ಪ್ಲಾಸ್ಟಿಕ್‌ ಬಳಕೆ -ಜಾಗೃತಿ ಅಗತ್ಯ: ಹಾಲಾಡಿ ಶ್ರೀನಿವಾಸ ಶೆಟ್ಟಿ

ಕೋಡಿಯಲ್ಲಿ ಜನಮನ ಸೆಳೆದ "ನಿರ್ವಾಣ' ಬೀಚ್‌ ಉತ್ಸವ

Team Udayavani, Jan 25, 2020, 8:55 PM IST

ras-19

ಕುಂದಾಪುರ: ಪರಿಸರಕ್ಕೆ ಹಾನಿಕಾರಕ ವಸ್ತು ಬಳಸುವುದನ್ನು ಕಡಿಮೆ ಮಾಡುವತ್ತ ನಾವೆಲ್ಲರೂ ಹೆಜ್ಜೆಯಿಡಬೇಕಿದೆ. ನೆಲ- ಜಲ – ಪರಿಸರ ಕಾಪಾಡು ವುದು ನಮ್ಮೆಲ್ಲರ ಕರ್ತವ್ಯ, ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಲ್ಲಿಸಲು ಕಷ್ಟವಾದರೂ, ಸಾಧ್ಯವಾದ ಮಟ್ಟಿಗೆ ಕಡಿಮೆ ಮಾಡಬೇಕು. ಅದಕ್ಕಿಂತಲೂ ಮುಖ್ಯವಾಗಿ ಪ್ಲಾಸ್ಟಿಕ್‌ ಬಳಕೆ ಕುರಿತು ಜಾಗೃತಿ ಮೂಡಿಸುವ ಕಾರ್ಯ ಎಲ್ಲ ಕಡೆ ನಡೆಯಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.

ಅವರು ಶನಿವಾರ ಕೋಡಿಯ ಕಡಲ ಕಿನಾರೆಯಲ್ಲಿ ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 50ನೇ ವಾರದ ಸ್ವತ್ಛತಾ ಆಂದೋಲನದ ಹಿನ್ನೆಲೆಯಲ್ಲಿ ಆಯೋಜಿಸಿದ ಎರಡು ದಿನಗಳ “ನಿರ್ವಾಣ 2020′ ಬೀಚ್‌ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ರೀಫ್ವಾಚ್‌, ಎಫ್.ಎಸ್‌.ಎಲ್‌. ಇಂಡಿಯಾ, ಅಮಲಾ ಭಾರತ ಅಭಿಯಾನ, ಎನ್‌.ಎಚ್‌. 66, ಗೀತಾನಂದ ಫೌಂಡೇಶನ್‌ ಮೊದಲಾದ ಸಂಘಟನೆಗಳ ಸಹಯೋಗದಲ್ಲಿ ಕೋಡಿಯ ಸೀವಾಕ್‌ ಸಮೀಪ ಈ ಉತ್ಸವ ಆಯೋಜನೆಗೊಂಡಿದೆ. ಬೀಚ್‌ ಉತ್ಸವವನ್ನು ಉದ್ಘಾಟಿಸಿದ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು ಮಾತನಾಡಿ, ಎಲ್ಲರೂ ಪ್ಲಾಸ್ಟಿಕ್‌ ಬಳಕೆ ಬಗ್ಗೆ ಕಡಿಮೆ ಮಾಡುವತ್ತ ದೃಢ ಸಂಕಲ್ಪ ಕೈಗೊಳ್ಳಬೇಕು. ಇದೊಂದು ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇದೊಂದು ಮಾದರಿ ಕಾರ್ಯಕ್ರಮವಾಗಿದೆ ಎಂದರು.

