ಕಸ ಹೆಕ್ಕುವ ಸ್ಪರ್ಧೆಯ ಮೂಲಕ ಪ್ಲಾಸ್ಟಿಕ್‌ ನಿಷೇಧದ ಜಾಗೃತಿ​​​​​​​


Team Udayavani, Mar 16, 2019, 12:30 AM IST

1503shirva1.jpg

ಶಿರ್ವ:  ಪ್ಲಾಸ್ಟಿಕ್‌ ಲಕೋಟೆಯಲ್ಲಿ ಕಸವನ್ನು ಕಟ್ಟಿ ರಸ್ತೆ ಬದಿಗೆಸೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದರಿಂದ ಎಲ್ಲ ಪ್ರಮುಖ ರಸ್ತೆಗಳ ಇಕ್ಕೆಲಗಳು ಕಸದಿಂದ ತುಂಬಿರುವ ದೃಶ್ಯ ಸಾಮಾನ್ಯವಾಗಿದ್ದು ಸಾರ್ವತ್ರಿಕ ಸಮಸ್ಯೆಯಾಗಿದೆ. ಈ ಸಂಬಂಧ ಜಾಗೃತಿ ಮೂಡಿಸಲು ಕಸಹೆಕ್ಕುವ ಸ್ಪರ್ಧೆ ಎಂಬ ವಿನೂತನ ಕಾರ್ಯಕ್ರಮ ನಡೆಸುವ ಮೂಲಕ ಶಿರ್ವ ಗ್ರಾ.ಪಂ.ಸದಸ್ಯ ಕೆ.ಆರ್‌.ಪಾಟ್ಕರ್‌ ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ಕಸ ಹೆಕ್ಕುವ ವಿನೂತನ ಸ್ಪರ್ಧೆ
ಸ್ವತ್ಛತೆಯ ಪರಿಕಲ್ಪನೆಯೊಂದಿಗೆ ಪಂಚಾಯತ್‌ನ ಬಂಟಕಲ್ಲು ವಾರ್ಡ್‌ ಸದಸ್ಯ ಕೆ.ಆರ್‌. ಪಾಟ್ಕರ್‌ ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಸ ಹೆಕ್ಕುವ ಸ್ಪರ್ಧೆಯನ್ನು ಆಯೋಜಿಸಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಹರಡಿರುವ ಕಸ, ಪ್ಲಾಸ್ಟಿಕ್‌ಮತ್ತು ತ್ಯಾಜ್ಯ ಸಂಗ್ರಹಿಸುವ ಸ್ಪರ್ಧೆನಡೆಸಿ ಜನರಲ್ಲಿ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವ ಪಣ ತೊಟ್ಟಿದ್ದಾರೆ.

ಶ್ರೀ ದುರ್ಗಾ ಮಹಿಳಾ ವೃಂದ ಮತ್ತು ರಾಜಾಪುರ ಸಾರಸ್ವತ ಯುವ ವೃಂದದ ಆಶ್ರಯದಲ್ಲಿ ಸಾರ್ವ ಜನಿಕರ ಸಹಭಾಗಿತ್ವದಲ್ಲಿ ಬಂಟಕಲ್ಲು ದುರ್ಗಾನಗರ (ಎಂಜಿನಿಯರಿಂಗ್‌ ಕಾಲೇಜು ಹತ್ತಿರ)ದಿಂದ ಬಿ.ಸಿ.ರೋಡ್‌ವರೆಗಿನ ರಸ್ತೆ ಇಕ್ಕೆಲದ ಕಸಹೆಕ್ಕುವ ಸ್ಪರ್ಧೆ ನಡೆಸಿ ಬಹುಮಾನ ವಿತರಣೆ ನಡೆಸಿದ್ದರು.

ಬಳಿಕ ಶಿರ್ವ ಗ್ರಾಮ ಪಂಚಾಯತ್‌ ಹಾಗೂ ಇತರ ಸಂಘ ಸಂಸ್ಥೆಗಳ ವತಿಯಿಂದ ರಸ್ತೆ ಬದಿಯ ಕಸವನ್ನು ಹೆಕ್ಕುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಆದರೆ ಇದಾದ ಒಂದು ವಾರದಲ್ಲಿಯೇ ಹಳೆಚಾಳಿ ಮುಂದುವರಿದಿತ್ತು. 
 
