ಚುನಾವಣೆ ಅಖಾಡಕ್ಕೆ ಜಿಲ್ಲಾದ್ಯಂತ ಸಿದ್ಧತೆ

 154 ಗ್ರಾಮ ಪಂಚಾಯತ್‌ಗಳಲ್ಲಿ ಮತದಾನ

Team Udayavani, Oct 7, 2020, 11:41 AM IST

ಚುನಾವಣೆ ಅಖಾಡಕ್ಕೆ ಜಿಲ್ಲಾದ್ಯಂತ ಸಿದ್ಧತೆ

ಸಾಂದರ್ಭಿಕ ಚಿತ್ರ

ಉಡುಪಿ, ಅ. 6:  ರಾಜ್ಯ ಸರಕಾರ ಗ್ರಾ.ಪಂ. ಚುನಾವಣೆ ನಡೆಸುವಂತೆ ಮುನ್ಸೂಚನೆ ನೀಡಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ಸುರಕ್ಷೆ, ಮುಂಜಾಗ್ರತೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಬಹು ಹಂತಗಳಲ್ಲಿ ರಾಜ್ಯದಲ್ಲಿ ಅವಧಿ ಮುಗಿದ ಸುಮಾರು 5,800 ಗ್ರಾಮ ಪಂಚಾಯತ್‌ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣ ಆಯೋಗ ಹಲವು ಪ್ರಕ್ರಿಯೆಗಳ ಮೂಲಕ ಸಿದ್ಧತೆ ಚುರುಕುಗೊಳಿಸಿದೆ.

890 ಮತಗಟ್ಟೆ, 7.93 ಲಕ್ಷ ಮತದಾರರು :

ಪಂಚಾಯತ್‌ ಚುನಾವಣೆಗೆ ಜಿಲ್ಲೆಯಲ್ಲಿ 890 ಮತಗಟ್ಟೆಗಳನ್ನು ಗುರುತಿಸಲಾಗಿದೆ. 3,81,867 ಮಂದಿ ಪುರುಷರು, 4,11,821 ಮಂದಿ ಮಹಿಳೆ ಯರು, ಇತರ 9 ಮಂದಿ ಸಹಿತ ಒಟ್ಟು 7,93,697 ಮಂದಿ ಮತ ಚಲಾಯಿಸಲು ಸಜ್ಜಾಗಿದ್ದಾರೆ.

ಹಂತಗಳಲ್ಲಿ  ಚುನಾವಣೆ :

ಸಾಮಾನ್ಯ ಪರಿಸ್ಥಿತಿಯಲ್ಲಿ ಈ 5,800 ಗ್ರಾ.ಪಂ. ಗಳಿಗೆ 2 ಅಥವಾ 3 ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆ ಇದೆ. ಕೋವಿಡ್‌-19 ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕುವಾರು ವಿವಿಧ ಹಂತಗಳಲ್ಲಿ ಚುನಾವಣೆ ನಡೆಸುವ ಇರಾದೆ ಹೊಂದಿದೆ. ಅವಧಿ ಮುಗಿದ ಎಲ್ಲ ಗ್ರಾ.ಪಂ.ಗಳಿಗೆ ಜೂ. 26ರಂದು ಆಡಳಿತಾಧಿಕಾರಿಗಳನ್ನು ಸರಕಾರ ನೇಮಕ ಮಾಡಿತ್ತು.

ಇಎಂಎಸ್‌ ತಂತ್ರಾಂಶ  :

