ಬಹಿರಂಗ ಕ್ಷಮೆ ಯಾಚಿಸದಿದ್ದರೆ 10 ಕೋ.ರೂ. ಮಾನನಷ್ಟ ದಾವೆ


Team Udayavani, Mar 23, 2018, 8:30 AM IST

Pramod-Madhwaraj-600.jpg

ಉಡುಪಿ: ಸಿಂಡಿಕೇಟ್‌ ಬ್ಯಾಂಕಿನಲ್ಲಿ ಅಧಿಕ ಮೊತ್ತದ ಸಾಲಕ್ಕೆ ಕಡಿಮೆ ಮೌಲ್ಯದ ಆಸ್ತಿ ಅಡವಿರಿಸಿದ್ದಾರೆ ಎಂದು ಆರೋಪಿಸಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುವಂತೆ ಮಾಡಿ ಮಾನಹಾನಿಗೈದಿರುವ ಬೆಂಗಳೂರಿನ ಟಿ.ಜೆ. ಅಬ್ರಹಾಂ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ 10 ಕೋ.ರೂ. ಮಾನನಷ್ಟ ಪ್ರಕರಣ ಹೂಡಲಾಗುವುದು ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಉಡುಪಿಯಲ್ಲಿ ಗುರುವಾರ ಮಾಧ್ಯಮಗಳಿಗೆ ತಿಳಿಸಿದರು. ಟಿ.ಜೆ. ಅಬ್ರಹಾಂ ಮಾಡಿರುವ ಆರೋಪ ಸಂಪೂರ್ಣ ಸುಳ್ಳಿನಿಂದ ಕೂಡಿದೆ. ರಾಜ್ಯ, ರಾಷ್ಟ್ರ ಮಟ್ಟದ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಇದರಿಂದ ತನ್ನ ಬಗ್ಗೆ ಅಪಪ್ರಚಾರವಾಗಿದೆ. ಹಾಗಾಗಿ ವಕೀಲ ಎಂ. ಶಾಂತಾರಾಮ್‌ ಶೆಟ್ಟಿ ಅವರ ಮೂಲಕ ಮಾ. 21ರಂದು ನೋಟಿಸು ಕಳುಹಿಸಲಾಗಿದ್ದು, 3 ದಿನಗಳ ಒಳಗೆ ಅವರು ಪತ್ರಿಕಾಗೋಷ್ಠಿ ನಡೆಸಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗುವುದು ಎಂದು ಪ್ರಮೋದ್‌ ಹೇಳಿದರು.

ನಾನು ಬಹಳ ಕಷ್ಟಪಟ್ಟು ವ್ಯಕ್ತಿತ್ವವನ್ನು ಬೆಳೆಸಿಕೊಂಡು ರಾಜಕೀಯವಾಗಿ ಹೆಸರು ಗಳಿಸಿದ್ದೇನೆ. ಅದನ್ನು ಕ್ಷಣಾರ್ಧದಲ್ಲಿ ನಾಶಗೊಳಿಸುವ ಹುನ್ನಾರ ಮಾಡಲಾಗಿದೆ. ಚುನಾವಣೆಗೆ ಸ್ಪರ್ಧಿಸುವಾಗ ನಾನು ಚುನಾವಣಾ ಆಯೋಗಕ್ಕೆ ಎಲ್ಲ ಆಸ್ತಿ ವಿವರ ಸಲ್ಲಿಸುತ್ತೇನೆ. ಅಲ್ಲಿಯವರೆಗೆ ನನ್ನ ಬ್ಯಾಂಕಿಂಗ್‌ ವಿವರವನ್ನು ಯಾರಿಗೂ ಕೊಡುವ ಅಗತ್ಯ ಇಲ್ಲ. ಸಾಲ ಪಡೆದುದಕ್ಕಿಂತ ಕಡಿಮೆ ಮೌಲ್ಯದ ದಾಖಲೆಯನ್ನು ಬ್ಯಾಂಕಿಗೆ ನೀಡಿದ್ದೇನೆ ಎಂದು ಆರೋಪ ಮಾಡಿರುವ ಅವರಿಗೆ ಅನ್ಯ ದಾಖಲೆಗಳ ಬಗ್ಗೆ ತಿಳಿದಿಲ್ಲ ಎಂದು ಪ್ರಮೋದ್‌ ಹೇಳಿದರು.

