ಕಾನೂನು ಕ್ರಮಕ್ಕೆ ಪರ್ಸೀನ್‌ ಮೀನುಗಾರರ ಆಗ್ರಹ


Team Udayavani, Feb 28, 2019, 12:30 AM IST

2702mlp2a.jpg

ಮಲ್ಪೆ: ನಾಡದೋಣಿ ಮೀನುಗಾರಿಕೆ ಎಂಬ ಹಣೆಪಟ್ಟಿಯನ್ನು ಕಟ್ಟಿಕೊಂಡು ಕರಾವಳಿಯಾದ್ಯಾಂತ ಅಕ್ರಮವಾಗಿ ಯಾಂತ್ರಿಕೃತ ರೀತಿಯಲ್ಲಿ ಮೀನುಗಾರಿಕೆಯನ್ನು ನಡೆಸುತ್ತಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖೀಲ ಕರ್ನಾಟಕ ಪರ್ಸೀನ್‌ ಮೀನುಗಾರರ ಸಂಘ ಮಲ್ಪೆ ಮೀನುಗಾರಿಕಾ ಉಪನಿರ್ದೇಶಕರ ಕಚೇರಿಗೆ ತೆರಳಿ ಅಧಿಕಾರಿಗಳಲ್ಲಿ ಆಗ್ರಹಿಸಿದೆ.

ಮತ್ಸé ಸಂಪತ್ತನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸಾಂಪ್ರದಾಯಿಕ ನಾಡದೋಣಿಯ ಹೆಸರಿನಲ್ಲಿ ಅಕ್ರಮವಾಗಿ ಯಾಂತ್ರಿಕೃತ ಮೀನುಗಾರಿಕೆಯನ್ನು ಮಾಡುತ್ತಿರುವ ಬಗ್ಗೆ ಇದುವರೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು 5 ದಿವಸದೊಳಗೆ ಸ್ಪಷ್ಟ ಮಾಹಿತಿಯನ್ನು ಮೀನುಗಾರಿಕೆ ಇಲಾಖೆ ನೀಡಬೇಕು, ಇಲ್ಲದಿದ್ದಲ್ಲಿ ತಮ್ಮ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಉಪ ನಿರ್ದೇಶಕರಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಜಿಲ್ಲಾಧಿಕಾರಿ ಸಹಿತ ವಿವಿಧ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಅಖೀಲ ಕರ್ನಾಟಕ ಪರ್ಸೀನ್‌ ಮೀನುಗಾರರ ಸಂಘದ ಅಧ್ಯಕ್ಷ ಗುರುದಾಸ್‌ ಬಂಗೇರ ಮಾತನಾಡಿ, ಯಾಂತ್ರಿಕೃತ ಮೀನುಗಾರಿಕೆ ನಾಡದೋಣಿಗಳಲ್ಲಿ ಟ್ರೆಡಿಶನಲ್‌ (ಸಾಂಪ್ರದಾಯಿಕ) ನೆಟ್‌ ಎಂದು ನಮೂದಿತವಾಗಿದೆ. ಯಾವ ಬಲೆ ಎಂದು ಸ್ಪಷ್ಪ ನಮೂದಿಸಿರುವುದಿಲ್ಲ. ಮೋಟಾರೀಕೃತ ದೋಣಿ ಎಂದು ನಮೂದಿಸಿ, ವಿವಿಧ ರೀತಿಯ ಬಲೆಗಳನ್ನು ಉಪಯೋಗಿಸಿ ಯಾಂತ್ರೀಕೃತ ಮೀನುಗಾರಿಕೆ ನಡೆಸಲಾಗುತ್ತಿದೆ. ನಾಡದೋಣಿಗಳಿಗೆ ಡ್ರಮ್‌ವಿಂಚ್‌, 4 ಸಿಲಿಂಡರ್‌ ಎಂಜಿನ್‌, ಜನರೇಟರ್‌, ವಯರ್‌ಲೆಸ್‌, ಫಿಶ್‌ಫೈಂಡರ್‌ ಇಟ್ಟುಕೊಂಡು 25ರಿಂದ 40 ಅಶ್ವಶಕ್ತಿಯ ಎರಡೆರಡು ಎಂಜಿನ್‌ ಬಳಸಿ ಮಳೆಗಾಲದಲ್ಲಿಯೂ ಮೀನುಗಾರಿಕೆ ನಡೆಸಲಾಗುತ್ತದೆ. ಗಿಲ್‌ನೆಟ್‌ ಬಲೆ ಉಪಯೋಗಿಸುವ ಅನುಮತಿ ಪಡೆದು ಟ್ರಾಲ್‌ ಬಲೆಗಳನ್ನು ಉಪಯೋಗಿಸಿ ಬುಲ್‌ಟ್ರಾಲಿಂಗ್‌ ನಡೆಸಲಾಗುತ್ತದೆ ಎಂದವರು ಆರೋಪಿಸಿದ್ದಾರೆ.

