ಮರವಂತೆ-ತ್ರಾಸಿ ಕಡಲ ತೀರದ ಗೂಡಂಗಡಿಗಳ ತೆರವಿಗೆ ಒಂದು ವರ್ಷ


Team Udayavani, Apr 22, 2019, 12:54 PM IST

trasi

ಉಪ್ಪುಂದ: ರಾ.ಹೆದ್ದಾರಿ 66 ಮರವಂತೆ ಬೀಚ್‌ನ ಬದಿಯಲ್ಲಿರುವ ಗೂಡಂಗಡಿಗಳನ್ನು ತೆರವುಗೊಳಿಸಿ ಇದೀಗ ಒಂದು ವರ್ಷವಾಗಿದ್ದು ಇದುವರೆಗೂ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಇರುವುದು ವ್ಯಾಪಾರಿಗಳನ್ನು ಸಂಕಷ್ಟಕ್ಕೆ ದೂಡಿದೆ.

ಮರವಂತೆ-ತ್ರಾಸಿ ಕಡಲ ತೀರದಲ್ಲಿ ಪೈಲಟ್‌ ಕಾಮಗಾರಿಯೊಂದನ್ನು ನಡೆಸಲು ಮತ್ತು ಹೆದ್ದಾರಿ ವಿಸ್ತರಣೆಗೆ ಗೂಡಂಗಡಿಗಳು ಅಡ್ಡಿಯಾಗಿವೆ ಎಂಬ ಹಿನ್ನೆಲೆಯಲ್ಲಿ ಗೂಡಂಗಡಿಗಳನ್ನು ತೆರವುಗೊಳಿಸಲಾಗಿತ್ತು. ಮುಂಜಾನೆ ವ್ಯಾಪಾರಿಗಳು ಅಂಗಡಿ ತೆರೆಯಲು ಬಂದರೆ, ಅಧಿಕಾರಿಗಳು ಪೊಲೀಸ್‌ ಭದ್ರತೆಯಲ್ಲಿ ಅಂಗಡಿ ತೆರವಿಗೆ ಸಜ್ಜಾಗಿದ್ದರು!

ವಿರೋಧದ ನಡುವೆ ತೆರವು
25 ವರ್ಷಗಳಿಂದ ಬೀಡ ಸೇರಿದಂತೆ ಇನ್ನಿತರ ಅಂಗಡಿಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳನ್ನು ಕುಂದಾಪುರ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ನಲ್ಲಿ 25ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಗಿತ್ತು.

ಹುಸಿಯಾದ ಭರವಸೆ
ಈ ಅಂಗಡಿಗಳೇ ಜೀವನಾಧಾರ ಎಂದು ವ್ಯಾಪಾರಿಗಳು ಕಣ್ಣೀರು ಹಾಕಿದ್ದರು. ಅದರಂತೆ ಮಾನವೀಯ ನಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸ್ಥಳದಲ್ಲಿ ಎಲ್ಲ ಗೂಡಂಗಡಿಗಳಿಗೂ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಕುರಿತು ಅಂದಿನ ಉಪವಿಭಾಗಾಧಿಕಾರಿ ಭೂಬಾಲನ್‌ ಭರವಸೆ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಸೂಕ್ತ ವ್ಯವಸ್ಥೆ ಕೈಗೊಂಡಿಲ್ಲ.

ಮತ್ತೆ ಗೂಡಂಗಡಿ
ಅಧಿಕಾರಿಗಳ ಭರವಸೆ ನಂಬಿಕೊಂಡು ಒಂದಿಷ್ಟು ದಿನಗಳನ್ನು ಕಳೆದರೂ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದಿರುವುದರಿಂದ ಕೆಲವು ವ್ಯಾಪಾರಿಗಳು ಕಡಲ ತೀರದ ಪೂರ್ವ ಬದಿಯಲ್ಲಿ ಸರಳವಾದ ರೀತಿಯಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದಾರೆ.

ಮತ್ತೆ ಆತಂಕ
ರಾ.ಹೆದ್ದಾರಿ 66ರ ಕಡಲ ತೀರದ ರಸ್ತೆಯ ಉದ್ದಕ್ಕೂ ಬೇಲಿ ನಿರ್ಮಿಸುತ್ತಾರೆ ಎನ್ನುವ ಮಾತುಗಳು ಹರಿದಾಡುತ್ತಿರುವುದು ವ್ಯಾಪಾರಸ್ಥರಲ್ಲಿ ಮತ್ತೆ ಆತಂಕ ಶುರುವಾಗಿದೆ. ಪರ್ಯಾಯ ವ್ಯವಸ್ಥೆ ಮಾಡದೆ ಮತ್ತೆ ತೆರವುಗೊಳಿಸಿದರೆ ಬದುಕು ಸಂಕಷ್ಟಕ್ಕೆ ಸಿಲುಕುತ್ತದೆ ಎಂದು ಆತಂಕ ವ್ಯಕ್ತಪಡಿಸುತ್ತಾರೆ ಗೂಡಂಗಡಿ ವ್ಯಾಪಾರಿ ಶೈಲೇಶ ಅವರು.

ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಬೇಡ
20 ವರ್ಷಗಳಿಂದ ಕುಟುಂಬದವರ ಹೊಟ್ಟೆಪಾಡಿಗಾಗಿ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸಿಕೊಂಡು ಬರುತ್ತಿದ್ದೇನೆ. ಅಧಿಕಾರಿಗಳು ಕಾಮಗಾರಿ ಪೂರ್ಣಗೊಂಡ ಬಳಿಕ ಪರ್ಯಾಯ ವ್ಯವಸ್ಥೆ ಮಾಡಿಕೊಡುತ್ತೇವೆ ಎನ್ನುತ್ತಾರೆ. ಅಲ್ಲಿಯ ವರೆಗೆ ಜೀವನ ನಡೆಯಲು ರಸ್ತೆಯ ಇನ್ನೊಂದು ಬಂದಿಯಲ್ಲಿ ಅಂಗಡಿಗಳನ್ನು ಇಟ್ಟುಕೊಂಡಿದ್ದೇವೆ. ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಲು ಮುಂದಾಗಬೇಡಿ.
ವಾಸು ಪೂಜಾರಿ, ವ್ಯಾಪಾರಿ

ಚರ್ಚಿಸಿ ಕ್ರಮ
ನಾನು ಇತ್ತೀಚೆಗೆ ಇಲ್ಲಿ ವರ್ಗಾವಣೆಗೊಂಡು ಬಂದಿದ್ದೆ. ಈ ಕುರಿತು ದಾಖಲೆ ಪರಿಶೀಲಿಸುತ್ತೇನೆ. ಬಳಿಕ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ.
ವೀರೇಂದ್ರ ಬಾಡ್ಕರ್‌, ತಹಶೀಲ್ದಾರ್‌, ಕುಂದಾಪುರ

ಕೃಷ್ಣ ಬಿಜೂರು

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.