ಖಾಸಗಿ ಅಥವಾ ಇತರ ಕಾರ್ಯಕ್ರಮಗಳು ಪ್ಲಾಸ್ಟಿಕ್‌ ಮುಕ್ತವಾಗಿನಡೆಯಬೇಕು. ಧಾರ್ಮಿಕ ಸಂಸ್ಥೆಗಳಲ್ಲಿ, ಪ್ರಾರ್ಥನಾ ಮಂದಿರಗಳಲ್ಲಿ, ವಿದ್ಯಾಸಂಸ್ಥೆಗಳಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಈ ಮೂಲಕ ತ್ಯಾಜ್ಯ ಮುಕ್ತ ಮಾಡಿ ಸಮಾಜಕ್ಕೆ ನಮ್ಮ ಕೊಡುಗೆ ನೀಡಬೇಕಾಗಿದೆ ಎಂಬುದು ಪಾಟ್ಕರ್‌ ಅವರ ಸಾಮಾಜಿಕ ಕಳಕಳಿಯಾಗಿದೆ.

ಜಿಲ್ಲಾಡಳಿತದ ಸ್ಪಷ್ಟ ನಿರ್ದೇಶನ ಅಗತ್ಯ
ಸುವರ್ಣ ಗ್ರಾಮ ಯೋಜನೆಯಲ್ಲಿ ಸ್ಥಳಿಯಾ ಡಳಿತಗಳು ಕಡ್ಡಾಯವಾಗಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಹೊಂದಲೇಬೇಕೆಂಬ ನಿಯಮವಿದ್ದರೂ ಕೆಲವೆಡೆ ಈ ವ್ಯವಸ್ಥೆ ಇಲ್ಲದಿರುವುದು,ಇದ್ದರೂ ಅದರ ಸದ್ಬಳಕೆ ಆಗದಿರುವುದು ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ಜಿಲ್ಲಾಡಳಿತ ಕಸದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮ ಪಂಚಾಯತ್‌ ಆಡಳಿತಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕಿದೆ.  

ಎಲ್ಲರ ಹೊಣೆಗಾರಿಕೆ
ಸ್ವತ್ಛ ಮನಸ್ಸಿನ ಮತ್ತು ನಿರ್ಮಲ ಹೃದಯದ ಪ್ರತೀಕವಾದ ಸ್ವತ್ಛ ಪರಿಸರ ಕಾಪಾಡುವುದು ಎಲ್ಲರ ಹೊಣೆಗಾರಿಕೆಯಾಗಿದ್ದು ಬೇಕಾಬಿಟ್ಟಿಯಾಗಿ ರಸ್ತೆ ಬದಿ ಕಸ ಎಸೆಯುವ ಪ್ರವೃತ್ತಿ ನಿಲ್ಲಬೇಕು. ಹೆತ್ತವರು ಈ ಸಂಸ್ಕೃತಿ ಪಾಲಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕಿದೆ. 
– ರೆ|ಫಾ|ಡೆನ್ನಿಸ್‌ ಡೇಸಾ, ಧರ್ಮಗುರುಗಳು,  
ಶಿರ್ವ ಆರೋಗ್ಯ ಮಾತಾ ಚರ್ಚ್‌

ಪ್ಲಾಸ್ಟಿಕ್‌ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ಬರುವಂತಾಗಿ ರಸ್ತೆ ಬದಿ ಕಸ ಹಾಕುವವರ ಮೇಲೆ ಗರಿಷ್ಠ ದಂಡ ವಿಧಿಸುವ ಅಧಿಕಾರ ಸ್ಥಳಿಯಾಡಳಿತಕ್ಕೆ ನೀಡಬೇಕು. ನಾನು ನನ್ನ ಮನೆಯಲ್ಲಿ ಪ್ಲಾಸ್ಟಿಕ್‌ ಬಳಸುವುದಿಲ್ಲ ಎಂಬ ಸಂಕಲ್ಪ ಮಾಡಿದಾಗ ಪ್ಲಾಸ್ಟಿಕ್‌ ಮುಕ್ತ ಸಮಾಜದ ನಿರ್ಮಾಣ ಸಾಧ್ಯ
 -ಕೆ.ಆರ್‌. ಪಾಟ್ಕರ್‌,ಶಿರ್ವ ಗ್ರಾ.ಪಂ.ಸದಸ್ಯ 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.