ವಂದೇ ಮಾತರಂ: “ಪ್ಲಾಸ್ಟಿಕ್’ ಮಹಾಮಾರಿಯ ವಿರುದ್ಧದ ಯುದ್ಧ ಕಥನ
Team Udayavani, Sep 30, 2019, 5:10 AM IST
ಕುಂದಾಪುರ: ವಿಫ್ಎಕ್ಸ್ ತಾಂತ್ರಿಕತೆ ಉಪಯೋಗಿಸಿ, ಹೊಸತೊಂದು ಪ್ರಯೋಗ ಕುಂದಾಪುರದ ಯುವಜನತೆಯಿಂದಾಗಿದೆ. ಇದು ಅ. 2ರ ಪ್ಲಾಸ್ಟಿಕ್ ವಿರುದ್ಧದ ಸಮರದ ಕಥೆ. ಗಾಂಧಿ ಜಯಂತಿಯಂದು ದೇಶಾದ್ಯಂತ ಸ್ವಚ್ಛ ಭಾರತ ಜಾಗೃತಿ ಅಭಿಯಾನ ನಡೆದಂತೆ ಈ ವರ್ಷ ಪ್ಲಾಸ್ಟಿಕ್ ವಿರುದ್ಧ ಸಮರ ಸಾರಲಿದೆ ಇಡೀ ದೇಶ. ಕುಂದಾಪುರದಲ್ಲೂ ಸ್ವಚ್ಛತಾ ಅಭಿಯಾನ, ಪ್ಲಾಸ್ಟಿಕ್ ಮುಕ್ತ ವಾತಾವರಣ ಅಭಿಯಾನ ನಡೆಯುತ್ತಿದೆ.
ಕ್ಲೀನ್ ಕುಂದಾಪುರ ಪ್ರಾಜೆಕ್ಟ್ನವರು ಸಮುದ್ರ ತೀರ ಸ್ವಚ್ಛಗೊಳಿಸುವ ಜತೆಗೆ ಪ್ಲಾಸ್ಟಿಕ್ ಸ್ವಚ್ಛತಾ ಜಾಗೃತಿ ಮೂಡಿಸಲು ಅಣಿಯಾಗಿದ್ದಾರೆ.
“ದಿ ಟೇಲ್ ಆಫ್ ವಂದೇ ಮಾತರಂ’ ಈ ಒಂದು ಹೆಸರಿನಲ್ಲಿ ಲೈಫ್ಲೈಕ್ ಪ್ರೊಡಕ್ಷನ್ ಯು ಟ್ಯೂಬ್ ಚಾನಲ್ನಲ್ಲಿ ವಂದೇ ಮಾತರಂ ಎಂಬ ಹಾಡಿನೊಂದಿಗೆ ಅ. 1ರಂದು ಸಂಜೆ ಸಾರ್ವಜನಿಕ ಹಿತಾಸಕ್ತಿಯ ಪ್ರಯುಕ್ತ ಬಿಡುಗಡೆಗೊಳ್ಳಲಿದೆ ಒಂದು ಸುಂದರ ಸಂಗೀತ ಸಿನೆಮಾ.
ಕಥಾ ಸಾರಾಂಶ
ಕಥೆಯ ಹಂದರದಲ್ಲಿ ಒಂದಷ್ಟು ಹೊಸತನದ ಗಾಳಿ ಸುಳಿದಾಡುತ್ತದೆ. ಭೂಮಿ (ಕಥೆಯಲ್ಲಿನ ನಾಯಕಿ) ಖಳನಾಯಕ ಪ್ಲಾಸ್ಟಿಕ್ ಎಂಬ ಹೊಸ ಜೀವಿಯ ಕೃತ್ಯಗಳಿಗೆ ಬಲಿಯಾಗಿ, ತನ್ನತನವನ್ನು ಕಳೆದುಕೊಳ್ಳುತ್ತಾ, ರೋಗಿಯಾಗಿ ಬಿಡಿಸಿಕೊಳ್ಳಲು ಒದ್ದಾಡುತ್ತಿರುತ್ತಾಳೆ. ಭೂಮಿ ಕಾಯುವ ದೈವ (ನಮ್ಮ ತಳುನಾಡ ದೈವದಂತೆ) ವಂದೇ ಮಾತರಂ ಹಾಡಿನಲ್ಲಿ ಬರುವ ಸುಂದರ ಭೂಮಿಯ ಜತೆಗಿನ ತನ್ನ ಉತ್ತಮ ಸಮಯವನ್ನು ನೆನಪಿಸಿಕೊಳ್ಳುತಾ , ಈಗ ಕಾಣೆಯಾಗಿ ಹೋದ ತನ್ನ ಸುಂದರಿಯನ್ನು ಊರೆಲ್ಲಾ ಹುಡುಕಾಡುತ್ತದೆ. ಪ್ಲಾಸ್ಟಿಕ್ ಅನ್ನುವ ರಕ್ಕಸ ಮನೆಗಳಿಂದ ಹೊರಬಂದು ಮನುಷ್ಯನ ಕೈ ಮತ್ತು ಕಣ್ಣುಗಳೆದುರೇ ಕಡಲ ಪಾಲಾಗುತ್ತದೆ.
