ವರ್ಗಾವಣೆಯಲ್ಲಿ ಆದ್ಯತೆ, ವಿನಾಯಿತಿ ಲೋಪ : ಉಪನ್ಯಾಸಕರ ಆಕ್ರೋಶ
Team Udayavani, Aug 6, 2022, 6:25 AM IST
ಉಡುಪಿ: ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ವರ್ಗಾವಣೆಯಲ್ಲಿ 50 ವರ್ಷ ಮೇಲ್ಪಟ್ಟ ಮಹಿಳೆ ಹಾಗೂ 55 ವರ್ಷ ಮೇಲ್ಪಟ್ಟ ಪುರುಷರಿಗೆ ನಿಯಮಾನುಸಾರ ವಿನಾಯಿತಿ ನೀಡದೇ ಇರುವುದಕ್ಕೆ ಹಿರಿಯ ಪ್ರಾಂಶುಪಾಲರು/ ಉಪನ್ಯಾಸಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ 2020ರಂತೆ ಇತ್ತೀಚೆಗೆ ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ವರ್ಗಾವಣೆ ವಿನಾಯತಿ ಮತ್ತು ಆದ್ಯತೆಗಳನ್ನು ಸ್ಪಷ್ಟವಾಗಿ ಪಟ್ಟಿ ಮಾಡಿದೆ. ಉಪನ್ಯಾಸಕರ ಸಮರ್ಪಕ ಮರು ಹಂಚಿಕೆ ವರ್ಗಾವಣೆ ಮತ್ತು ಆದ್ಯತೆಯ ಕೋರಿಕೆ ವರ್ಗಾವಣೆ ಅಡಿಯಲ್ಲಿ ವಿನಾಯಿತಿಗಳನ್ನು ನೀಡಲಾಗುತ್ತದೆ. ಗಂಭೀರ ಆರೋಗ್ಯದ ಸಮಸ್ಯೆ ಹೊಂದಿರುವವರಿಗೆ, ವಿಧವೆ ಅಥವಾ ವಿಧುರರಿಗೆ, ವಿಚ್ಛೇದನ ಪಡೆದ ಪ್ರಾಂಶುಪಾಲ ಅಥವಾ ಉಪನ್ಯಾಸಕರು ಅವಲಂಬಿತ ಮಕ್ಕಳು, ಸೈನಿಕರಾಗಿ ಶಾಶ್ವತ ಅಂಗವಿಕಲ ಹಾಗೂ ಮೃತ ಸಂಗಾತಿಗೆ ಹಾಗೂ ಕೇಂದ್ರ, ರಾಜ್ಯ ಅಥವಾ ಅನುದಾನಿತ ಸಂಸ್ಥೆಯ ಉದ್ಯೋಗಿ ಸಂಗಾತಿಗೆ, 50 ವರ್ಷ ಪೂರೈಸಿದ ಮಹಿಳೆ, 55 ವರ್ಷ ಮೇಲ್ಪಟ್ಟ ಪುರುಷ, ಗರ್ಭಿಣಿ ಅಥವಾ ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿರುವವರಿಗೆ ವರ್ಗಾವಣೆಯಲ್ಲಿ ವಿನಾಯಿತಿ/ ಆದ್ಯತೆ ನೀಡಬೇಕು ಎಂಬುದು ಸ್ಪಷ್ಟವಾಗಿದೆ.
ಆದರೆ 50 ವರ್ಷ ಮೇಲ್ಪಟ್ಟ ಮಹಿಳೆ ಮತ್ತು 55 ವರ್ಷ ಮೇಲ್ಪಟ್ಟ ಪುರುಷ ಅಭ್ಯರ್ಥಿಗಳಿಗೆ ವರ್ಗಾವಣೆ ಕರಡು ಪಟ್ಟಿಯಲ್ಲಿ ಈ ಆದ್ಯತೆ ಅಥವಾ ವಿನಾಯಿತಿ ನೀಡಿಲ್ಲ. ನಿಯಮಕ್ಕೆ ವಿರುದ್ಧವಾಗಿ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಇಲಾಖೆಗೆ ಆಕ್ಷೇಪಣೆಯನ್ನು ಸಲ್ಲಿಸಿದ್ದೇವೆ. ಕೂಡಲೇ ಇದನ್ನು ಸರಿಪಡಿಸಬೇಕು ಎಂದು ಅರ್ಹ ಹಿರಿಯ ಪ್ರಾಂಶುಪಾಲ, ಉಪನ್ಯಾಸಕರು ಆಗ್ರಹಿಸಿದ್ದಾರೆ.
ವಯಸ್ಸಿಗೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳನ್ನು ಇಲಾಖೆ ಸೂಚಿಸಿರುವಂತೆ ಎಸ್ಎಟಿಎಸ್ನಲ್ಲಿ ಅಪ್ಲೋಡ್ ಕೂಡ ಮಾಡಿದ್ದೇವೆ. ಹಾಗೆಯೇ ಕರಾವಳಿ ಭಾಗದ ಕೆಲವು ಕಾಲೇಜಿನ ಪ್ರಾಂಶುಪಾಲರು ಹಾಗೂ ಹಿರಿಯ ಉಪನ್ಯಾಸಕರು ಕೂಡ ಇಲಾಖೆಯ ನಿರ್ದೇಶಕರಿಗೆ ಈ ಸಂಬಂಧ ಆಕ್ಷೇಪಣೆಯನ್ನು ಸಲ್ಲಿಸಿದ್ದಾರೆ. ನಿಯಮದಲ್ಲಿ ನೀಡಿ ವರ್ಗಾವಣೆ ಸಂದರ್ಭದಲ್ಲಿ ವಿನಾಯಿತಿ ನೀಡದೇ ಇರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