ಮಾಜಿಗಳಿಬ್ಬರ ಷಡ್ಯಂತ್ರ?
ಆರೋಪ ಮಾಡಿದವರು ಇಲ್ಲಿನವರಲ್ಲ, ಬೆಂಗಳೂರಿನವರು. ಈ ಷಡ್ಯಂತ್ರದ ಹಿಂದೆ ಅನ್ಯ ಪಕ್ಷದಲ್ಲಿರುವ ಇಬ್ಬರ ಪಾತ್ರವಿರಬಹುದು ಎಂದುಕೊಂಡಿದ್ದೇನೆ. ಒಬ್ಬರು ನಾನು ಬಿಜೆಪಿಗೆ ಬಾರದಂತೆ ತಡೆಯುವ ಅದೇ ಪಕ್ಷದ ಮಾಜಿ ನಾಯಕ; ಇನ್ನೊಬ್ಬರು ನಮ್ಮಲ್ಲಿ ಮಾಜಿಯಾಗಿ ಅಲ್ಲಿಗೆ ಹೋದವರು ಇರಬಹುದು ಎಂದು ತಿಳಿಸಿದರು.

ಬಿಜೆಪಿಯಿಂದ ಹಿಂಸೆ: ಸಿಎಂ ಉತ್ತರಿಸಬೇಕು
ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯವರು ಹಿಂಸೆ ನೀಡುತ್ತಿದ್ದಾರೆ ಎನ್ನುವ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಮೋದ್‌, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆಂದು ಗೊತ್ತಿಲ್ಲ. ಅವರಿಗೆ ಗುಪ್ತಚರ ಇಲಾಖೆಯಿಂದ ಬರುವ ಆಂತರಿಕ ಮಾಹಿತಿ ಇರುತ್ತದೆ. ಆ ಪ್ರಕಾರ ಅವರು ಹೇಳುತ್ತಿರಬಹುದು. ಅದಕ್ಕೆ ಅವರೇ ಉತ್ತರಿಸಬೇಕು ಎಂದು ತಿಳಿಸಿದರು.

ಫಿಶ್‌ ಮೀಲ್‌ ಕಾನೂನುಬದ್ಧವಾಗಿದೆ
ಬ್ಯಾಂಕ್‌ ವಂಚನೆ ಮಾತ್ರವಲ್ಲದೆ ಫಿಶ್‌ ಮೀಲ್‌, ಪೆಟ್ರೋಲ್‌ ಬಂಕ್‌ ಅವ್ಯವಹಾರಗಳನ್ನೂ ಬಯಲು ಮಾಡುತ್ತೇನೆಂದು ಅಬ್ರಹಾಂ ಹೇಳಿದ್ದಾರಲ್ಲವೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಫಿಶ್‌ಮೀಲ್‌ ಕಾನೂನುಬದ್ಧವಾಗಿಯೇ ನಡೆಯುತ್ತಿದೆ; ಪೆಟ್ರೋಲ್‌ ಬಂಕ್‌ ತಾಯಿಯದ್ದು ಎಂದರು.