ಬಂತು ಪ್ಲಾಸ್ಟಿಕ್
ಕಡಲಿಂದ ಪ್ಲಾಸ್ಟಿಕ್ ಉಕ್ಕಿ ಹರಿಯುತ್ತಾ, ನಾಯಕಿ ಭೂಮಿಯನ್ನೇ ಪೂರ್ತಿಯಾಗಿ ಕಬಳಿಸಿ ಬಿಡುತ್ತದೆ. ಪ್ರತಿ ಕೈಕಣ್ಣುಗಳು ಪ್ಲಾಸ್ಟಿಕ್ ಎಂಬ ರಕ್ಕಸ ಭಾಗವಾಗಿ ಭೂಮಿಯನ್ನೇ ಮುಳುಗಿಸುವಲ್ಲಿ ಕಾರಣೀಭೂತವಾಗುತ್ತದೆ. ತನ್ನ ಭೂಮಿ ಸಿಗದೆ ಅಳುವ ಭೂಮಿ ಕಾಯುವ ದೆ„ವ ಕೊನೆಯಲ್ಲಿ ಕಾಣುವುದು ಪ್ಲಾಸ್ಟಿಕ್ ಆವೃತ ಭೂಮಿಯನ್ನು. ಅದರ ವಿರುದ್ಧ ಯುದ್ಧ ಸಾರುತ್ತದೆ ಭೂಮಿ ಕಾಯುವ ದೆ„ವ. ದೆ„ವದೊಂದಿಗೆ ಕೈ ಜೋಡಿಸಲು ಪ್ರಾರ್ಥಿಸುವಲ್ಲಿ ಸಂಗೀತ ಸಿನೆಮಾ ಮುಗಿಯುತ್ತದೆ.
ಇಲ್ಲಿ ದೇಶಭಕ್ತಿ ಅನ್ನುವುದು ಭೂಮಿ ಭಕ್ತಿ, ಪ್ರೀತಿ ಆಗಿ ಹೊರಹೊಮ್ಮುತ್ತದೆ. ಅದರ ಸಾಂಕೇತಿಕವಾಗಿ ವಂದೇ ಮಾತರಂ ಹಾಡಿನ ಇನ್ನೊಂದು ರೂಪ ನಿಮ್ಮ ಮುಂದೆ ಬರುತ್ತದೆ. ಇದರಲ್ಲಿ ಡೇನಿಯಲ್ ಮತ್ತು ಸುಹಿತ್ ಸಂಗೀತ ಸಂಕಲನ ಮಾಡಿದ್ದು, ಅಕ್ಷತಾ ಹಾಡಿಗೆ ಧ್ವನಿಯಾಗಿದ್ದಾರೆ. ನಿರ್ದೇಶನ ಯತೀಶ್ ರೈ ಅವರದ್ದಾಗಿದ್ದು ಕಲಾವಿದರಾಗಿ ಶ್ರುತಿ ಜೈನ್ ರೆಂಜಾಳ, ಸತ್ಯನಾರಾಯಣ ಮಂಜ ಅವರು ಭಾಗವಹಿಸಿದ್ದಾರೆ.
ವಿನೂತನ ಪ್ರಯತ್ನ
ಭರತ್ ಕುಂದರ್ ನೇತೃತ್ವದಲ್ಲಿ ಹತ್ತಾರು ವೃತ್ತಿಯಲ್ಲಿರುವ ಸ್ವಯಂಸೇವಕರು ಒಟ್ಟಾಗಿ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಎಂಬ ಜನಾಂದೋಲನ ಆರಮಭಿಸಿದರು. ಇದು ಸಮುದ್ರ ತಟವನ್ನ ಚೊಕ್ಕಗೊಳಿಸುವಲ್ಲಿ ಹಾಗೂ ಪ್ಲಾಸ್ಟಿಕ್ ವಿರೋಧಿಯಾಗಿ ಕೆಲಸ ಮಾಡುತ್ತಿರುವ ಆಂದೋಲನ. ಇವರು ಲೈಫ್ ಲೈಕ್ ಪ್ರೊಡಕ್ಷನ್ಸ್ ಜತೆ ಸೇರಿ ಈ ವಿಡಿಯೊವನ್ನು ಹೊರತರುತ್ತಿದ್ದಾರೆ. ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಪ್ರತಿ ರವಿವಾರ ಸಮುದ್ರ ತೀರದಲ್ಲಿ ತ್ಯಾಜ್ಯ ವಿಲೇವಾರಿ ಮಾಡಿ ಸ್ವಚ್ಛತಾ ಆಂದೋಲನ ನಡೆಸುತ್ತಿದೆ.
ಪ್ಲಾಸ್ಟಿಕ್ ವಿರೋಧಿ
ಕುಂದಾಪುರದ ನಾಗರಿಕರ ಸಹಕಾರದಿಂದ ಇಂತಹದೊಂದು ಪ್ರಪಂಚದಾದ್ಯಂತ ಸಾಮಾಜಿಕ ಕಳಕಳಿಯ ಸಣ್ಣ ಪ್ರಯತ್ನ ಮಾಡುತ್ತಿದೆ. ಯುವಕರ ಪ್ರಯತ್ನ ಕಳಕಳಿಗೆ ಹಾಗೂ ಪ್ರಯೋಗದ ಹಿಂದಿನ ಉದ್ದೇಶ ನಿಜಕ್ಕೂ ಅನುಕರಣೀಯ.
-ಡಾ| ರಶ್ಮಿ ಕುಂದಾಪುರ,
ಕ್ಲೀನ್ ಕುಂದಾಪುರ ಪ್ರಾಜೆಕ್ಟ್ನ ಸ್ವಯಂಸೇವಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