ಶೇಡಿಮನೆ – ಕೊಂಜಾಡಿ ರಸ್ತೆಯುದ್ದಕ್ಕೂ ಹೊಂಡ

ಹದಗೆಟ್ಟ ರಸ್ತೆಯಿಂದಾಗಿ 2 ವರ್ಷದ ಹಿಂದೆ ಬಸ್‌ ಸಂಚಾರವೇ ಸ್ಥಗಿತ; ರಸ್ತೆ ದುರಸ್ತಿಗೆ ಆಗ್ರಹ

Team Udayavani, Jan 12, 2020, 4:15 AM IST

n-29

ಗೋಳಿಯಂಗಡಿ: ಈ ರಸ್ತೆಯುದ್ದಕ್ಕೂ ಹೊಂಡಗಳದ್ದೆ ಕಾರುಬಾರು. ರಸ್ತೆ ಹೀಗಿರುವುದರಿಂದ 2 ವರ್ಷಗಳ ಹಿಂದೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ ಕೂಡ ಈಗ ಬರುತ್ತಿಲ್ಲ. ಇದು ಬೆಳ್ವೆ ಗ್ರಾ.ಪಂ. ವ್ಯಾಪ್ತಿಯ ಶೇಡಿಮನೆಯಿಂದ ಕೊಂಜಾಡಿಗೆ ಸಂಪರ್ಕಿಸುವ ಮುಖ್ಯ ರಸ್ತೆಯ ದುಃಸ್ಥಿತಿ. ಸುಮಾರು 3 ಕಿ.ಮೀ. ಉದ್ದದ ಈ ರಸ್ತೆಯ ಬಹುಭಾಗ ಹೊಂಡ – ಗುಂಡಿಗಳೇ ಇವೆ. ಈ ರಸ್ತೆ ದುರಸ್ತಿಯಾಗದೇ 4-5 ವರ್ಷಗಳೇ ಕಳೆದಿವೆ. ಅಲ್ಲಿಂದ ಈವರೆಗೆ ಈ ರಸ್ತೆಯ ಅಭಿವೃದ್ಧಿ ಬಗ್ಗೆ ಯಾರೂ ಕೂಡ ಗಮನವೇ ಹರಿಸಿಲ್ಲ ಎನ್ನುವುದು ಗ್ರಾಮಸ್ಥರ ಆರೋಪ.

ಯಾವೆಲ್ಲ ಊರುಗಳು?
ಶೇಡಿಮನೆಯಿಂದ ಆರಂಭವಾಗುವ ಈ ರಸ್ತೆಯೂ ಕೊಂಜಾಡಿಗೆ ಸಂಚರಿಸುವ ಪ್ರಮುಖ ರಸ್ತೆಯಾಗಿದ್ದರೂ, ಆರ್ಡಿ, ಅಮಾಸೆಬೈಲು, ಮಾಂಡಿ ಮೂರುಕೈ, ಮಾಯಾ ಬಜಾರ್‌, ಹೆಬ್ರಿ, ಸಿದ್ದಾಪುರ ಮತ್ತಿತರ ಪ್ರಮುಖ ಊರುಗಳಿಗೆ ಸಂಪರ್ಕ ಕೊಂಡಿ ಇದಾಗಿದೆ. ಹೆಂಗವಳ್ಳಿ, ತೊಂಭತ್ತುವಿಗೂ ಈ ರಸ್ತೆಯ ಮೂಲಕ ಸಂಚರಿಸಬಹುದು.

ಈಗಂತೂ ಬೇಸಗೆ ಕಾಲ. ರಸ್ತೆಯಲ್ಲಿ ಹೊಂಡ – ಗುಂಡಿಗಳಿದ್ದರೂ, ಹೇಗೋ ಜನ ಪ್ರಯಾಸಪಟ್ಟು ಸಂಚರಿಸುತ್ತಾರೆ. ಆದರೆ ಮಳೆಗಾಲದಲ್ಲಂತೂ ಇಲ್ಲೆಲ್ಲ ನೀರು ನಿಂತು ವಾಹನ ಸವಾರರಿಗೆ ಗುಂಡಿಯೇ ಕಾಣದಿರುವ ಸ್ಥಿತಿ ಇಲ್ಲಿನದು.

