ಅಂತರ್ಜಲ ವೃದ್ಧಿಗೆ ಯೋಜನೆ ಸಹಕಾರಿ: ಸುನಿಲ್
108 ಕೋ.ರೂ. ವೆಚ್ಚದ ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ಗುದ್ದಲಿ ಪೂಜೆ
Team Udayavani, Mar 2, 2020, 6:06 AM IST
ಅಜೆಕಾರು: ಅಜೆಕಾರು ಎಣ್ಣೆಹೊಳೆ ಸ್ವರ್ಣಾನದಿ ಏತ ನೀರಾವರಿ ಯೋಜನೆಯು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಬೃಹತ್ ಏತ ನೀರಾವರಿ ಯೋಜನೆಯಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.
ಅವರು 108 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಾವರಿ ಯೋಜನೆಯ ಅಣೆಕಟ್ಟುವಿಗೆ ರವಿವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಎಣ್ಣೆಹೊಳೆಯಲ್ಲಿ 125 ಮೀ. ಉದ್ದದ 3ಮಿ. ಎತ್ತರದ ಬ್ಯಾರೇಜ್ ಕಟ್ಟಿ ನೀರು ಸಂಗ್ರಹಿಸಿ ಬೃಹತ್ ಪಂಪುಗಳ ಮೂಲಕ ಚೆಕ್ ಡ್ಯಾಂಗಳಿಗೆ ನೀರು ಹಾಯಿಸಿ ಕೃಷಿಕರ ಕೃಷಿ ಭೂಮಿಗೆ ನೀರು ಒದಗಿಸುವ ಯೋಜನೆ ಇದಾಗಿದ್ದು ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಕಾರ್ಕಳ ಪುರಸಭೆ ವ್ಯಾಪ್ತಿಯ ರಾಮಸಮುದ್ರ, ಆನೆಕೆರೆಗಳಿಗೂ ಜಲ ಮರುಪೂರಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕರು ಹೇಳಿದರು.
ನೀರಾವರಿ ಯೋಜನೆ ಜತೆಗೆ ಎಣ್ಣೆಹೊಳೆಯಲ್ಲಿ ಉದ್ಯಾನವನ ನಿರ್ಮಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಈ ಸಂದರ್ಭ ಮರ್ಣೆ ಗ್ರಾ. ಪಂ. ಅಧ್ಯಕ್ಷ ದಿನೇಶ್ ಕುಮಾರ್, ಹಿರ್ಗಾನ ಗ್ರಾ. ಪಂ. ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ತಾ.ಪಂ. ಅಧ್ಯಕ್ಷೆ ಸೌಭಾಗ್ಯ ಮಡಿವಾಳ, ಉಪಾಧ್ಯಕ್ಷ ಹರೀಶ್ ನಾಯಕ್, ಜಿ.ಪಂ. ಸದಸ್ಯ ಉದಯ ಕೋಟ್ಯಾನ್, ಜ್ಯೋತಿ ಹರೀಶ್, ರೇಷ್ಮಾ, ವಾರಾಹಿ ಯೋಜನೆಯ ಕಾರ್ಯ ಪಾಲಕ ಎಂಜಿನಿಯರ್ ಪ್ರವೀಣ್, ಎಂಜಿನಿಯರ್ ಪ್ರಸನ್ನ, ಉದ್ಯಮಿ ಶಿವರಾಮ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್