ಕಡಲ ಮಕ್ಕಳ ಮೊಗದಲ್ಲಿ ಸಂತಸದ ಹೊನಲು
Team Udayavani, May 2, 2018, 9:43 AM IST
ಕಾಪು: ದಿನಬೆಳಗಾದರೆ ಕಡಲಿನ ಅಲೆಗಳನ್ನು ನೋಡುತ್ತ ಬದುಕಿದವರು ನಾವು. ಮಳೆಗಾಲ ಬಂದರೆ ಸಾಕು ನಾವು ಮನೆ ಬಿಟ್ಟು ಬದುಕಬೇಕಾದ ಪರಿಸ್ಥಿತಿ. ಕಡಲು ಯಾವಾಗ ಪ್ರಕ್ಷುಬ್ಧಗೊಳ್ಳುವುದೋ ಅನ್ನೋ ಭಯ. ಒಪ್ಪತ್ತಿನ ಊಟಕ್ಕೂ ನಾವು ಕಡಲ ಕಸುಬನ್ನು ಅವಲಂಬಿಸುವವರು.ಅಲೆಗಳ ಅಬ್ಬರಕ್ಕೆ ಬ್ರೇಕ್ ಹಾಕಲು ಏನಾದರೊಂದು ಮಾಡಿಕೊಡಿ ಅಂತಾ ಹಲವಾರು ವರ್ಷಗಳಿಂದ ಕಾಡಿಬೇಡಿ ದ್ದೇವೆ ಆದ್ರೆ ಪರಿಹಾರ ಮಾತ್ರ ಶೂನ್ಯ. ಹೀಗೆ ಅಳಲನ್ನು ಹೇಳಿಕೊಂಡವರು ಮಟ್ಟು ಪ್ರದೇಶದ ನಿವಾಸಿ ಅಶೋಕ್.
ಈ ಭಾಗದ ಜನರಿಗೆ ಮಳೆಗಾಲದಲ್ಲಿ ಕಡಲ ಕೊರೆತದ ಭಯ ಇದ್ದೇ ಇರುತ್ತದೆ. ಕಡಲ ಕಸುಬು ಮಾಡಿಕೊಂಡು ಜೀವನ ಸಾಗಿಸೋ ಇಲ್ಲಿನ ಜನರು ಮುಂಜಾನೆ ಬೆಳಕು ಹರಿಯುವ ಮೊದಲೇ ದುಡಿಮೆ ಆರಂಭಿಸುತ್ತಾರೆ. ಆದರೆ ಕಡಲು ಮನೆ ತನಕ ಬಂದು ಮನೆಯನ್ನು ಆಕ್ರಮಿಸಿಕೊಂಡರೆ ಅನ್ನೋದು ಎಂಬ ಕಡಲವಾಸಿಗಳನ್ನು ಕಾಡುತ್ತಲೇ ಇರುತ್ತದೆ.
ವರ್ಷಂಪ್ರತಿ ಜನಪ್ರತಿನಿಧಿಗಳಿಗೆ ಕಡಲ ಕೊರೆತಕ್ಕೊಂದು ಶಾಶ್ವತ ಪರಿಹಾರ ಒದಗಿಸಿಕೊಡಿ ಅಂತ ಬೇಡಿದಾಗ ಜಿಲ್ಲಾಡಳಿತದೊಂದಿಗೆ ಸೇರಿಕೊಂಡು ಕಡಲಿಗೆ ಆಹಾರದಂತೆ ಕಲ್ಲು ತಂದು ಸುರಿದು ಕಿಸೆ ತುಂಬಿಸಿಕೊಂಡವರೇ ಹೆಚ್ಚು. ಆದ್ರೆ ಶಾಶ್ವತ ಪರಿಹಾರದ ಬಗ್ಗೆ ಯಾರೂ ಚಿಂತಿಸಿಲ್ಲ. ಈ ಬಾರಿ ನಮ್ಮ ಜನಪ್ರತಿನಿಧಿ ಅನಿಸಿಕೊಂಡ ನಮ್ಮ ಭಾಗದ ಶಾಸಕರು ನಮ್ಮ ಕಷ್ಟವನ್ನು ಅರಿತು ಸ್ಪಂದಿಸಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿ ಕಡಲ ಮಕ್ಕಳ ನೋವಿಗೆ ದನಿಯಾಗಿದ್ದಾರೆ. ನದಿ ತೀರದ ಪ್ರದೇಶದ ಜನರು ಕೂಡ ನದಿ ಕೊರೆತದಿಂದಾಗಿ ಸಮಸ್ಯೆಗೆ ಒಳಗಾಗಿದ್ದು ಇದೀಗ ಈ ಪ್ರದೇಶದಲ್ಲಿ ಸುತ್ತಲೂ ತಡೆಗೋಡೆ ಮತ್ತು ರಸ್ತೆ ನಿರ್ಮಾಣಗೊಂಡು ಜನರಿಗೆ ಬಹಳಷ್ಟು ಅನುಕೂÇವಾಗಿದೆ.
ಈ ಬಾರಿ ಜನಪ್ರತಿನಿಧಿಯೊಬ್ಬರು ಕಡಲಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಂಡಿಕೊಂಡಿದ್ದಾರೆ. ಜಪಾನ್ ಮಾದರಿಯಲ್ಲಿ ಕಡಲ ಕೊರೆತ ತಡೆಗೋಡೆ ನಿರ್ಮಾಣ ಮಾಡುವ ಮೂಲಕ ಕಡಲ ಮಕ್ಕಳಲ್ಲಿ ನೆಮ್ಮದಿ ಮೂಡಿಸಿದ್ದಾರೆ. ಜಪಾನ್ ಮಾದರಿಯ ತಂತ್ರಜ್ಞಾನದಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕಾರ್ಯ ಕಾಪುವಿನ ಮಟ್ಟು ಉದ್ಯಾವರದ ವರೆಗೂ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