ಬಸ್‌ ಸಂಚಾರವೇ ಸ್ಥಗಿತ
ಈ ಹಿಂದೆ ಈ ಮಾರ್ಗವಾಗಿ ಸರಕಾರಿ ಬಸ್‌ವೊಂದು ಸಂಚರಿಸುತ್ತಿತ್ತು. ಪ್ರತಿ ದಿನ ಬೆಳಗ್ಗೆ 10.30ಕ್ಕೆ ಮಾಂಡಿ ಮೂರುಕೈ, ಶೇಡಿಮನೆ, ಕೊಂಜಾಡಿ ಆಗಿ ಹೆಬ್ರಿಗೆ ತೆರಳುತ್ತಿತ್ತು. ಆದರೆ ಕಳೆದ 2 ವರ್ಷಗಳಿಂದ ಈ ಹದಗೆಟ್ಟ ರಸ್ತೆಯಿಂದಾಗಿ ಆ ಬಸ್‌ ಕೂಡ ಸ್ಥಗಿತಗೊಂಡಿದೆ. ಇದರಿಂದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ.

ಸುತ್ತು ಬಳಸಿ ಪ್ರಯಾಣ
ಹದಗೆಟ್ಟ ರಸ್ತೆಯಿಂದಾಗಿ ಈಗ ಈ ಭಾಗದ ಹೆಚ್ಚಿನ ಜನರು ಶೇಡಿಮನೆ- ಕೊಂಜಾಡಿ ರಸ್ತೆಯಲ್ಲಿ ಬರುವುದನ್ನೇ ನಿಲ್ಲಿಸಿ ಬಿಟ್ಟಿದ್ದಾರೆ. ಸುತ್ತು ಬಳಸಿ ಪ್ರಯಾಣಿಸುತ್ತಿದ್ದಾರೆ. ಇದು ಗೋಳಿಯಂಗಡಿ ಅಥವಾ ಶೇಡಿಮನೆಯಿಂದ ಅಮಾಸೆಬೈಲುವಿಗೆ ಹತ್ತಿರದ ಮಾರ್ಗವಾಗಿದ್ದರೂ, ರಸ್ತೆ ಸರಿ ಇಲ್ಲದ ಕಾರಣ ಮಾಂಡಿ ಮೂರುಕೈ, ಆರ್ಡಿಯಾಗಿ ಸಂಚರಿಸಬೇಕಾದ ಅನಿವಾರ್ಯತೆ ಜನರದ್ದಾಗಿದೆ. ಕೇವಲ 3-4 ಕಿ.ಮೀ. ಅಂತರವಿರುವ ಈ ರಸ್ತೆಯ ದುಸ್ಥಿತಿಯಿಂದಾಗಿ 7-8 ಕಿ.ಮೀ. ಕ್ರಮಿಸುವಂತಾಗಿದೆ.

ದುರಸ್ತಿಗೆ ಪ್ರಯತ್ನ
ಶೇಡಿಮನೆ – ಕೊಂಜಾಡಿ ರಸ್ತೆ ದುರಸ್ತಿಗೆ ಕಳೆದ ವರ್ಷ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು 50 ಲಕ್ಷ ರೂ. ಅನುದಾನಕ್ಕೆ ಬೇಡಿಕೆ ಸಲ್ಲಿಸಿದ್ದರು. ಆದರೆ ನಬಾರ್ಡ್‌ ಅನುದಾನ ಬಿಡುಗಡೆಯಾಗಿಲ್ಲದ ಕಾರಣ ವಿಳಂಬವಾಗಿದೆ. ಮತ್ತೆ ರಸ್ತೆ ದುರಸ್ತಿಗೆ ಪ್ರಯತ್ನಿಸಲಾಗುವುದು.
-ಸುಪ್ರೀತಾ ಉದಯ ಕುಲಾಲ್‌, ಜಿ.ಪಂ. ಸದಸ್ಯರು

ಹಲವು ವರ್ಷಗಳೇ ಕಳೆದಿವೆ
ಈ ರಸ್ತೆ ರಿಪೇರಿಯಾಗಿ ಹಲವು ವರ್ಷಗಳೇ ಕಳೆದಿವೆ. ಪ್ರತಿ ಮಳೆಗಾಲದಲ್ಲೂ ನಾವು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದೇವೆ. ಕೆಲ ವರ್ಷಗಳ ಹಿಂದೆ ತೇಪೆ ಹಾಕಿದ್ದು, ಬಿಟ್ಟರೆ ಈ ರಸ್ತೆಯ ಅಭಿವೃದ್ಧಿ ಬಗ್ಗೆ ಯಾರೂ ಕೂಡ ಗಮನವೇ ಹರಿಸಿಲ್ಲ. ಈ ಬಾರಿಯಾದರೂ ಮಳೆಗಾಲಕ್ಕೆ ಮುಂಚೆ ರಸ್ತೆ ಅಭಿವೃದ್ಧಿಯಾಗಿ ಈ ಭಾಗದ ಅನೇಕ ಮನೆಗಳಿಗೆ ಅನುಕೂಲವಾಗಲಿ. – ಗಣಪತಿ ಆರ್ಡಿ, ಸ್ಥಳೀಯರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.