ಬೀಚ್‌ ಸ್ವಚ್ಛತೆಗೆ ಆದ್ಯತೆ
ಇಲ್ಲಿನ ಕೋಡಿ ಬೀಚ್‌ ಸೀವಾಕ್‌ ಆದ ಬಳಿಕ ದಿನದಿಂದ ದಿನಕ್ಕೆ ಜನ ಮನ್ನಣೆ ಗಳಿಸುತ್ತಿದ್ದು, ಪ್ರತಿ ನಿತ್ಯ ಇಲ್ಲಿಗೆ ಬರುವ ಪ್ರವಾಸಿಗರು, ವಿಹಾರಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹಾಗೆಯೇ ಬೀಚ್‌ನ ಸ್ವಚ್ಛತೆ ಕಾಪಾಡುವುದು ಕೂಡ ಅಗತ್ಯ. ಆ ನಿಟ್ಟಿನಲ್ಲಿ ಕ್ಲೀನ್‌ ಕುಂದಾಪುರ ತಂಡವು ಉತ್ತಮ ಕಾರ್ಯ ಮಾಡುತ್ತಿದೆ ಎಂದು ಭಾರತೀಯ ರೆಡ್‌ಕ್ರಾಸ್‌ನ ಕುಂದಾಪುರ ಘಟಕದ ಸಭಾಪತಿ ಜಯಕರ್‌ ಶೆಟ್ಟಿ ಹೇಳಿದರು.

ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್‌ನ ಡಾ| ರಶ್ಮಿ ಕುಂದಾಪುರ, ಕಲ್ಪನಾ ಭಾಸ್ಕರ್‌, ಕುಂದಾಪುರದ ರೈಲ್ವೇ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್‌ ಪುತ್ರನ್‌, ಗೋಪಾಡಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಜಿ. ಪುತ್ರನ್‌, ಉತ್ಸವದ ಸಂಘಟನ ಸಮಿತಿಯ ಭರತ್‌ ಬಂಗೇರ, ಕುಂದಾಪುರ ಎಎಸ್‌ಪಿ ಹರಿರಾಂ ಶಂಕರ್‌ ಅವರ ಪತ್ನಿ ಅನಂತ ಹರಿರಾಂ, ಅರುಣ್‌, ಶಕುಂತಳಾ, ಶ್ರೇಯಾ, ಶ್ರದ್ಧಾ, ಲೋಹಿತ್‌ ಬಂಗೇರ,
ಶಿವರಾಮ ಶೆಟ್ಟಿ, ಆಶಾ ಶೆಟ್ಟಿ, ಶಶಿಧರ, ಆದ್ಯಂತ್‌, ಅಭಿನಂದನ್‌, ರಕ್ಷಾ, ಅನುದೀಪ್‌ ಹೆಗಡೆ, ಸಚಿನ್‌ ನಕ್ಕತ್ತಾಯ,  ಅನಿಲ್‌ ಕುಮಾರ್‌ ಶೆಟ್ಟಿ, ವಿಖ್ಯಾತ್‌, ಸುವಿತ್‌, ಅವೀಶ್‌, ಶ್ರೀಚರಣ್‌ ಇದ್ದರು. ರವಿಕಿರಣ್‌ ನಿರ್ವಹಿಸಿದರು.

ಪ್ಲಾಸ್ಟಿಕ್‌ ಮುಕ್ತ ಉತ್ಸವ
ಕೋಡಿಯ ಕಡಲ ಕಿನಾರೆಯಲ್ಲಿ ಆಯೋಜಿಸಿದ ಈ ಎರಡು ದಿನಗಳ ಕಾಲ ನಡೆಯುವ “ನಿರ್ವಾಣ -2020′ ಬೀಚ್‌ ಉತ್ಸವದಲ್ಲಿ ಪ್ರಮುಖ ಆಕರ್ಷಣೆಯೆಂದರೆ ಪ್ಲಾಸ್ಟಿಕ್‌ ಮುಕ್ತ ಕಾರ್ಯಕ್ರಮ. ಇಲ್ಲಿ ಅಲಂಕಾರಕ್ಕಾಗಿ ಹಾಕಲಾದ ಎಲ್ಲ ವಸ್ತುಗಳು ಕಾಗದ, ಮತ್ತಿತರ ಪರಿಸರಕ್ಕೆ ಹಾನಿಯಿಲ್ಲದಂತಹ ವಸ್ತು, ಸಾಮಗ್ರಿಗಳನ್ನೇ ಬಳಸಲಾಗಿದೆ. ಇಲ್ಲಿ ತೆರೆಯಲಾದ ಎಲ್ಲ ಮಳಿಗೆಗಳಲ್ಲೂ ಪ್ಲಾಸ್ಟಿಕ್‌ ಮುಕ್ತ ವಸ್ತುಗಳನ್ನೇ ಮಾರಾಟಕ್ಕೆ ಇಡಲಾಗಿದೆ.