ನಂ. 1 ಆಗಿದ್ದರಿಂದ ಬೇಡಿಕೆ
ಸಮೀಕ್ಷೆಯ ಪ್ರಕಾರ ರಾಜ್ಯದ ನಂ. 1 ಶಾಸಕ ನಾನಾಗಿದ್ದೇನೆ. ಆದ್ದರಿಂದ ನನಗೆ ಹೆಚ್ಚಿನ ಬೇಡಿಕೆ ಇರುವುದು ಸಹಜ. ಹಾಗಾಗಿ ನನ್ನ ಹೆಸರೇ ಮುಂಚೂಣಿಯಲ್ಲಿ ಬಂದಿರಬಹುದು. ನಾನು ಯಾವುದೇ ಒತ್ತಡಕ್ಕೆ ಮಣಿದು ಪಕ್ಷ ಬಿಟ್ಟು ಹೋಗುವುದೇ ಇಲ್ಲ ಎಂದು ಬಿಜೆಪಿ ಸೇರುವವರ ಪಟ್ಟಿಯಲ್ಲಿ ನಿಮ್ಮ ಹೆಸರೇ ಮುಂಚೂಣಿಯಲ್ಲಿತ್ತಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರಮೋದ್‌ ಉತ್ತರಿಸಿದರು.

ಬಿಜೆಪಿಗೆ ಹೋಗುವುದೇ ಇಲ್ಲ
ಬಿಜೆಪಿಗೆ ನಾನು ಹೋಗುವುದೇ ಇಲ್ಲ ಎಂದು ಪ್ರಮೋದ್‌ ಮಧ್ವರಾಜ್‌ ಮತ್ತೆ ಸ್ಪಷ್ಟಪಡಿಸಿದರು. ತಾನು ಬಿಜೆಪಿ ಸೇರುವ ಬಗ್ಗೆ ಊಹಾಪೋಹಗಳು ಎದ್ದಾಗ, ಅವರು ಬಿಜೆಪಿಗೆ ಬಾರದಂತೆ ತಡೆಯುತ್ತೇವೆ ಎಂದು ಜಿಲ್ಲೆಯಲ್ಲಿರುವ ಒಂದಿಬ್ಬರು ಬಿಜೆಪಿ ನಾಯಕರು ಹೇಳಿದ್ದಾರಂತೆ. ಅವರೇ ಪಕ್ಷದ ಗೇಟು ಹಾಕಿರುವಾಗ ನಾನೇಕೆ ಹೋಗಲಿ? ಪಕ್ಷದ ಬಾಗಿಲು ತೆರೆದಿದ್ದರೆ ಮಾತ್ರ ನಾವು ಅಲ್ಲಿಗೆ ಹೋಗುವ ಪ್ರಯತ್ನ, ಚಿಂತನೆ ಮಾಡಬಹುದು. ಅಲ್ಲಿನ ಗೇಟು ಬಂದ್‌ ಆಗಿರುವಾಗ ನಾನೇಕೆ ಸುಮ್ಮನೆ ಚಿಂತಿಸಲಿ ಎಂದು ಪ್ರಮೋದ್‌ ಹೇಳಿದರು.

ಹಾರುವವ ನಾನಲ್ಲ !
ಬಿಜೆಪಿಯ ಗೇಟು ಹಾಕಿದ್ದರೆ ಹಿಂದಿನ ಬಾಗಿಲಿನಿಂದ ಹೋಗುವಿರಾ ಅಥವಾ ಗೇಟು ತೆರೆಯದಿದ್ದರೆ ಹಾರಿಕೊಂಡು ಹೋಗುವಿರಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಹಿಂಬದಿ ಬಾಗಿಲು ಎಲ್ಲಿದೆ ಎಂದು ನೀವೇ ಹುಡುಕಿ ಕೊಡಿ ಎಂದು ಮಾರ್ಮಿಕವಾಗಿ ಹೇಳಿದ ಸಚಿವರು, ಹಾರುವ ಸ್ವಭಾವ ನನ್ನದಲ್ಲ; ನಾನು ಸ್ವಾಭಿಮಾನಿ. ನನಗೆ ನನ್ನ ಕಾಂಗ್ರೆಸ್‌ ಪಕ್ಷದಿಂದ ಜಿಲ್ಲೆಯಲ್ಲಿ ಏನೂ ತೊಂದರೆಯಾಗಿಲ್ಲ. ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಯಾಗಲು ಪಕ್ಷ ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ 1 ಲ.ರೂ. ಕಟ್ಟಿ ಅರ್ಜಿ ಹಾಕಿದ್ದೇನೆ ಎಂದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.