ಬಟ್ಟೆ ಬ್ಯಾನರ್‌, ಕಮಾನುಗಳ ಸ್ಥಾಪನೆ

ಪ್ಲಾಸ್ಟಿಕ್‌ಮುಕ್ತ ಪರ್ಯಾಯ

Team Udayavani, Jan 7, 2020, 5:55 AM IST

04012020ASTRO04

ಉಡುಪಿ: ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಹೋಗಲಾಡಿಸುವುದು ಹೇಗೆಂದು ಅದನ್ನು ಉತ್ಪಾದಿಸಲು ಹಸಿರುನಿಶಾನೆ, ಅನುಮತಿ, ಸಬ್ಸಿಡಿ ಒದಗಿಸಿದ ಸರಕಾರವೇ ತರಬೇತಿ, ಸ್ವಚ್ಛತಾ ಅಭಿಯಾನ, ಮರುಬಳಕೆ ಚಿಂತನೆ ಹೀಗೆ ಬಗೆ ಬಗೆಯ ನಿರ್ಮೂಲನ ಯೋಜನೆಗಳನ್ನು ಆಯೋಜಿಸುತ್ತಿದೆ.

ಒಟ್ಟಾರೆ ಉತ್ಪಾದಿಸುವಾಗಲೂ, ನಿರ್ಮೂಲನಗೊಳಿಸುವಾಗಲೂ ಸಾಕಷ್ಟು ಹಣ ಖರ್ಚು ಜನರ ತಲೆಗೇ ಬೀಳುವುದು ಜನರಿಗೇ ಗೊತ್ತಿಲ್ಲ. ಮುಂಬರುವ ಅದಮಾರು ಮಠದ ಪರ್ಯಾಯದಲ್ಲಿ ಅನಿವಾರ್ಯವೆನಿಸಿದ ಪ್ಲಾಸ್ಟಿಕ್‌ಗಳನ್ನು ಬಳಸುವಾಗಲೇ ಹೊರಗಿಡುವ ಪ್ರಯತ್ನ ಮಾಡಲಾಗಿದೆ.

ಪ್ಲಾಸ್ಟಿಕ್‌ ಅಗ್ರಮಾನ್ಯ ಸ್ಥಾನಗಳಲ್ಲಿ ಅಲಂಕರಿಸುತ್ತಿದ್ದ ಫ್ಲೆಕ್ಸ್‌ ಬ್ಯಾನರ್‌, ಸ್ವಾಗತ ಕಮಾನುಗಳು ಅದಮಾರು ಮಠ ಪರ್ಯಾಯದಲ್ಲಿ ಪ್ಲಾಸ್ಟಿಕ್‌ರಹಿತವಾಗಿ, ದೇಸೀತನದಿಂದ ಎದ್ದು ನಿಂತಿವೆ. 10 ದೊಡ್ಡ ಕಮಾನುಗಳು, 22 ಸಣ್ಣ ಕಮಾನುಗಳು ಸೇರಿದಂತೆ 43 ಕಮಾನುಗಳ ರಚನೆಯಾಗಿವೆ. ಉಡುಪಿ ಜೋಡುಕಟ್ಟೆಯಿಂದ ತೆಂಕುಪೇಟೆ ದಾರಿಯಾಗಿ ರಥಬೀದಿಯನ್ನು ಪ್ರವೇ ಶಿಸುವ ದಾರಿಯಲ್ಲಿ ಹಾಕಿದ ಕಮಾನುಗಳಲ್ಲಿ ಅದಮಾರು ಮಠದ ಹಿಂದಿನ 32 ಗುರುಗಳ ಹೆಸರುಗಳನ್ನು ಬರೆದು ಗುರುಸ್ಮರಣೆ ಬರುವಂತೆ ಮಾಡಲಾಗಿದೆ.

ಜೋಡುಕಟ್ಟೆ, ಕಲ್ಪನಾ, ಕಲ್ಸಂಕ, ಅಂಬಾಗಿಲು, ಸಂಸ್ಕೃತ ಕಾಲೇಜು ಸರ್ಕಲ್‌, ಕಡಿಯಾಳಿ, ಬನ್ನಂಜೆ, ಕಿನ್ನಿಮೂಲ್ಕಿ ಬಳಿ ಪ್ರವೇಶ ತಾಣ, ಅಂಬಲಪಾಡಿ ಜಂಕ್ಷನ್‌ ಮೊದಲಾದೆಡೆ ದೊಡ್ಡ ಕಮಾನುಗಳು ನಿಂತಿವೆ. ನಗರದ ವಿವಿಧ ಪ್ರದೇಶಗಳಲ್ಲಿ ಸಣ್ಣ ಕಮಾನುಗಳನ್ನು ರಚಿಸಲಾಗಿದೆ.

