ಕೋವಿಡ್ ಗೆದ್ದ ಗರ್ಭಿಣಿಯರು ಅಂಕಿ-ಅಂಶದಲ್ಲಿ ಭಾರೀ ವ್ಯತ್ಯಾಸ !


Team Udayavani, Jan 11, 2021, 2:52 AM IST

ಕೋವಿಡ್ ಗೆದ್ದ ಗರ್ಭಿಣಿಯರು  ಅಂಕಿ-ಅಂಶದಲ್ಲಿ ಭಾರೀ ವ್ಯತ್ಯಾಸ !

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ನೂರಾರು ಗರ್ಭಿಣಿಯರು ಸುರಕ್ಷಿತವಾಗಿ ಗುಣಮುಖವಾಗಿರುವುದು ವರದಿಯಾಗಿದೆ. ಆದರೆ ಜಿಲ್ಲಾ ಆರೋಗ್ಯ ಇಲಾಖೆಯ ಮೂಲಗಳಿಗೂ ಖಾಸಗಿ ಆಸ್ಪತ್ರೆ ಮೂಲಗಳಿಗೂ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ ಕಂಡುಬರುತ್ತಿದೆ.

ಜಿಲ್ಲಾ ಆರೋಗ್ಯ ಇಲಾಖೆಯವರ ಪ್ರಕಾರ ಇದುವರೆಗೆ 110 ಗರ್ಭಿಣಿಯರು ಗುಣಮುಖರಾಗಿದ್ದಾರೆ. ಆದರೆ ಕೋವಿಡ್‌ 19 ನಿಯೋಜಿತ ಆಸ್ಪತ್ರೆಯಾದ ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆಯೊಂದರಲ್ಲಿಯೇ 250 ಗರ್ಭಿಣಿಯರು ಚಿಕಿತ್ಸೆ ಪಡೆದಿದ್ದಾರೆ. 65 ಮಂದಿಯ ಹೆರಿಗೆಯೂ ಆಗಿದೆ.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 125 ಗರ್ಭಿಣಿಯರು ಚಿಕಿತ್ಸೆ ಪಡೆದಿದ್ದಾರೆ. ಅವರಲ್ಲಿ ಕೆಲವರು ಕೊರೊನಾ ಪಾಸಿಟಿವ್‌ ಎಂದು ತಿಳಿದು ಆಸ್ಪತ್ರೆಗೆ ಬಂದಿದ್ದರೆ, ಕೆಲವರಿಗೆ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ಬಳಿಕ ತಿಳಿದುಬಂದಿತ್ತು. ಅವರಲ್ಲಿ 84 ಮಂದಿಯ ಹೆರಿಗೆ ಆಗಿದೆ.

ಎರಡೂ ಆಸ್ಪತ್ರೆಗಳಲ್ಲಿ ಅರ್ಧಾಂಶ ಸಹಜ ಹೆರಿಗೆ, ಉಳಿದ ಅರ್ಧಾಂಶ ಸಿಸೇರಿಯನ್‌ ಆಗಿದೆ. ಉಳಿದವರು 9 ತಿಂಗಳಾಗುವ ಮುನ್ನವೇ ಸೋಂಕಿತರಾಗಿ ಬಂದು ಹೆರಿಗೆಗೆ ಮುನ್ನವೇ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ ಓರ್ವ ಗರ್ಭಿಣಿಗೆ, ಮಣಿಪಾಲ ಆಸ್ಪತ್ರೆಯಲ್ಲಿ ಇಬ್ಬರಿಗೆ ಮಾತ್ರ ಐಸಿಯು ಬೇಕಾಗಿತ್ತು. ಮಣಿಪಾಲ ಆಸ್ಪತ್ರೆಗೆ ಗಂಭೀರ ಸ್ಥಿತಿಯಲ್ಲಿ ಬಂದು ಐಸಿಯುಗೆ ಸೇರಿದ ಇಬ್ಬರು ಗರ್ಭಿಣಿಯರು ಮರಣ ಹೊಂದಿದ್ದರು.

ಅಜ್ಜರಕಾಡು ಜಿಲ್ಲಾಸ್ಪತ್ರೆ, ಕುಂದಾಪುರ ಮತ್ತು ಕಾರ್ಕಳದ ತಾಲೂಕು ಸರಕಾರಿ ಆಸ್ಪತ್ರೆ, ಉಡುಪಿಯ ಆದರ್ಶ, ಹೈಟೆಕ್‌, ಬ್ರಹ್ಮಾವರದ ಮಹೇಶ್‌, ಕುಂದಾಪುರ ಶ್ರೀದೇವಿ ಆಸ್ಪತ್ರೆಗಳಲ್ಲಿಯೂ ಕೋವಿಡ್‌ ಸೋಂಕಿತ ಗರ್ಭಿಣಿಯರನ್ನು ಉಪಚರಿಸಲಾಗಿತ್ತು. ಇದಲ್ಲದೆ ಸಾಂಸ್ಥಿಕ ಶುಶ್ರೂಷೆ, ಹೋಂ ಐಸೊಲೇಶನ್‌ನಲ್ಲಿಯೂ ಚಿಕಿತ್ಸೆ ನೀಡಲಾಗಿತ್ತು.

