ಪೊಲೀಸ್‌ ಇಲಾಖೆಯ ಗೃಹ ರಕ್ಷಕರಿಗಿಲ್ಲ ಆರ್ಥಿಕ ರಕ್ಷೆ !

ಸರಿಯಾದ ಸಮಯಕ್ಕೆ ಬಾರದ ಸಂಬಳ ; ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಉತ್ತಮ ಸೇವೆ ,ಜೀವನ ಭದ್ರತೆಗಾಗಿ ಹೋರಾಟ

Team Udayavani, Aug 27, 2019, 5:26 AM IST

4640NEWS-5-7

ಉಡುಪಿ: ಸರಕಾರದ ಆರ್ಥಿಕ ಅನುದಾನದ ಕೊರತೆಯಿಂದ ಅವಿಭಜಿತ ಪೊಲೀಸ್‌ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹ ರಕ್ಷಕ ದಳದ ಸಿಬಂದಿಗೆ ಕಳೆದ 2 ತಿಂಗಳಿಂದ ಸಂಬಳ ದೊರೆತಿಲ್ಲ. ಹೀಗಾಗಿ ಪೊಲೀಸರೊಂದಿಗೆ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೈಜೋಡಿಸಿದವರ ಜೀವನದಲ್ಲಿ ಇದೀಗ ನೆಮ್ಮದಿ ಮಾಯವಾಗಿದೆ.

ಉಡುಪಿ: 500 ಗೃಹರಕ್ಷಕ ಸಿಬಂದಿ
ಉಡುಪಿ ಜಿಲ್ಲೆಯಲ್ಲಿ 500 ಮಂದಿ ಗೃಹರಕ್ಷಕರಿದ್ದು, ಅವರಲ್ಲಿ 132 ಜನ ಕರಾವಳಿ ಪೊಲೀಸ್‌ ಪಡೆ, 106 ಆರಕ್ಷಕರ ಠಾಣೆ, ಪ್ರವಾಸಿ ಮಿತ್ರದಲ್ಲಿ 10, ಗಣಿ ಇಲಾಖೆ 5, ಅಗ್ನಿಶಾಮಕ ದಳ 19, ನೆರೆ ನಿರ್ವಹಣೆ 10, ಜೈಲು ಕರ್ತವ್ಯ 10 ಜನರು ಗೃಹ ರಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ಪೊಲೀಸ್‌ ಇಲಾಖೆಯಡಿ ಕರ್ತವ್ಯ ನಿರ್ವಹಿಸುವವರಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುತ್ತಿಲ್ಲ.

ದ.ಕ.: 1000 ಗೃಹ ರಕ್ಷಕ ಸಿಬಂದಿ
ದ.ಕ. ಜಿಲ್ಲೆಯಲ್ಲಿ ಒಟ್ಟು 1,000 ಮಂದಿ ಗೃಹರಕ್ಷಕರಿದ್ದಾರೆ, ಅವರಲ್ಲಿ 400 ಜನರು ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 600 ಮಂದಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಖಾತೆಗೆ ನೇರ ಸಂದಾಯ
ಪೊಲೀಸ್‌ ಸಿಬಂದಿ ಕೊರತೆಯ ಕಾರಣದಿಂದಾಗಿ ಗೃಹ ಇಲಾಖೆ ಕೆಲವು ವರ್ಷಗಳ ಹಿಂದೆ ಗೃಹ ರಕ್ಷಕ ದಳದ ಸಿಬಂದಿಯನ್ನೇ ಗೌರವಧನದ ಆಧಾರದ ಮೇಲೆ ಸೇವೆಗೆ ನಿಯೋಜಿಸಿಕೊಂಡಿತ್ತು. ಆರಂಭದಲ್ಲಿ ಪೊಲೀಸ್‌ ಇಲಾಖೆ ಗೃಹ ರಕ್ಷಕರ ಸಂಬಳವನ್ನು ಇಲಾಖೆ ಮೂಲಕ ಪಾವತಿ ಮಾಡುತ್ತಿತ್ತು. ಆದರೆ ಕೆಲವು ಸಮಯದ ಹಿಂದೆ ಪೊಲೀಸ್‌ ಇಲಾಖೆ ಸಿಬಂದಿಯ ಬ್ಯಾಂಕ್‌ ಖಾತೆಗೆ ಗೌರವಧನವನ್ನು ನೇರವಾಗಿ ಸಂದಾಯ ಮಾಡಲಾಗುತ್ತಿತ್ತು. ಇದೀಗ ಸಿಬಂದಿಗಳ ಸಂಬಳ ಸಮಯಕ್ಕೆ ಸರಿಯಾಗಿ ಪಾವತಿಯಾಗುತ್ತಿಲ್ಲ ಎನ್ನುವ ಆರೋಪಗಳಿವೆ.

