ರಾಜಕೀಯ ಸ್ವಾತಂತ್ರ್ಯದಿಂದ ರಾಮರಾಜ್ಯ, ಸ್ವರಾಜ್ಯದಿಂದ ಸುರಾಜ್ಯ: ಶ್ರೀರಾಜ್‌ ಗುಡಿ


Team Udayavani, Oct 3, 2019, 5:45 AM IST

0210UDKS1

ಉಡುಪಿ: ರಾಜಕೀಯ ಸ್ವಾತಂತ್ರ್ಯದಿಂದ ರಾಮರಾಜ್ಯವೂ, ಗಾಂಧೀಜಿಯವರ ಸ್ವರಾಜ್ಯ ಕಲ್ಪನೆ ಯಿಂದ ಗ್ರಾಮೀಣ ಬದುಕಿನ ಸುರಾಜ್ಯವೂ ಕೈಗೂಡುವಂತಾಗಬೇಕು ಎಂದು ಮಣಿಪಾಲದ ಸ್ಕೂಲ್‌ ಆಫ್ ಕಮ್ಯುನಿಕೇಶನ್‌ನ ಸಹಾಯಕ ಪ್ರಾಧ್ಯಾಪಕ ಶ್ರೀರಾಜ್‌ ಗುಡಿ ಆಶಯ ವ್ಯಕ್ತಪಡಿಸಿದರು.

ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದಿಂದ ಬುಧವಾರ ಆಯೋಜಿಸಿದ ಗಾಂಧಿ ಜಯಂತಿಯಂದು ಪ್ರಧಾನ ಉಪನ್ಯಾಸ ನೀಡಿದ ಅವರು ಪತ್ರಕರ್ತ, ರಾಜಕಾರಣಿ, ಮುತ್ಸದ್ದಿ, ಸಾಮಾಜಿಕ ಸುಧಾರಣೆಕಾರ, ಆರ್ಥಿಕ ತಜ್ಞ, ಪರಿಸರವಾದಿ, ಆರೋಗ್ಯದ ವಿಷಯದಲ್ಲಿ ವೈದ್ಯ ಹೀಗೆ ಅನೇಕಾನೇಕ ಬಗೆಗಳಲ್ಲಿ ಗಾಂಧಿಯವರನ್ನು ಅರ್ಥೈಸಬಹುದು, ಕಣ್ಣು ತೆರೆದು ನೋಡಿದರೆ ಬೇರೆ ಬೇರೆ ತೆರನಾದ ಗಾಂಧಿ ಕಾಣಿಸಿ ಕೊಳ್ಳುತ್ತಾರೆ ಎಂದರು.

ಗಾಂಧಿಯವರು ಸ್ವಾತಂತ್ರ್ಯ ಎನ್ನುವು ದನ್ನು ಸ್ವರಾಜ್ಯ (ಸೆಲ್ಫ್ ರೂಲ್‌) ಎಂದು ನೋಡಿದರು. ನಮಗೆ ನಾವೇ ಆಡಳಿತವನ್ನು ಮಾಡುವ ಬಗೆ ಇದು. ಈಗ ಸಿಕ್ಕಿದ ರಾಜಕೀಯ ಸ್ವಾತಂತ್ರ್ಯವನ್ನು ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಿಸಲಿಕ್ಕಾಗಿ ಗಾಂಧಿ ಪರಿಗಣಿಸಿದರು. ಸ್ವರಾಜ್ಯವನ್ನು ರಾಜಕೀಯ ಶಾಸ್ತ್ರವಾಗಿ ನೋಡದೆ ವ್ಯಕ್ತಿಗತವಾಗಿ ನೋಡ ಬೇಕೆಂದು ಹೇಳುತ್ತಿದ್ದರು. ಕೆಲವು ಬಾರಿ ಪ್ರಜಾಪ್ರಭುತ್ವದಲ್ಲಿ ನಿರಂಕುಶತೆಯೂ ಬರಬಹುದು, ನಾವೇ ಚುನಾಯಿಸಿದ ವ್ಯಕ್ತಿಗಳಿಗೆ ಅಹಂಕಾರ ಬಂದಾಗ ಅವರನ್ನು ಪ್ರಶ್ನಿಸುವ ಆತ್ಮಾನುಶಾಸನ ವನ್ನು ಅಳವಡಿಸಿದರೆ ಪ್ರಶ್ನಿಸುವ ಅಧಿಕಾರ ಬರುತ್ತದೆ ಎಂದು ಗಾಂಧಿ ನಂಬಿದ್ದರು ಎಂದು ಗುಡಿ ಹೇಳಿದರು.

