ಪರ್ಕಳ: ರಾ.ಹೆ. ಬದಿಯಲ್ಲೇ ಕೊಳಚೆ ನೀರು!

ಬ್ಯಾಂಕ್‌ ವ್ಯವಹಾರಕ್ಕೆ ತೊಂದರೆ ; ಸ್ಥಳೀಯರಿಗೆ ಸಂಕಷ್ಟ

Team Udayavani, Nov 22, 2019, 5:21 AM IST

4609PARKALA-RASTE

ಉಡುಪಿ: ಪರ್ಕಳ ಪೇಟೆಯಲ್ಲಿ ಒಳಚರಂಡಿ ಇಲ್ಲದ ಪರಿಣಾಮ ಕೊಳಚೆ ನೀರು ರಾಷ್ಟ್ರೀಯ ಹೆದ್ದಾರಿ 169ಎಯ ಬದಿಯಿಂದಲೇ ಹರಿಯುತ್ತಿದ್ದು ಪರಿಸರದಲ್ಲಿ ದುರ್ವಾಸನೆ ಹರಡಿದೆ.

ಸಿಂಡಿಕೇಟ್‌ ಬ್ಯಾಂಕಿನ ಎದುರು ಕೊಳಚೆ ನೀರು ಶೇಖರಣೆಯಾಗಿದ್ದು, ಬ್ಯಾಂಕಿನ ಗ್ರಾಹಕರು, ಸಿಬಂದಿ, ಪರಿಸರದ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.
ಈ ಕುರಿತು ಸ್ಥಳೀಯರು ಸಂಬಂಧಪಟ್ಟ ಅಧಿಕಾರಿ ಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ವಾಗಿಲ್ಲ; ಸ್ವತ್ಛತೆ ಭಾಷಣಕ್ಕೆ ಮಾತ್ರ ಸೀಮಿತವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಚರಂಡಿ ವ್ಯವಸ್ಥೆ ಇಲ್ಲ!
ಇಲ್ಲಿ ಹಿಂದಿನಿಂದಲೂ ಕೊಳಚೆ ನೀರನ್ನು ನೇರವಾಗಿ ಮಳೆ ನೀರಿನ ಚರಂಡಿಗೆ ಹರಿದು ಬಿಡಲಾಗುತ್ತಿತ್ತು. ಆದರೆ ಚರಂಡಿಯ ಸುತ್ತ ಹುಲ್ಲು, ಪೊದೆಗಳು ಆವರಿಸಿದ್ದರಿಂದ ಕೊಳಚೆ ಯಾರ ಗಮನಕ್ಕೂ ಬರುತ್ತಿರಲಿಲ್ಲ; ತೀವ್ರತರದ ಸಮಸ್ಯೆ ಎನಿಸಿರಲಿಲ್ಲ. ಆದರೆ ಕಳೆದ ವರ್ಷ ರಾ.ಹೆ. 169ಎ ವಿಸ್ತರಣೆ ಸಂದರ್ಭ ಮಳೆ ನೀರಿನ ಚರಂಡಿಯನ್ನು ಅಗೆದು ಪರಿಸರವನ್ನೆಲ್ಲ ಸಮತಟ್ಟು ಮಾಡಲಾಗಿತ್ತು.

ನಗರಸಭೆಯಾಗಲೀ ಪೇಟೆಯ ಹೊಟೇಲ್‌, ಅಂಗಡಿಯವರಾಗಲಿ ತ್ಯಾಜ್ಯ ನೀರಿನ ವಿಲೇವಾರಿಗೆ ಬದಲಿ ವ್ಯವಸ್ಥೆ ಮಾಡಿಕೊಳ್ಳುವ ಗೋಜಿಗೆ ಹೋಗಿಲ್ಲ. ರಾತ್ರಿ ವೇಳೆ ಕೊಳಚೆ ನೀರಿನ ಹರಿವು ಹೆಚ್ಚಿರುತ್ತದೆ. ಹೆದ್ದಾರಿ ಬದಿ ಪಾಚಿಕಟ್ಟಿದೆ. ಹುಳಗಳು ಹುಟ್ಟಿ ಕೊಂಡು ಸಾಂಕ್ರಾಮಿಕ ರೋಗದ ಭೀತಿಯೂ ಇದೆ. ಸಾರ್ವಜನಿಕರು ನಡೆದಾಡುವಾಗ ಮೂಗು ಮುಚ್ಚಿ ಕೊಳ್ಳಬೇಕಿದೆ. ಬ್ಯಾಂಕ್‌ ಗ್ರಾಹಕರಂತೂ ಕೊಳಚೆಯ ಪ್ರವಾಹವನ್ನು ಜಿಗಿದೇ ದಾಟಬೇಕಿದೆ.

ಮಾಲಿನ್ಯಕ್ಕೆ ಕಾರಣ
ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಸಿಂಡಿಕೇಟ್‌ ಬ್ಯಾಂಕ್‌ಗೆ ತೆರಳಲು ಸಾಧ್ಯವಾಗುತ್ತಿಲ್ಲ. ಕೊಳಚೆ ನೀರು ರಸ್ತೆ ಬದಿಯಲ್ಲೇ ಹರಿಯುತ್ತಿದೆ. ಮಳೆಗಾಲದಲ್ಲಿ ಹರಿಯುವ ನೀರಿನೊಂದಿಗೆ ಕೊಳಚೆ ನೀರೂ ಬೆರತು ಹೋಗುತ್ತಿತ್ತು. ಆದರೆ ಇದೀಗ ಬೇಸಗೆಯಲ್ಲಿ ಕೊಳಚೆ ನೀರು ರಸ್ತೆಯ ಬದಿಯಲ್ಲಿ ನಿಂತು ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಗಮನ ಹರಿಸಬೇಕು.
-ಗುರುರಾಜ್‌ ಶೆಟ್ಟಿ,ಪರ್ಕಳ ನಿವಾಸಿ

ಗಮನಕ್ಕೆ ಬಂದಿದೆ
ಪರ್ಕಳ ಪೇಟೆಯಲ್ಲಿ ಕೊಳಚೆ ನೀರನ್ನು ರಸ್ತೆಗೆ ಹರಿ ಬಿಡುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ನಗರಸಭೆ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
-ಸುಮಿತ್ರಾ ನಾಯಕ್‌, ನಗರಸಭೆ ಪರ್ಕಳ ವಾರ್ಡ್‌ ಸದಸ್ಯೆ,ಉಡುಪಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.