ಉಡುಪಿ ರಥಬೀದಿಯಿಂದ ಜೋಡು ಕಟ್ಟೆವರೆಗೆ 400 ಕಂಬಗಳಲ್ಲಿ 800 ಗೂಡು ದೀಪಗಳನ್ನು ಅಳವಡಿ ಸಲಾಗುತ್ತದೆ. ಅದರೊಳಗೆ ಬಲುºಗಳು ಇರುತ್ತವೆ. ಇದು ಪ್ರಾಚೀನತೆಯನ್ನು ನೆನಪಿಗೆ ಬರುವಂತೆ ಮಾಡದಿರದು. 100 ದೊಡ್ಡ ಬ್ಯಾನರ್‌ಗಳನ್ನು ಉಡುಪಿ ಸುತ್ತಮುತ್ತ, 70 ದೊಡ್ಡ ಬ್ಯಾನರ್‌ಗಳು ಮಂಗಳೂರಿನಿಂದ ಕುಂದಾಪುರದ ವರೆಗೆ, 200 ಸಣ್ಣ ಬ್ಯಾನರ್‌ಗಳು ಮಂಗಳೂರಿನಿಂದ ಕುಂದಾಪುರ, ಉಡುಪಿಯಿಂದ ಕಾರ್ಕಳದವರೆಗೆ ಕಟ್ಟಲಾಗಿದೆ. ಕಮಾನುಗಳ ಸುತ್ತ ಪ್ಲಾಸ್ಟಿಕ್‌ನಿಂದ ತಯಾರಿಸಿದ ಬಣ್ಣದ ಹೊದಿಕೆಯನ್ನು ಹೊದಿಸಲಾಗುತ್ತಿತ್ತು. ಈ ಸ್ಥಾನದಲ್ಲಿ ಈಗ ಬಟ್ಟೆಗಳನ್ನೇ ಬಳಸಲಾಗಿದೆ. ಜನಪದ, ದೇಸೀ ಶೈಲಿ ಕಮಾನುಗಳಲ್ಲಿ ಎದ್ದು ಕಾಣುತ್ತಿದೆ.

ಶ್ರೀಅದಮಾರು ಮಠದ ಪರಂಪರೆಯಲ್ಲಿ ಪ್ರಸ್ತುತ ಪೀಠಾಧಿಪತಿಗಳು ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು. ಇವರು 32ನೆಯವರು. ಕಿರಿಯ ಪೀಠಾಧೀಶರು ಶ್ರೀಈಶಪ್ರಿಯತೀರ್ಥ ಶ್ರೀಪಾದರು. ಇವರು 33ನೆಯವರು. ಜ. 8ರಂದು ಪರ್ಯಾಯ ಸಂಚಾರವನ್ನು ಮುಗಿಸಿ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಪುರಪ್ರವೇಶ ಮಾಡಲಿದ್ದಾರೆ. ಈ ಸಂದರ್ಭ ಪ್ಲಾಸ್ಟಿಕ್‌ರಹಿತವಾಗಿ ನಗರ ಅಲಂಕರಣಗಳನ್ನು ಮಾಡಲಾಗಿದೆ.

ಅಂತಿಮ ಹಂತದಲ್ಲಿ
ಪ್ಲಾಸ್ಟಿಕ್‌ರಹಿತವಾಗಿ ಕಮಾನುಗಳು, ಬ್ಯಾನರ್‌ಗಳನ್ನು ಅಳವಡಿಸಲು ಪ್ರಯತ್ನಿಸಲಾಗಿದೆ. ಇವುಗಳ ಕೆಲಸ ಅಂತಿಮ ಹಂತದಲ್ಲಿದೆ.
-ಗೋವಿಂದರಾಜ್‌, ಶ್ರೀಕೃಷ್ಣ ಸೇವಾ ಬಳಗದ ಸಕ್ರಿಯ ಕಾರ್ಯಕರ್ತ

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.