375ಕ್ಕೂ ಅಧಿಕ :

375ಕ್ಕೂ ಅಧಿಕ ಡಾ| ಟಿಎಂಎ ಪೈ ಕೋವಿಡ್‌ ಆಸ್ಪತ್ರೆ ಮತ್ತು ಮಣಿಪಾಲ ಆಸ್ಪತ್ರೆಗಳ ಅಂಕಿ ಸಂಖ್ಯೆಗಳನ್ನು ಒಟ್ಟು ಸೇರಿಸಿದರೆ 375 ದಾಟುತ್ತದೆ. ಇತರ ಆಸ್ಪತ್ರೆಗಳ ಅಂಕಿ ಸಂಖ್ಯೆಗಳನ್ನು ಸೇರಿಸಿದರೆ ಈ ಸಂಖ್ಯೆ ಇನ್ನಷ್ಟು ಹೆಚ್ಚುತ್ತದೆ. ಆರೋಗ್ಯ ಇಲಾಖೆಯವರು ಕೇವಲ 110 ಗರ್ಭಿಣಿಯರು ಚಿಕಿತ್ಸೆ ಪಡೆದಿರುವುದಾಗಿ ಹೇಳುತ್ತಾರೆ. ನಮ್ಮೆಲ್ಲಾ ರೋಗಿಗಳು ಸರಕಾರಿ ವ್ಯವಸ್ಥೆಯ ಮೂಲಕವೇ ಬಂದಿದ್ದಾರೆ ಎನ್ನುತ್ತಾರೆ ಡಾ| ಟಿಎಂಎ ಪೈ ಆಸ್ಪತ್ರೆಯ ನೋಡಲ್‌ ಅಧಿಕಾರಿ ಡಾ| ಶಶಿಕಿರಣ್‌ ಉಮಾಕಾಂತ್‌.

 

ದ.ಕ. ಜಿಲ್ಲೆ: ಪಕ್ಕಾ ಲೆಕ್ಕ :

ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌-19 ಚಿಕಿತ್ಸೆಗೆಂದೇ ಮೀಸಲಾಗಿದ್ದ ವೆನ್ಲಾಕ್‌ ಆಸ್ಪತ್ರೆ ಸಹಿತ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 387 ಮಂದಿ ಗರ್ಭಿಣಿಯರು ಚಿಕಿತ್ಸೆ ಪಡೆದಿದ್ದು, ಸಂಖ್ಯೆಯಲ್ಲಿ ಯಾವುದೇ ವ್ಯತ್ಯಾಸ ಇಲ್ಲ.

ವೆನ್ಲಾಕ್‌ ಆಸ್ಪತ್ರೆಯಿಂದ ಶಿಫಾರಸು ಪಡೆದುಕೊಂಡು ಖಾಸಗಿ ಆಸ್ಪತ್ರೆಗಳಿಗೆ ತೆರಳಿದವರ ಮಾಹಿತಿಯನ್ನು ಮೊದಲೇ ವೆನ್ಲಾಕ್‌ನಲ್ಲಿ ನಮೂದಿಸಿಕೊಳ್ಳಲಾಗುತ್ತದೆ. ನೇರವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ಮಾಹಿತಿಯನ್ನೂ ಎಲ್ಲ ಆಸ್ಪತ್ರೆಗಳು ಚಾಚೂ ತಪ್ಪದೆ ನೀಡಿವೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಗೆದ್ದ ಗರ್ಭಿಣಿಯರ ಲೆಕ್ಕದಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಎಲ್ಲ ಮಾಹಿತಿಯೂ ಇಲಾಖೆ ಬಳಿ ಇದೆ. ಡಾ| ರಾಮಚಂದ್ರ ಬಾಯರಿ , ಜಿಲ್ಲಾ ಆರೋಗ್ಯಾಧಿಕಾರಿ

ವ್ಯತ್ಯಾಸಕ್ಕೆ ಕಾರಣ:ಅಂಕಿ-ಸಂಖ್ಯೆ ವ್ಯತ್ಯಾಸಕ್ಕೆ ಕಾರಣವೂ ಇದೆ. ಪ್ರತಿಯೊಬ್ಬರೂ ಜಿಲ್ಲಾಡಳಿತ ಸೂಚಿಸಿದ ಮಾರ್ಗದ ಮೂಲಕವೇ ಬಂದಿದ್ದರೂ ಅಲ್ಲಿ ಗರ್ಭಿಣಿಯರೆಂದು ಕಾಲಂನಲ್ಲಿ ದಾಖಲಿಸದೆ ಇರುವ ಸಾಧ್ಯತೆ ಇದೆ. ಅಗ ಅವರನ್ನು ಮಹಿಳೆಯರೆಂದು ಪರಿಗಣಿಸ ಲಾಗುತ್ತದೆಯೆ ವಿನಾ ಗರ್ಭಿಣಿಯರೆಂದು ಪರಿಗಣಿಸಿರುವುದಿಲ್ಲ. ಹೀಗಾಗಿರುವ ಸಾಧ್ಯತೆ ಹೆಚ್ಚು ಎಂದು ಕೋವಿಡ್‌ 19 ಜಿಲ್ಲಾ ನೋಡಲ್‌ ಅಧಿಕಾರಿ ಡಾ| ಪ್ರಶಾಂತ ಭಟ್‌ ಅವರು. ಕೆಲವೊಮ್ಮೆ ಒಬ್ಬರಿಗೆ ಎರಡು ಬಾರಿ ಪಾಸಿಟಿವ್‌ ಬಂದಲ್ಲಿ ನಾವು ಒಂದೇ ವ್ಯಕ್ತಿ ಎಂದು ಪರಿಗಣಿಸುತ್ತೇವೆ. ಅಂಕಿಅಂಶದ ವ್ಯತ್ಯಾಸದಲ್ಲಿ ಇದೂ ಕಾರಣವಿರಬಹುದು ಎಂಬ ಅಂಶವನ್ನು ಆರೋಗ್ಯ ಇಲಾಖೆಯ ಅಧಿಕಾರಿ ಡಾ| ಪ್ರೇಮಾನಂದ್‌ ಬೆಟ್ಟು ಮಾಡುತ್ತಾರೆ.

 

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.