ಶ್ರೀಗಳಿಗೂ ರಾಜಕೀಯಕ್ಕೂ ಅದೇನೋ ನಂಟು!


Team Udayavani, Dec 30, 2019, 3:07 AM IST

srigaligu

ಮಣಿಪಾಲ: ಕಾವಿ ವಸ್ತ್ರ, ಅನುಷ್ಠಾನ, ಉಪಾಸನೆಗಳ ಕಟ್ಟುನಿಟ್ಟು ಇದ್ದರೂ ಪೇಜಾವರ ಶ್ರೀಗಳಿಗೂ ರಾಜಕೀಯಕ್ಕೂ ಅದೇನೋ ನಂಟು. ಕೊನೆಯವರೆಗೂ ರಾಜಕಾರಣಿಗಳು, ರಾಜಕೀಯ ಅವರನ್ನು ಬಿಟ್ಟಿರಲಿಲ್ಲ. ರಾಜಕೀಯ ವಿದ್ಯಮಾನಗಳ ಬಗ್ಗೆ ಅವರು ನಿರಂತರವಾಗಿ ಪ್ರತಿಕ್ರಿಯಿಸುತ್ತಿದ್ದರು. ಇತ್ತೀಚೆಗೆ ಕರ್ನಾಟಕದ ವಿದ್ಯಮಾನಗಳ ಬಗ್ಗೆಯೇ ಅವರು ಪ್ರತಿಕ್ರಿಯಿಸಿದ್ದು, ಈಗಿನ ರಾಜಕೀಯದಲ್ಲಿ ನೈತಿಕತೆ ಕುಸಿದಿದೆ ಎಂದು ನೇರವಾಗಿಯೇ ಹೇಳಿದ್ದರು.

ಪೇಜಾವರ ಶ್ರೀಗಳ ಮತ್ತು ರಾಜಕೀಯದ ನಂಟು ಇಂದು ನಿನ್ನೆಯದಲ್ಲ. ಅಷ್ಟಮಠಗಳಲ್ಲೇ ಅತಿ ಹೆಚ್ಚು ರಾಜಕೀಯ ಸಂಪರ್ಕ ಹೊಂದಿದ್ದ ಯತಿವರೇಣ್ಯರು ಅವರು. ಈ ಸಂಪರ್ಕಗಳನ್ನು ಅವರು ಸ್ವಂತಕ್ಕಾಗಿ ಬಳಸಿಕೊಂಡಿದ್ದಿಲ್ಲ. ಬದಲಿಗೆ ತಾನು ಮಾಡುತ್ತಿರುವ ಕೆಲಸಗಳಿಗಾಗಿ ಬಳಸಿಕೊಂಡಿದ್ದರು. ಸಂತ ಸಮ್ಮೇಳನ, ವಿಶ್ವಹಿಂದೂ ಪರಿಷತ್‌ನೊಂದಿಗಿನ ಒಡನಾಟದೊಂದಿಗೆ ಅವರಿಗೆ ರಾಜಕೀಯ ವ್ಯಕ್ತಿಗಳ ಪರಿಚಯ ಲಭ್ಯವಾಗಿತ್ತು.

ರಾಜ್ಯದ ಹಿಂದಿನ ಮುಖ್ಯಮಂತ್ರಿಗಳಾಗಿದ್ದ ನಿಜಲಿಂಗಪ್ಪನವರಿಂದ ಹಿಡಿದು ಪ್ರಧಾನಿ ನರೇಂದ್ರ ಮೋದಿಯವರೆಗೆ ಅವರಿಗೆ ರಾಜಕಾರಣಿಗಳೊಂದಿಗೆ ಸಂಪರ್ಕ ಇತ್ತು. ಇದಕ್ಕೆ ಕಾಂಗ್ರೆಸ್‌, ಬಿಜೆಪಿ ಎಂಬ ಭೇದ ಇರಲಿಲ್ಲ. ಅವರ ಅಂತಿಮ ದಿನಗಳ ಸಂದರ್ಭದ ಪಕ್ಷ- ಜಾತಿ, ಮತಗಳ ಭೇದವಿಲ್ಲದೆ ಹಲವಾರು ರಾಜಕೀಯ ನಾಯಕರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದರು.

ಪೇಜಾವರ ಶ್ರೀಗಳು ಎಲ್ಲ ರಾಜಕೀಯ ವ್ಯಕ್ತಿಗಳೊಂದಿಗೆ ಪರಿಚಯರಾಗಿದ್ದರಿಂದಲೋ ಏನೋ, ಅವರ ಮಾತಿಗೆ ರಾಜಕೀಯ ವಲಯದಲ್ಲಿ ವಿಶೇಷ ತೂಕ ಇರುತ್ತಿತ್ತು. ಕೆಲವು ನಾಯಕರಂತೂ ಪೇಜಾವರರ ಮಾತುಗಳನ್ನು ಮೀರಿ ನಡೆಯೆವು ಎಂಬಷ್ಟರ ಮಟ್ಟಿಗೆ ಗೌರವ ಭಾವ ಹೊಂದಿದ್ದರು. ಇದೇ ಕಾರಣಕ್ಕೆ ಪ್ರಮುಖ ರಾಜಕೀಯ ವಿದ್ಯಮಾನಗಳಾದಾಗ ಪತ್ರಕರ್ತರು ಪೇಜಾವರ ಶ್ರೀಗಳ ಪ್ರತಿಕ್ರಿಯೆ ಕೇಳುತ್ತಿದ್ದರು. ಅವರ ಅಭಿಪ್ರಾಯವೂ ಒಂದು ಚರ್ಚೆಗೆ ನಾಂದಿಯಾಗುತ್ತಿತ್ತು.

ರಾಮಜನ್ಮಭೂಮಿ ಆಂದೋಲನದ ಬಳಿಕವಂತೂ ಪೇಜಾವರ ಶ್ರೀಗಳ ಹೆಸರು ರಾಜಕೀಯ ವಲಯದಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿತ್ತು. ಅವರು ಆಂದೋಲನದ ಮುಂಚೂಣಿಯಲ್ಲಿದ್ದದ್ದು ಮತ್ತು ಅವರ ನಿರ್ಧಾರಗಳಿಗೆ ಸಿಕ್ಕ ಮನ್ನಣೆಯಿಂದಾಗಿ ರಾಜಕೀಯ ವಲಯ ಅವರ ಮಾತುಗಳನ್ನು ಕೇಳುತ್ತಿತ್ತು. ಧರ್ಮವು ಪ್ರಬಲವಾಗಿದ್ದು ರಾಜಕೀಯಕ್ಕೆ ನಿರ್ದೇಶನ ನೀಡುವಂತಿರಬೇಕು. ಇದರಿಂದ ಬೆಳವಣಿಗೆ ಸಾಧ್ಯ ಎಂಬ ರೀತಿಯ ಆಶಯವನ್ನು ಅವರು ಹೊಂದಿದ್ದರು. ಇದಕ್ಕೆ ರಾಜಕಾರಣಿಗಳು ಸಲಹೆ ಕೇಳಿದರೆ ಅವರು ತುಂಬು ಮನಸ್ಸಿನಿಂದ ಮಾರ್ಗದರ್ಶನ ಮಾಡುತ್ತಿದ್ದುದು ನಿದರ್ಶನವಾಗಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.