18 ಎಂ.ಎಂ. ಬಲೆ
ಜಿಲ್ಲೆಯಲ್ಲಿ 26 ರಿಂಗ್‌ಸೀನ್‌ ದೋಣಿಗಳಿಗೆ (ಮಾಟುಬಲೆ) ಮಾತ್ರ ಮೀನುಗಾರಿಕೆಗೆ ಅನುಮತಿ ಇದೆ. ಆದರೆ 2 ಸಾವಿರಕ್ಕಿಂತಲೂ ಹೆಚ್ಚು ದೋಣಿಗಳು ರಿಂಗ್‌ಸೀನ್‌ ಮಾದರಿಯ ಮೀನುಗಾರಿಕೆಯನ್ನು ವರ್ಷಪೂರ್ತಿ ನಡೆಸುತ್ತಿದ್ದಾರೆ. ಸರಕಾರದ ಆದೇಶದ ಪ್ರಕಾರ 22 ಎಂ.ಎಂ. ಮೇಲ್ಪಟ್ಟ ಗಾತ್ರದ ಬಲೆ ಉಪಯೋಗಿಸಲು ಮಾತ್ರ ಅವಕಾಶವಿದೆ. ಆದರೆ ಇವರು 16ರಿಂದ 18ಎಂ.ಎಂ. ಒಳಗಿನ ಗಾತ್ರದ ಬಲೆಯನ್ನು ಉಪಯೋಗಿಸಿ ಸಣ್ಣ ಗಾತ್ರದ ಮೀನುಗಳನ್ನು ಹಿಡಿದು ಮತ್ಸéಸಂತತಿ ನಾಶಕ್ಕೂ ಕಾರಣವಾಗುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ನಾಡದೋಣಿಗಳಿಗೆ ಸಿಗುವ ಸೀಮೆ ಎಣ್ಣೆಯಲ್ಲಿ ಶೇ. 30ರಷ್ಟು ಮಾತ್ರ ನೈಜ ಮೀನುಗಾರರಿಗೆ ಸಿಗುತ್ತದೆ, ಉಳಿದಂತೆ ಕಾಳಸಂತೆಯಲ್ಲಿ ಮಾರಾಟವಾಗುತ್ತದೆ. ಈ ರೀತಿಯಲ್ಲಿ ಸರಕಾರದ ಬೊಕ್ಕಸಕ್ಕೆ ಉಂಟಾಗುವ ಅರ್ಥಿಕ ನಷ್ಟವನ್ನು ತಪ್ಪಿಸಿ, ಸರಕಾರದ ಯೋಜನೆಗಳು ನೈಜ್ಯ ಮೀನುಗಾರರಿಗೆ ಸಿಗುವಂತಾಗಬೇಕು ಎಂದು ಆಗ್ರಹಿಸಿದರು.

ಮಲ್ಪೆ ಪರ್ಸೀನ್‌ ಮೀನುಗಾರರ ಸಂಘದ ಅಧ್ಯಕ್ಷ ಯಶೋಧರ ಅಮೀನ್‌, ನವೀನ್‌ ಕೋಟ್ಯಾನ್‌, ರಾಮ ಸುವರ್ಣ, ನವೀನ್‌ ಸುವರ್ಣ, ಮಧು ಕರ್ಕೇರ, ವಿಶ್ವನಾಥ್‌, ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.