ಪೊಲಿಯೋ ಹನಿ ಅಮೃತಬಿಂದು: ಸಚಿವೆ ಡಾ| ಜಯಮಾಲಾ
Team Udayavani, Mar 11, 2019, 1:00 AM IST
ಉಡುಪಿ: ಪೋಲಿಯೋ ಹನಿ ಮಕ್ಕಳ ಬದುಕಿಗೆ ಅಮೃತಬಿಂದು ಇದ್ದಂತೆ. ಮಕ್ಕಳ ಭವಿಷ್ಯ ಆರೋಗ್ಯಕರವಾಗಿರುವ ದೃಷ್ಟಿಯಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಸಚಿವೆ ಡಾ| ಜಯಮಾಲಾ ಹೇಳಿದ್ದಾರೆ.
ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರವಿವಾರ ಮಗುವೊಂದಕ್ಕೆ ಪೊಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 77,740 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇಂದು ಲಸಿಕೆ ಹಾಕಿಸದ ಮಕ್ಕಳಿಗೆ ಸೋಮವಾರದಿಂದ 3 ದಿನಗಳ ಕಾಲ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ ಎಂದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಡಿಎಚ್ಒ ಡಾ| ಓಂ ಪ್ರಕಾಶ್ ಕಟ್ಟಿàಮನಿ, ಜಿಲ್ಲಾ ಸರ್ಜನ್ ಡಾ| ಮಧುಸೂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಪಲ್ಸ್ ಪೋಲಿಯೋ ನೋಡೆಲ್ ಅಧಿಕಾರಿ ಡಾ| ಶೀನಪ್ಪ, ಆರ್.ಸಿ.ಎಚ್. ಅಧಿಕಾರಿ ಡಾ| ಎಂ.ಜಿ. ರಾಮ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ಶಿಖಾ, ರೋಟರಿ ಕ್ಲಬ್ನ ಚಂದ್ರಶೇಖರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು