ವಿಕೋಪ ತಡೆಗಟ್ಟುವಿಕೆ ಪೂರ್ವ ಸಿದ್ಧತೆ -ಸ್ಪಂದನೆ: ಕಾರ್ಯಾಗಾರ


Team Udayavani, May 18, 2019, 6:05 AM IST

59085850WORKSHOP

ಉಡುಪಿ: ಉಡುಪಿ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆ ಯನ್ನು ಪರಿಷ್ಕರಿಸುವ ಸಲುವಾಗಿ ಆಡಳಿತ ತರಬೇತಿ ಸಂಸ್ಥೆಯ ರಾಜ್ಯ ವಿಕೋಪ ನಿರ್ವಹಣಾ ಕೇಂದ್ರ ವತಿಯಿಂದ ಜಿ.ಪಂ.ನಲ್ಲಿ ಗುರುವಾರ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ, ಜಿ.ಪಂ. ಸಿಇಒ ಸಿಂಧು ಬಿ. ರೂಪೇಶ್‌, ವಿಕೋಪ ನಿರ್ವಹಣೆಯಲ್ಲಿ ಪ್ರತೀ ಇಲಾಖೆಯ ಪಾತ್ರ ಬಹು ಮುಖ್ಯ. ಜಿಲ್ಲಾ ಮಟ್ಟದಲ್ಲಿ ವಿಕೋಪಗಳನ್ನು ಯಶಸ್ವಿಯಾಗಿ ನಿರ್ವಹಿಸಬೇಕಾದರೆ ಜಿಲ್ಲಾ ಮಟ್ಟದ ವಿಕೋಪ ನಿರ್ವಹಣಾ ಯೋಜನೆ ಅತ್ಯಗತ್ಯ. ಜಿಲ್ಲಾ ಮಟ್ಟದ ಯೋಜನೆಯನ್ನು ಪ್ರತೀ ವರ್ಷ ಪರಿಷ್ಕರಣೆಗೊಳಿಸಬೇಕು. ವಿಕೋಪ ನಿರ್ವಹಣಾ ಕಾಯಿದೆ-2005ರಂತೆ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ವಿಕೋಪ ನಿರ್ವಹಣೆಯನ್ನು ನಿಭಾಹಿಸಬೇಕೆಂದರು.

ಅಪರ ಜಿಲ್ಲಾಧಿಕಾರಿ, ವಿದ್ಯಾ ಕುಮಾರಿ ಮಾತನಾಡಿ, ಎಲ್ಲ ಇಲಾಖೆಗಳ ವ್ಯವಸ್ಥಿತ ಮಾಹಿತಿಯನ್ನು ವಿಕೋಪ ನಿರ್ವಣೆಗಾಗಿ ಕ್ರೋಡೀಕರಿಸಿಕೊಳ್ಳಬೇಕು. ವಿಕೋಪ ಸಂದರ್ಭದಲ್ಲಿ ಸೂಕ್ತ ರೀತಿಯ ಸ್ಪಂದನೆ ನಿರ್ವಹಿಸಬೇಕು. ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಇಲಾಖಾ ಮಟ್ಟದ ಸ್ಪಂದನಾ ಯೋಜನೆ ರೂಪಿಸಿ ಜಿಲ್ಲಾ ವಿಕೋಪ ನಿರ್ವಹಣೆ ಯೋಜನೆಯ ಪರಿಷ್ಕರಣೆಯಲ್ಲಿ ಅಳವಡಿಸಬೇಕು ಎಂದು ತಿಳಿಸಿದರು.

ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕ ಡಾ| ಪರಮೇಶ್‌ ಜೆ.ಆರ್‌. ಅವರು 2 ದಿನಗಳ ಕಾರ್ಯಾಗಾರದ ಸಂಯೋಜಕರಾಗಿ ಮಾತನಾಡಿದರು. ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯಲ್ಲಿ ವಿಪತ್ತು ತಡೆಗಟ್ಟುವಿಕೆ, ವಿಪತ್ತು ಬಂದ ಸಂದರ್ಭದಲ್ಲಿ ಸೂಕ್ತ ಸ್ಪಂದನೆ, ಪುನರ್‌ವಸತಿ ಸಂದರ್ಭದಲ್ಲಿ ಯೋಜನೆ ಹೇಗೆ ಉಪಯುಕ್ತವಾಗುತ್ತದೆ, ಮಾಹಿತಿಗಳನ್ನು ಹೇಗೆ ಕ್ರೋಡೀಕರಿಸಬೇಕು ಎಂಬಿತ್ಯಾದಿ ಮಾಹಿತಿ ನೀಡಿದರು.

ವಿಪತ್ತು ಯೋಜನೆ ಸಿದ್ಧಪಡಿಸುವ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಪಾಯಗಳ, ಜಿಲ್ಲಾ ಮಟ್ಟದಲ್ಲಿ ಆಗಲಿರುವ ನಷ್ಟ, ಜಿಲ್ಲಾ ಮಟ್ಟದ ಸಾಮರ್ಥ್ಯ ಗುರುತಿಸಿಕೊಂಡು ಇವುಗಳ ಆಧಾರದ ಮೇಲೆ ತಡೆಗಟ್ಟುವಿಕೆ ಸ್ಪಂದನೆ, ಪುನರ್‌ವಸತಿ ಯೋಜನೆಗಳನ್ನು ರೂಪಿಸಬೇಕೆಂದರು.

ರಾಷ್ಟ್ರೀಯ ವಿಕೋಪ ನಿರ್ವಹಣಾ ಪ್ರಾಧಿಕಾರದವರು ವಿಪತ್ತು ನಿರ್ವಹಣಾ ಯೋಜನೆಗೆ ಸಿದ್ದಪಡಿಸಿರುವ ಮಾರ್ಗದರ್ಶಿ ಆಧಾರದ ಮೇಲೆ ಸೂಕ್ತ ನಮೂನೆ ಪರಿಚಯಿಸಿದರು. ಭೌಗೋಳಿಕ ಮಾಹಿತಿ ವ್ಯವಸ್ಥೆ, ಮಾಹಿತಿ ದೂರ ಸಂವೇದಿಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವುದು ವಿಪತ್ತು ನಿರ್ವಹಣೆ ಯೋಜನೆಗೆ ಸಹಕಾರಿ ಎಂದರು.

ಜಿಲ್ಲಾ ಮಟ್ಟದ ಕಂದಾಯ, ಪೊಲೀಸ್‌, ಅಗ್ನಿಶಾಮಕ, ಗೃಹರಕ್ಷಕ, ಕರಾವಳಿ ಕಾವಲು ಪಡೆ, ಆರೋಗ್ಯ, ಗಣಿ ಮತ್ತು ಭೂ ವಿಜ್ಞಾನ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅರಣ್ಯ, ಗ್ರಾಮಿಣಾಭಿವೃದ್ಧಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ನೀರಾವರಿ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ. ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗ, ವಿದ್ಯುತ್ಛಕ್ತಿ¤ ಮುಂತಾದ “ಎ’ ಮತ್ತು “ಬಿ’ ವೃಂದದ ಸುಮಾರು 45 ಅಧಿಕಾರಿಗಳು ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ವಿಕೋಪ ನಿರ್ವಹಣಾ ತಜ್ಞ ರವಿ ಓಜನಹಳ್ಳಿ ಅವರು ಪ್ರತಿ ಇಲಾಖೆಯ ಮಾಹಿತಿ, ಜವಾಬ್ದಾರಿ ಹಾಗೂ ಯೋಜನೆಗಳನ್ನು ಸಂಗ್ರಹಿಸಿ, ಕ್ರೋಡೀಕರಿಸಿ ಜಿಲ್ಲೆಯ ಪ್ರತೀ ಇಲಾಖೆ ಹಾಗೂ ಸರಕಾರೇತರ ಸಂಸ್ಥೆಗಳಿಗೆ ತಲುಪಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.