆ. ಅರಣ್ಯ ಪ್ರದೇಶ ಕ್ಷೀಣಿಸಿರುವುದು ಪರಿಸರ ಮತ್ತು ಹವಾಮಾನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಇದನ್ನೆಲ್ಲ ಹೋಗಲಾಡಿಸುವ ನಿಟ್ಟಿನಲ್ಲಿ ಹಸಿರು ಕರ್ನಾಟಕ ಯೋಜನೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಶೇ. 70ರಷ್ಟು ಫ‌ಲಪ್ರದವಾಗಿದೆ.

ಯಶಸ್ವಿ ಅನುಷ್ಠಾನ
ಹಸಿರು ಕರ್ನಾಟಕ ಯೋಜನೆ ಯಶಸ್ವಿಯಾಗಿ ಅನುಷ್ಠಾನವಾಗುತ್ತಿದೆ. ಪ್ರತೀ ಗ್ರಾ.ಪಂ.ಗೆ 500 ಗಿಡಗಳನ್ನು ನೀಡಲಾಗುತ್ತಿದೆ. ಶೇ. 50 ಗಿಡಗಳನ್ನು ರಿಯಾಯಿತಿ ದರ ಮತ್ತು ಇನ್ನುಳಿದವುಗಳನ್ನು ಉಚಿತವಾಗಿ ವಿತರಿಸುವ ಯೋಜನೆ ಇದು.
– ಭಾಸ್ಕರ ಬಿ., ಉಪ ಅರಣ್ಯ ಸಂರಕ್ಷಣಾಧಿಕಾರಿ, ಉಡುಪಿ

– ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.