ಕಾರ್ಕಳ ಮಹಾಲಿಂಗೇಶ್ವರ ದೇಗುಲದಲ್ಲಿ ಅವ್ಯವಹಾರ:ತಹಶೀಲ್ದಾರ್‌ ಪರಿಶೀಲನೆ


Team Udayavani, Jul 25, 2017, 7:15 AM IST

2407KAR12.gif

ಕಾರ್ಕಳ: ಧಾರ್ಮಿಕ ದತ್ತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಪೆರ್ವಾಜೆ ಮಹಾಲಿಂಗೇಶ್ವರ ದೇಗುಲದಲ್ಲಿ ಸಾರ್ವಜನಿಕರಿಗೆ ಸೇರಿದ ಹಣವನ್ನು ಪೋಲು ಮಾಡಲಾಗಿದೆ ದೇಗುಲದಲ್ಲಿ ಅವ್ಯವಹಾರವಾಗಿದೆ ಎಂದು ಸಾರ್ವಜನಿಕರು ನೀಡಿದ ಮನವಿ ಹಾಗೂ ದೂರನ್ನು ಸಮಗ್ರವಾಗಿ ಪರಿಶೀಲಿಸುವ ನಿಟ್ಟಿನಲ್ಲಿ  ಕಾರ್ಕಳ ತಹಶೀಲ್ದಾರ್‌ ಟಿ.ಜಿ.ಗುರುಪ್ರಸಾದ್‌ ಸೋಮವಾರ ದೇಗುಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
 
ಈ ಸಂದರ್ಭ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರ ಹಣವನ್ನು  ದೇಗುಲದ ಒಳಗಿನವರೇ ಪೋಲು ಮಾಡಿ ಅವ್ಯವಹಾರದಲ್ಲಿ ತೊಡಗಿದ್ದಾರೆ ಎನ್ನುವುದು ಸಾಬೀತಾದರೆ ಈ ಕುರಿತು ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು.ಸಾರ್ವಜನಿಕರು ದೇವರ ಕೆಲಸಕ್ಕೆ ನೀಡಿದ ಹಣವನ್ನು ಈ ರೀತಿ ದುರ್ಬಳಕೆ ಮಾಡಲು ಅವಕಾಶ ನೀಡುವುದಿಲ್ಲ ಎಂದರು.

ಏನು ದೂರು: ದೇಗುಲದಲ್ಲಿ ಸಂಗ್ರಹ ವಾದ ಹಣಗಳ ಬಗ್ಗೆ ಸಾರ್ವ ಜನಿಕರು ಮತ್ತು ಭಕ್ತಾದಿಗಳನ್ನು ಕತ್ತಲೆಯಲ್ಲಿಟ್ಟು ಅವ್ಯವಹಾರಗಳು ನಡೆಯುತ್ತಿವೆ. ಕಾಣಿಕೆ ಡಬ್ಬಿಗಳು ಕಾಣೆಯಾಗಿವೆ. ದೇವಸ್ಥಾನದ ಆಡಳಿತಾಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಸಾರ್ವಜನಿಕರಿಂದ ಸಂಗ್ರಹವಾದ ಹಣಗಳಿಗೆ ರಶೀದಿ ನೀಡುವ ಪದ್ಧತಿ ಇಲ್ಲ, ಇಲ್ಲಿ ಸಿಸಿ ಕೆಮರಾವನ್ನು ಸ್ಥಗಿತಗೊಳಿಸಿ ಹಣ ತೆಗೆಯಲಾಗುತ್ತಿದೆ. ಭಕ್ತರಿಗೆ ಧಮ್ಕಿ ಹಾಕುವ ಸಂಪ್ರದಾಯ ನಡೆಯುತ್ತಿದೆ, ಸಭಾಭವನದ ಬಾಡಿಗೆ ಬಂದ ಮೊತ್ತದ ಯಾವುದೇ ದಾಖಲೆಗಳು ಇಲ್ಲ. ಸರಕಾರಕ್ಕೆ ತಪ್ಪು ಲೆಕ್ಕ ಪತ್ರ ಹಾಗೂ ದಾಖಲೆಗಳನ್ನು ನೀಡಲಾಗಿದೆ. ಆಡಳಿತ ದುರುಪಯೋಗ ನಡೆಯುತ್ತಿದೆ ಎಂದು ಸಾರ್ವಜನಿಕರು ತಹಶೀಲ್ದಾರ್‌ ಅವರಿಗೆ ದೂರು ನೀಡಿದ್ದರು.

ಕಾಣಿಕೆ ಡಬ್ಬಿ ಪತ್ತೆ ?
ದೇಗುಲವನ್ನು ಪರಿಶೀಲನೆ ನಡೆಸುವ ಸಂದರ್ಭದಲ್ಲಿ  ನಾಲ್ಕು ಕಾಣಿಕೆ ಡಬ್ಬಿಗಳು ಪತ್ತೆಯಾಗಿದ್ದು ಸಾರ್ವಜನಿಕರು ದೇಗುಲಕ್ಕೆ ಕಾಣಿಕೆ ರೂಪದಲ್ಲಿ ಸಲ್ಲಿಸಿದ ಹಣವನ್ನು ಅಡಗಿಸಿಟ್ಟ ಡಬ್ಬಿಗಳು ಇವೆಂದು ಹೇಳಲಾಗಿದೆ. 

ದೇಗುಲದಲ್ಲಿ ಅವ್ಯವಹಾರ ನಡೆದಿದೆ ಎನ್ನುವ ದೂರಿನ ಆಧಾರದ ಮೇಲೆ ಸಮಗ್ರ ತನಿಖೆಯನ್ನು ಕೈಗೊಂಡಿದ್ದೇವೆ. ತನಿಖೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು.
-ಟಿ.ಜಿ. ಗುರುಪ್ರಸಾದ್‌,  ಕಾರ್ಕಳ ತಹಶೀಲ್ದಾರ್‌

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.