ಬಿಜೆಪಿಯನ್ನೇ ತಿದ್ದುವೆ, ಕಾಂಗ್ರೆಸ್ ಸೇರುವೆ ಮಾತೇ ಇಲ್ಲ…: ಮುತಾಲಿಕ್
Team Udayavani, Dec 18, 2022, 8:12 AM IST
ಉಡುಪಿ : ಕೇಂದ್ರ ಸರಕಾರದ ನರೇಂದ್ರ ಮೋದಿ ಅವರಂತೆ ರಾಜ್ಯದಲ್ಲಿ ಬಿಜೆಪಿ ಆಡಳಿತ ಕೊಡಬೇಕು. ಮನೆ ಮನೆಗೆ ತೆರಳಿ ಮತ ಭಿಕ್ಷೆ ಬೇಡುತ್ತೇನೆ. ಬಿಜೆಪಿಯನ್ನೇ ತಿದ್ದಿ ಸರಿ ಮಾಡುತ್ತೇನೆ ವಿನಾ ಕಾಂಗ್ರೆಸ್ ಸೇರುವೆ ಮಾತೇ ಇಲ್ಲ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.
ಉಡುಪಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಹೋರಾಟ ಬಿಜೆಪಿ ವಿರುದ್ಧವಲ್ಲ. ಹಿಂದುತ್ವಕ್ಕಾಗಿ, ಅಭಿವೃದ್ಧಿಗಾಗಿ, ಪ್ರಾಮಾಣಿಕ ವ್ಯವಸ್ಥೆ ರೂಪಿಸಲು ನನ್ನ ಹೋರಾಟ ನಿರಂತರ. ಈ ಕಾರಣ ದಿಂದಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು.
ಕಾರ್ಯಕರ್ತರಿಗೆ ಶಕ್ತಿ ತುಂಬಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಈ ಬಗ್ಗೆ ಏಳೆಂಟು ಕ್ಷೇತ್ರಗಳಲ್ಲಿ ಅಧ್ಯಯನ ಮಾಡಿದ್ದು ಕಾರ್ಕಳ ಕೂಡ ಇದರಲ್ಲಿ ಒಂದು. ಈ ತಿಂಗಳ ಕೊನೆಗೆ ಅಧಿಕೃತವಾಗಿ ಘೋಷಣೆ ಮಾಡುತ್ತೇನೆ. ಕಾರ್ಕಳದಲ್ಲಿನ ಓಡಾಟ ಶಾಸಕರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಕಾರ್ಯಕರ್ತರಿಗೆ ಕೇಸು ಹಾಕೋದು, ಹೆದರಿಸೋದು ಮಾಡು ತ್ತಿದ್ದಾರೆ. ಹಿಂದುತ್ವದ ನೈತಿಕತೆ ಇದ್ದರೆ ಹೆದರಿಸುವ ಆವಶ್ಯಕತೆ ಇರಲಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಮೂರು ಸಾವಿರ ಹಿಂದೂ ಕಾರ್ಯಕರ್ತರ ಮೇಲೆ ಕೇಸು ಇದೆ. ರಾಜ್ಯದಲ್ಲಿ 18 ಹಿಂದೂ ಒಕ್ಕೂಟ ಬಿಜೆಪಿಗೆ ವಿರುದ್ಧವಾಗಿದೆ ಎಂದರು.
ಕಾರ್ಕಳದ ಭ್ರಷ್ಟಾಚಾರದ ದಾಖಲೆ ಇದೆ. ಒಂದೊಂದಾಗಿ ತಿರುಗೇಟು ಕೊಡುತ್ತೇನೆ. ಮುಂದಿನ ದಿನಗಳಲ್ಲಿ ನಾನು ಕೇಸು ಹಾಕುತ್ತೇನೆ. ನಮ್ಮ ಕಾರ್ಯಕರ್ತರಿಗೆ ಭಯಪಡಿಸಿದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು. ಕಾರ್ಕಳದಲ್ಲಿ ಬೂತ್ ಮಟ್ಟದಲ್ಲಿ ಸಂಘಟನೆ ಕಾರ್ಯ ನಡೆಯುತ್ತಿದೆ. ಲವ್ ಜೆಹಾದ್, ಗೋವು ಕಳ್ಳತನ ಕಾರ್ಕಳದಲ್ಲಿ ಹೆಚ್ಚಿದೆ. ಕಾರ್ಕಳದಲ್ಲಿ ಈಗಾಗಲೆ ಜನರು ಸಕಾರಾತ್ಮಕವಾಗಿ ಸ್ಪಂದಿಸಿ ಸ್ವಾಗತಿಸಿದ್ದಾರೆ.
ಬಾಲಿವುಡ್ ವಿರುದ್ಧ ಗುಡುಗು
ಬಾಲಿವುಡ್ ಸಿನೆಮಾಗಳು ಇಸ್ಲಾಮೀಕರಣ ಹೇರುತ್ತಿದ್ದು, ನಾಸ್ತಿಕವಾದ, ಕಮ್ಯುನಿಸಂನ್ನು ಹೆಚ್ಚು ಪ್ರಚಾರಪಡಿಸುತ್ತಿದೆ. ಬಾಲಿವುಡ್ಗೆ ದಾವೂದ್ ಬೆಂಬಲವಾಗಿ¨ªಾನೆ. ಈ ಮೂಲಕ ವ್ಯವಸ್ಥಿತವಾಗಿ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಬಾಲಿವುಡ್ ವಿರುದ್ದ ಮುತಾಲಿಕ್ ಗುಡುಗಿದರು.
ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಪ್ರಮುಖ ರಾದ ಗಂಗಾಧರ್ ಕುಲಕರ್ಣಿ, ಆನಂದ್ ಶೆಟ್ಟಿ ಅಡ್ಯಾರು, ಹರೀಶ್ ಅಧಿಕಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್