ಸಾಲಕ್ಕೆ ಮೊರೆ
ಪೊಲೀಸ್‌ ಕಾರ್ಯ ನಿರ್ವಹಿಸುತ್ತಿರುವ ಗೃಹ ರಕ್ಷಕ ದಳ ಸಿಬಂದಿಗಳಿಗೆ ಸದ್ಯ ಸಂಬಳವಿಲ್ಲದೆ ಜೀವನ ನಿರ್ವಹಣೆಗಾಗಿ ಸಾಲದ ಮೊರೆಹೋಗಿ, ಸಂಕಷ್ಟಕ್ಕೆ ಸಿಲುಕಿದ್ದಾರೆ.ಭದ್ರತೆಗಾಗಿ ಪರದಾಡುವ ಸ್ಥಿತಿ ಪೊಲೀಸ್‌ ಇಲಾಖೆ ವತಿಯಿಂದ ಪ್ರತಿದಿನಕ್ಕೆ 380 ರಂತೆ ಗೌರವಧನ ನೀಡಲಾಗುತ್ತದೆ. ತಿಂಗಳಪೂರ್ತಿ ಕೆಲಸ ಮಾಡಿದರೆ 9 ಸಾವಿರ ಸಂಬಳ ಸಿಗುತ್ತದೆ. ಅನಾರೋಗ್ಯ, ಇನ್ನಾವುದೋ ಕಾರಣಕ್ಕೆ ರಜೆ ಹಾಕಿದರೆ ಅದರಲ್ಲಿ ಕೂಡ ಕಡಿತವಾಗುತ್ತದೆ. ಗೃಹರಕ್ಷಕರು ಇವತ್ತು ಜೀವನ ಭದ್ರತೆಗಾಗಿ ಪರದಾಡುವ ಸ್ಥಿತಿ ಬಂದಿದೆ ಎಂದು ಗೃಹ ರಕ್ಷಕದಳದ ಸಿಬಂದಿಯೊಬ್ಬರು ಬೇಸರ ವ್ಯಕ್ತಪಡಿದರು.

ರಾಜ್ಯದ ಸಮಸ್ಯೆ
ಪೊಲೀಸ್‌ ಇಲಾಖೆಯಡಿ ಕರ್ತವ್ಯ ನಿರ್ವಹಿಸುವವರಿಗೆ ಇಲಾಖೆಯೇ ವೇತನ ನೀಡಬೇಕು. ಪ್ರಸ್ತುತ ಸರಕಾರದಿಂದ ಪೊಲೀಸ್‌ ಇಲಾಖೆಗೆ ಅನುದಾನ ಬಂದಿಲ್ಲ. ಇದರಿಂದಾಗಿ ಗೃಹರಕ್ಷಕ ಸಿಬಂದಿಗಳಿಗೆ ಕಾರಣ ವೇತನ ಪಾವತಿಯಾಗುತ್ತಿಲ್ಲ. ಇದು ರಾಜ್ಯದ ಸಮಸ್ಯೆಯಾಗಿದೆ.

ದ.ಕ. ಜಿಲ್ಲೆಯಲ್ಲಿ ಗೃಹ ರಕ್ಷಕ ಸಿಬಂದಿಗಳ ವೇತನ ಪಾವತಿಯಾಗಿದೆ. ಯಾವುದೇ ಸಮಸ್ಯೆಯಿಲ್ಲ.
-ಡಾ| ಮುರಲೀ ಮೋಹನ್‌ ಚೂಂತಾರು, ಸಮಾದೇಷ್ಟರು, ದ.ಕ. ಜಿಲ್ಲಾ ಗೃಹರಕ್ಷಕದಳ

ವೇತನ ಬರುತ್ತಿದೆ. ಕೆಲವು ಸಂದರ್ಭ ತಾಂತ್ರಿಕ ಕಾರಣಗಳಿಂದ ವೇತನ ಬಟವಾಡೆಯಲ್ಲಿ ತಡವಾಗಿರಬಹುದು.
– ಡಾ|ಪ್ರಶಾಂತ ಶೆಟ್ಟಿ, ಸಮಾದೇಷ್ಟರು, ಉಡುಪಿ ಜಿಲ್ಲಾ ಗೃಹರಕ್ಷಕದಳ.

-ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.