ಜನಸ್ನೇಹಿ ಬೀಚ್‌ಗೆ ಯೋಜನೆ
ನಾನು ಇಲ್ಲಿಗೆ ಬಂದ ಅನಂತರ 40 ನೇ ವಾರದ ಕ್ಲೀನ್‌ ಕುಂದಾಪುರ ಸ್ವತ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದೆ. ಆಗ ಪ್ರೇರಣೆಗೊಂಡು, ನಮ್ಮ ಪೊಲೀಸರನ್ನು ಕೂಡ ಭಾಗಿಯಾಗುವಂತೆ ಸಲಹೆ ನೀಡಿದೆ. ಈಗ 50ನೇ ವಾರದ ಸ್ವತ್ಛತಾ ಆಂದೋಲನ ನಡೆಯುತ್ತಿದೆ. ಇದೊಂದು ಉತ್ತಮ ಸಂದೇಶ ಸಾರುವ ಉತ್ಸವವಾಗಿದೆ. ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇಲ್ಲಿ ಮತ್ತಷ್ಟು ಮೂಲ ಸೌಕರ್ಯ, ಜನಸ್ನೇಹಿಯಾಗಿಸಲು ಸಿಸಿಟಿವಿ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಶಾಸಕರು, ಪುರಸಭೆ ಸಹಕಾರದಲ್ಲಿ ಮಾಡಲು ಯೋಜನೆ ರೂಪಿಸಲಾಗುತ್ತಿದೆ.
-ಹರಿರಾಂ ಶಂಕರ್‌, ಎಎಸ್‌ಪಿ ಕುಂದಾಪುರ

ಪರಿಸರ ಜಾಗೃತಿ
ಈ ಉತ್ಸವ ಪ್ಲಾಸ್ಟಿಕ್‌ ನಿರ್ಮೂಲನದ ಅವಶ್ಯಕತೆ ಹಾಗೂ ನಮ್ಮ ಸುತ್ತಮುತ್ತ ಇರಬೇಕಾದ ಸ್ವತ್ಛತೆ, ಕಸಗಳ ವಿಲೇವಾರಿಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶ ನಮ್ಮದು. ಮಹಿಳೆಯರಿಗೆ ಉತ್ತೇಜನ ಕೊಡುವಂತಹ ನಿಟ್ಟಿನಲ್ಲಿ ಮಹಿಳಾ ಉದ್ಯಮಿಗಳ ವ್ಯಾಪಾರ ಮಳಿಗೆ, ಪರಿಸರ ಸ್ನೇಹಿ ಪದಾರ್ಥಗಳ ಮಾರಾಟ ಮಳಿಗೆ ತೆರೆಯಲಾಗಿದೆ. ಒಟ್ಟು 15 ಮಳಿಗೆಗಳು ಇಲ್ಲಿವೆ. 2-3 ಜನರಿಂದ ಆರಂಭಗೊಂಡ ಈ ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ಈಗ 30 ಮಂದಿಯ ತಂಡವಾಗಿದೆ. ಕಳೆದೊಂದು ವಾರದಿಂದ ಈ ಉತ್ಸವಕ್ಕೆ ಸಿದ್ಧತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಆಯೋಜನೆ ಮಾಡಲು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯ ಸಹಕಾರದ ಅಗತ್ಯವಿದೆ.
-ಡಾ| ರಶ್ಮಿ, ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.