ರೋಸಿ ಹೋದ ಗ್ರಾಮಸ್ಥರು, ಪ್ರತಿಭಟನೆಗೆ ಸಜ್ಜು​​​​​​​


Team Udayavani, Jun 12, 2018, 6:05 AM IST

power-cut-ss.jpg

ಕೋಟೇಶ್ವರ: ಗೋಪಾಡಿ, ಬೀಜಾಡಿ, ಕೋಟೇಶ್ವರ, ವಕ್ವಾಡಿ, ಕಟೆRರೆ, ಕಾಳಾವರ, ಹುಣ್ಸೆಮಕ್ಕಿ ಪರಿಸರದಲ್ಲಿ ಕಳೆದ 10 ದಿನಗಳಿಂದ ವಿದ್ಯುತ್‌ ಕಣ್ಣುಮುಚ್ಚಾಲೆ ಆಡುತ್ತಿದ್ದು, ಈ ವಿದ್ಯಮಾನದಿಂದ  ರೋಸಿದ ಗ್ರಾಮಸ್ಥರು ಮುಂದಿನ 2 ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದಲ್ಲಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಬೀಜಾಡಿ ಕಡಲ ತಡಿಯ ನಿವಾಸಿಗಳಿಗೆ ಕಳೆದ 1 ವಾರದಿಂದ ನಿರಂತರ ವಿದ್ಯುತ್‌ ಖೋತಾ ನಡೆಯುತ್ತಿದ್ದು ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಗಾಳಿ ಮಳೆಯ ನೆಪವೊಡ್ಡಿ ಹಾರಿಕೆಯ ಉತ್ತರ ನೀಡುತ್ತಿರುವುದಾಗಿ ಇಲ್ಲಿನ ಗ್ರಾಮಸ್ಥರು ಅಳಲನ್ನು ತೋಡಿಕೊಂಡಿದ್ದಾರೆ. ಮೂಡುಗೋಪಾಡಿ ಹಾಗೂ ವಕ್ವಾಡಿ ಪರಿಸರದಲ್ಲಿ ದಿನಂಪ್ರತಿ ಬೆಳಗ್ಗೆಯಿಂದ ಸಂಜೆಯ ತನಕ ಮನಬಂದಂತೆ ವಿದ್ಯುತ್‌ ನಿಲುಗಡೆಗೊಳಿಸುತ್ತಿರುವುದರ ಬಗ್ಗೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅಲ್ಲಲ್ಲಿ ಮರದ ರೆಂಬೆ ಕೊಂಬೆಗಳು ಮುರಿದು ಬಿದ್ದಿರುವುದರಿಂದ ವಿದ್ಯುತ್‌ ಪ್ರವಾಹಕ ತಂತಿಗಳು ತುಂಡಾಗಿದ್ದು ದುರಸ್ತಿ ಕಾರ್ಯ ನಡೆಯುತ್ತಿದೆ ಎಂಬ ಉತ್ತರದೊಡನೆ ಇಡೀ ದಿನ ವಿದ್ಯುತ್‌ ನಿಲುಗಡೆಗೊಳಿಸುತ್ತಿರುವುದು ಈ ಭಾಗದ ಮಂದಿಗೆ ನುಂಗಲಾರದ ತುತ್ತಾಗಿದೆ.

ದಿನಂಪ್ರತಿ ರೆಂಬೆಕೊಂಬೆಗಳು ತುಂಡಾಗುವುದೇ ಎಂಬ ಪ್ರಶ್ನೆ ಉದ್ಭವಿಸಿದ್ದು, ಹಾಗಿದ್ದಲ್ಲಿ ಮಳೆಗಾಲದ ಆರಂಭದ ಹಂತದಲ್ಲಿ ಆಯಾಯ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ವಿದ್ಯುತ್‌ ಪ್ರವಹನ ತಂತಿಗಳಿಗೆ ಚಾಚಿರುವ  ಮರಗಳ ರೆಂಬೆ ಕೊಂಬೆಗಳನ್ನು ಕಡಿಯುವ ಜವಾಬ್ದಾರಿ ಇಲಾಖೆಗೆ ಇದ್ದಿಲ್ಲವೇ ಎಂಬ ಪ್ರಶ್ನೆಗೆ ಉತ್ತರವಿಲ್ಲದಾಗಿದೆ. ಶಾಲಾ ವಿದ್ಯಾರ್ಥಿಗಳು ಸಹಿತ ಮನೆಮಂದಿಗೆ ಕಿರಿಕಿರಿ ಉಂಟುಮಾಡುತ್ತಿರುವ ವಿದ್ಯುತ್‌ ಕಣ್ಣು ಮುಚ್ಚಾಲೆಯಿಂದಾಗಿ ಗೃಹಿಣಿಯರು ಅಡುಗೆಗೆ ಬೇಕಾಗುವ ಪದಾರ್ಥಗಳ ತಯಾರಿಯಲ್ಲಿಯೂ ಆಗಿರುವ ಸಮಸ್ಯೆಯಿಂದಾಗಿ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಇಲಾಖೆಯ ಪಲಾಯನವಾದ…!
ಕುಂದಾಪುರ ಮೆಸ್ಕಾಂ ಇಲಾಖೆಯ 230382 ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗ ಅಲ್ಲಿ ಯಾವುದೇ ಉತ್ತರ ದೊರಕುತ್ತಿಲ್ಲ. ಇಲಾಖೆಯ ಮುಖ್ಯಸ್ಥರಿಗೆ ಕರೆಮಾಡಿದರೆ “ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದಾರೆ ಸ್ವಲ್ಪ ಸಮಯದ ನಂತರ ಕರೆ ಮಾಡಿ’ ಎಂಬ ಧ್ವನಿ ಸದಾ ಕಾಲ ಕೇಳಿಬರುತ್ತಿರುವುದು ಇಲಾಖೆಯ ಪಲಾಯನವಾದವೇ ಎಂಬ ಪ್ರಶ್ನೆಗೆ ಅವರೇ ಉತ್ತರ ನೀಡಬೇಕಾಗಿದೆ ಎಂದು  ಸತೀಶ್‌ ಶೆಟ್ಟಿ ವಕ್ವಾಡಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇಲಾಖೆ ಬದ್ಧ
ವಿದ್ಯುತ್‌ ಕಂಬಗಳಲ್ಲಿನ ಸಮಸ್ಯೆ ನಿಭಾಯಿಸುವಲ್ಲಿ ಇಲಾಖೆ ಬದ್ಧ. ಹಿರಿಯಡ್ಕದಲ್ಲಿನ ಮುಖ್ಯಕೇಂದ್ರದ ವಿದ್ಯುತ್‌ ಪ್ರವಹನದಲ್ಲುಂಟಾಗುತ್ತಿರುವ ದೋಷಗಳಿಂದಾಗಿ ಈ ಭಾಗದಲ್ಲಿ ವಿದ್ಯುತ್‌ ನಿಲುಗಡೆ ಅನಿವಾರ್ಯವಾಗಿದೆ. ಬಳಕೆದಾರರಿಗೆ ತೊಂದರೆಯಾಗದಂತೆ ಮುಂದಿನ ದಿನಗಳಲ್ಲಿ ಜಾಗƒತೆ ವಹಿಸಿ ವಿದ್ಯುತ್‌ ಸರಬರಾಜು ಮಾಡುವುದರಲ್ಲಿ ಆಗಿರುವ ತೊಂದರೆನ್ನು ನಿಭಾಯಿಸಲಾಗುವುದು.
– ರಾಕೇಶ್‌, 
ಮೆಸ್ಕಾಂ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಕುಂದಾಪುರ

ಪ್ರತಿಭಟನೆ ಅವಶ್ಯ
ಸಣ್ಣ ಗಾಳಿಮಳೆಗೆ ವಿದ್ಯುತ್‌ ನಿಲುಗಡೆಗೊಳಿಸುತ್ತಿರುವ ಇಲಾಖೆಯ ಕಾರ್ಯವೈಖರಿ ವಿದ್ಯುತ್‌ ಬಳಕೆದಾರರಿಗೆ ಭಾರೀ ತೊಂದರೆ ಉಂಟುಮಾಡಿದೆ. ದಿನವಿಡೀ ವಿದ್ಯುತ್‌ ಕಡಿತಗೊಳಿಸಿ ರಾತ್ರಿ ಮತ್ತೆ ಅದೇ ಚಾಳಿಯನ್ನು ಮುಂದುವರಿಸುತ್ತಿರುವ ಇಲಾಖೆಯ ಈ ನೀತಿ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಶೀಘ್ರ ಕ್ರಮಕೈಗೊಳ್ಳದಿದ್ದಲ್ಲಿ ಮೆಸ್ಕಾಂ ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸುವುದು ಅನಿವಾರ್ಯವಾದೀತು.
– ವೆಂಕಟೇಶ್‌ ಬೀಜಾಡಿ, 
ಗ್ರಾ.ಪಂ. ಸದಸ್ಯ.

ಇಲಾಖೆಯ ನಿರ್ಲಕ್ಷ್ಯ
ಕಳೆದ 10 ದಿನಗಳಿಂದ ಕಟೆRರೆ, ಕೋಟೇಶ್ವರ, ಹಂಗಳೂರು, ಕಾಳಾವರ, ಗೋಪಾಡಿ, ಬೀಜಾಡಿ, ವಕ್ವಾಡಿ ಪರಿಸರದಲ್ಲಿ ಪದೇಪದೇ ವಿದ್ಯುತ್‌ ನಿಲುಗಡೆಗೊಳಿಸುವುದಲ್ಲದೇ ಮಧ್ಯರಾತ್ರಿ 12ರ ಅನಂತರ ಮುಂದಿನ ದಿನ ಬೆಳಗ್ಗೆ 10 ಗಂಟೆ ತನಕ ವಿದ್ಯುತ್‌ ನೀಡದಿರುವುದು ಇಲಾಖೆಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ 
– ಶೇಷಗಿರಿ ಗೋಟ,ಬೀಜಾಡಿ ನಿವಾಸಿ

ಪ್ರತಿಭಟನೆಯ ಎಚ್ಚರ
ಕೋಟೇಶ್ವರ, ಗೋಪಾಡಿ, ಬೀಜಾಡಿ, ವಕ್ವಾಡಿ ಪರಿಸರದಲ್ಲಿ ಮನಬಂದಂತೆ ವಿದ್ಯುತ್‌ ಕಡಿತಗೊಳಿಸುತ್ತಿರುವ ಮೆಸ್ಕಾಂ ಇಲಾಖೆಯು ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕಾಗಿದೆ. ಮಳೆಗಾಲವಿಡೀ ಇದೇ ಚಾಳಿ ಮುಂದುವರಿಸುವ ಉದ್ದೇಶವಿದ್ದಲ್ಲಿ ತಾಲೂಕು ಮಟ್ಟದ ಪ್ರತಿಭಟನೆ ಅನಿವಾರ್ಯವಾದೀತು.
– ಭಾ.ಕಿ.ಸಂ. ಕೋಟೇಶ್ವರ

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.