ಅಂಚೆಗಿದೆ ಸಂಬಂಧ ಬೆಸೆಯುವ ಶಕ್ತಿ: ಚಕ್ರವರ್ತಿ ಸೂಲಿಬೆಲೆ


Team Udayavani, Jul 2, 2018, 4:45 AM IST

chakaravarthy-1-7.jpg

ಉಡುಪಿ: ಈಗಿನ ಆಧುನಿಕ ಸಂವಹನ ವ್ಯವಸ್ಥೆಗಳು ವೇಗವಾಗಿರಬಹುದು. ಆದರೆ ಸಂಬಂಧಗಳನ್ನು ಬೆಸೆಯುವ, ಭಾವನೆಗಳನ್ನು ಹಾಗೆಯೇ ಉಳಿಸುವ ಶಕ್ತಿ ಇರುವುದು ಅಂಚೆಯಣ್ಣ ತಂದು ಕೊಡುವ ಪತ್ರಗಳಿಗೆ ಮಾತ್ರ. ಅಂತಹ ಪತ್ರ ಸಂವಹನ ಮತ್ತೆ ಹೆಚ್ಚಾಗಬೇಕು ಎಂದು ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು. ರವಿವಾರ ಉಡುಪಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದ ಡಾ| ಶಿವರಾಮ ಕಾರಂತ ವೇದಿಕೆಯಲ್ಲಿ ಅಂಚೆ ಮನೋರಂಜನಾ ಕೂಟ ಉಡುಪಿ, ಮಣಿಪಾಲ ಹಾಗೂ ಕುಂದಾಪುರ ಅವರ ಸಹಯೋಗದಲ್ಲಿ ಜರಗಿದ ಪ್ರಥಮ ಅಂಚೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಶಿಖರೋಪನ್ಯಾಸ ನೀಡಿದರು.

ಅಂಚೆ ಸೇವೆ ವಿಸ್ತಾರವಾದಂತೆ ಬರವಣಿಗೆಗೆ ಹೆಚ್ಚು ಪ್ರೋತ್ಸಾಹ ದೊರೆತಂತಾಗುತ್ತದೆ. ಅಂಚೆ ತಲುಪಿಸುವವನು ಹೃದಯವಂತ ಆಗಿರುವುದರಿಂದಲೇ ಅಂಚೆ ವ್ಯವಸ್ಥೆ ಗಟ್ಟಿಯಾಗಿ ಉಳಿದುಕೊಂಡಿದೆ. ಇಂದಿಗೂ ಅನೇಕ ಸೈನಿಕರು ಯುದ್ಧ ಭೂಮಿಯಿಂದ ರವಾನಿಸುವ ಪತ್ರಗಳು ಅವರ ಮನೆಗಳನ್ನು ತಲುಪುತ್ತಿವೆ. ಸೈನಿಕರು ವೀರ ಮರಣವನ್ನಪ್ಪಿದರೂ ಅವರ ಪತ್ರ, ಭಾವನೆಗಳು ನಮ್ಮೊಂದಿಗಿವೆ. ಅಂಚೆ ಇಲಾಖೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಬೆಳೆಯುತ್ತಿದೆ. ಸಿಬಂದಿ ತಂತ್ರಜ್ಞಾನದಿಂದ ದೂರವಾಗಬಾರದು. ತಂತ್ರಜ್ಞಾನವನ್ನು ಒಪ್ಪಿಕೊಂಡು ನಮ್ಮತನವನ್ನು ಉಳಿಸಿಕೊಳ್ಳುತ್ತಾ ಬೆಳೆಯಬೇಕು. ಅಂಚೆ ವ್ಯವಸ್ಥೆ ನೂರುಕಾಲ ಪ್ರಭಾವಿಯಾಗಿಯೇ ಉಳಿಯುವುದರಲ್ಲಿ ಸಂದೇಹವಿಲ್ಲ ಎಂದು ಅವರು ಹೇಳಿದರು.

ಸಾಹಿತ್ಯದಿಂದ ಸಂತೃಪ್ತಿ
ಸಾಹಿತ್ಯ ಅಂತರಂಗಕ್ಕೆ ಬೆಳಕು ಕೊಡುವಂತಿರಬೇಕು. ಅಕ್ಷರಗಳಿಂದ ಮಾತ್ರ ಅಂತರಂಗ ಅರಳಿಸಲು ಸಾಧ್ಯ. ಸಾಹಿತ್ಯ ಚಟುವಟಿಕೆಗಳು ಮರೆಯಾಗಬಾರದು. ಮನಸ್ಸು ಕ್ಷೋಭೆಗೊಳಗಾದಾಗ ನೆಮ್ಮದಿ ದೊರೆಯಲು ಸಾಹಿತ್ಯ ಬೇಕು ಎಂದು ಸೂಲಿಬೆಲೆ ಅಭಿಪ್ರಾಯಪಟ್ಟರು.

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಸಮ್ಮೇಳನಾಧ್ಯಕ್ಷ ರಾಜಶೇಖರ ಭಟ್‌, ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್‌, ಸ್ವಾಗತ ಸಮಿತಿ ಅಧ್ಯಕ್ಷ ಸೂರ್ಯನಾರಾಯಣ ರಾವ್‌ ಉಪಸ್ಥಿತರಿದ್ದರು. ಕೋಶಾಧಿಕಾರಿ ಸುರೇಶ್‌ ಕೆ. ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.