ಗ್ರಾಮೀಣ ಭಾಗದ ಸುರಾಜ್ಯ ಸ್ಥಾಪನೆಯಾಗಬೇಕಾದರೆ ಅಲ್ಲಲ್ಲಿ ಸ್ಥಳೀಯವಾಗಿ ಉದ್ಯೋಗ ದೊರಕ ಬೇಕೆಂಬ ಕಲ್ಪನೆ ಅವರಿಗಿತ್ತು. ಉದಾಹರಣೆಗೆ ಇಲ್ಲಿನ ನೇಕಾರಿಕೆ ನಶಿಸುತ್ತಿದೆ. ನಾವು ನಿತ್ಯ ಖಾದಿಧಾರಿ ಗಳಾಗದಿದ್ದರೂ ವರ್ಷಕ್ಕೊಮ್ಮೆ ಸ್ಥಳೀಯವಾಗಿ ತಯಾರಾದ ಬಟ್ಟೆ ಖರೀದಿಸಿದರೂ ಸಾಕು. ಸ್ವಾತಂತ್ರ್ಯ, ಸ್ವರಾಜ್ಯ, ಸುರಾಜ್ಯವೆಂದರೆ ನನ್ನ ಸಮಾಜ, ನನ್ನ ಊರಿನ ಜನರಿಗೆ ಉದ್ಯೋಗ ಸಿಗುವಂತಹ ಮಾನಸಿಕತೆ ಬೆಳೆಯಬೇಕು. ದೂರದ ಅಮೆರಿಕಕ್ಕೆ ಹೋಗುವ ಬದಲು ಗ್ರಾಮಗಳಲ್ಲಿ ಅದನ್ನೇ ಕಾಣುವ ದಿನಗಳು ಬರಬೇಕಾಗಿದೆ ಎಂದರು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಜಿ. ವಿಜಯ, ಪ.ಪೂ.ಕಾ. ಪ್ರಾಂಶುಪಾಲೆ ಮಾಲತಿದೇವಿ ಉಪಸ್ಥಿತರಿದ್ದರು. ಗಾಂಧಿ ಅಧ್ಯಯನ ಕೇಂದ್ರದ ಸಂಶೋಧಕ ಯು. ವಿನೀತ್‌ ರಾವ್‌ ಸ್ವಾಗತಿಸಿ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುಚಿತ್‌ ಕೋಟ್ಯಾನ್‌ ಕಾರ್ಯಕ್ರಮ ನಿರ್ವಹಿಸಿದರು.

ಅಮೆರಿಕಕ್ಕೆ ಹೋಗದ ಗಾಂಧಿಗೆ ಈಗಲ್ಲಿ ಅಧ್ಯಯನ
ಈಗ ಗಾಂಧಿಯವರ 150ನೇ ಜನ್ಮಜಯಂತಿ ಸಂದರ್ಭ ಅಮೆರಿಕಕ್ಕೆ ಹೋಗದ ಗಾಂಧಿ ಕುರಿತು ಅಲ್ಲಿ ಅಧ್ಯಯನ ನಡೆಯುತ್ತಿದೆ. ಅವರನ್ನು ವಿರೋಧಿಸಿದ ಐರೋಪ್ಯ ರಾಷ್ಟ್ರಗಳಲ್ಲಿ ಈಗ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಆಗುತ್ತಿದೆ. ಈಗಲೂ ಗಾಂಧಿ ವಿಚಾರ ಯಶಸ್ಸಾಗುತ್ತಿದೆ ಎನ್ನುವುದಕ್ಕೆ ಅಣ್ಣಾ ಹಜಾರೆ, ನರ್ಮದಾ ಬಚಾವೋ ಆಂದೋಲನ ಸಾಕ್ಷಿ. ದಿಲ್ಲಿಯಲ್ಲಿ ಶಿಕ್ಷಣ ಸಚಿವರು ಸರಕಾರಿ ಶಾಲೆಗಳಲ್ಲಿ ನೈತಿಕ ಶಿಕ್ಷಣವನ್ನು ಜಾರಿಗೊಳಿಸುವ ಮೂಲಕ ಯಶಸ್ಸು ಕಾಣುತ್ತಿದ್ದಾರೆ. ಈಗ ಗಾಂಧಿ ಇರುತ್ತಿದ್ದರೆ ಇಂಟರ್‌ನೆಟ್‌ ತಂತ್ರಜ್ಞಾನವನ್ನೂ ಒಪ್ಪಿಕೊಳ್ಳುತ್ತಿದ್ದರು ಎಂದು ಶ್ರೀರಾಜ್‌ ಗುಡಿ ಹೇಳಿದರು.

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.