ಕೋವಿಡ್‌-19 ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಅಭ್ಯರ್ಥಿ ಚುನಾವಣೆ ಪ್ರಕ್ರಿಯೆ ಸಂಪೂರ್ಣ ತಂತ್ರಾಂಶದಿಂದಲೇ ಕೂಡಿರಲಿದೆ. ಇದಕ್ಕಾಗಿ ಇಎಂಎಸ್‌ (ಎಲೆಕ್ಷನ್‌ ಮಾನಿಟರಿಂಗ್‌ ಸಿಸ್ಟಮ್‌) ಸಾಫ್ಟ್‌ವೇರ್‌ ಅಳವಡಿಸಲಾಗಿದ್ದು ಅಭ್ಯರ್ಥಿ ನಾಮಪತ್ರ ಸಲ್ಲಿಕೆ, ಪರಿಶೀಲನೆ, ಹಿಂಪಡೆಯುವಿಕೆ (ಫಾರ್ಮ್ ನಂ. 9, 10), ಅಭ್ಯರ್ಥಿ ಚಿಹ್ನೆ ದಾಖಲೀಕರಣ ಎಲ್ಲವೂ ಆನ್‌ಲೈನ್‌ ಪ್ರಕ್ರಿಯೆಯಾಗಿದೆ. ಚುನಾವಣಾಧಿಕಾರಿ ಲಾಗಿನ್‌ ಹಕ್ಕು ಹೊಂದಿರುತ್ತಾರೆ. ಈ ಹಿಂದೆ ಅಭ್ಯರ್ಥಿ ಚಿಹ್ನೆ ಅಧಿಕೃತಗೊಳ್ಳಲು 3 ದಿನಗಳ  ಪ್ರಕ್ರಿಯೆ ನಡೆಯುತ್ತಿದ್ದು, ಪ್ರಸಕ್ತ ತತ್‌ಕ್ಷಣದಲ್ಲೇ ಲಭ್ಯವಾಗುವಂತೆ ತಂತ್ರಾಂಶ ಸಿದ್ಧಪಡಿಸಲಾಗಿದೆ. ಚುನಾವಣೆಯ ಪ್ರತಿಯೊಂದು ಪ್ರಕ್ರಿಯೆ ಬೆಂಗಳೂರಿನಲ್ಲಿ ಮಾನಿಟರಿಂಗ್‌ ವ್ಯವಸ್ಥೆ ಗೊಳಪಡಿಸಲಾಗುತ್ತದೆ. ಹಿಂದೆ ಫಾರ್ಮ್ ನಂ. 10 ಕೈಯಲ್ಲೆ ಬರೆಯುವ ಪದ್ಧತಿ ಇದ್ದು, ಇದೂ ಈ ಬಾರಿ ತಂತ್ರಾಂಶದಲ್ಲೇ ಬಳಕೆಯಾಗಲಿದೆ.

ಮತಗಟ್ಟೆ  ವಿಭಜಿಸಲು ಸೂಚನೆ  :

ರಾಜ್ಯದಲ್ಲಿ ಈಗ 5,800 ಗ್ರಾ.ಪಂ.ಗಳ 93 ಸಾವಿರಕ್ಕೂ ಹೆಚ್ಚು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಬೇಕಾಗಿದೆ. ಕೋವಿಡ್‌ -19 ಹಿನ್ನೆಲೆಯಲ್ಲಿ 10 ಸಾವಿರ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಬೇಕಿದೆ. ಇದಕ್ಕಾಗಿ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ 1,000 ಮತದಾರರು ಇದ್ದಲ್ಲಿ ಅದನ್ನು ಎರಡು ಬೂತ್‌ಗಳಾಗಿ ತಲಾ 500 ರಂತೆ ವಿಭಜಿಸಲು ಸೂಚಿಸಲಾಗಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ  890 ಮತಗಟ್ಟೆಗಳನ್ನು ಅಂದಾಜಿಸಲಾಗಿದೆ.

ಚುನಾವಣಾಧಿಕಾರಿ ನೇಮಕ : ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳ ನೇಮಕ ಪ್ರಕ್ರಿಯೆ ನಡೆದಿದೆ. ತಾ|ಗೆ ಓರ್ವ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ, ಡಾಟಾ ಎಂಟ್ರಿ ಆಪರೇಟರ್‌ ಇದ್ದು, ಒಂದು ಮತಗಟ್ಟೆಗೆ 5 ಮಂದಿ ಸಿಬಂದಿ ನಿಯೋಜಿಸ ಲಾಗುತ್ತದೆ. ಮತಗಟ್ಟೆ ಅಧ್ಯಕ್ಷ ಅಧಿಕಾರಿ-1, ಮೂವರು ಸಿಬಂದಿ, ಸಹಾಯಕರಾಗಿ ಓರ್ವ ಗ್ರೂಪ್‌ “ಡಿ’ ನೌಕರ ನೇಮಕಗೊಳ್ಳಲಿದ್ದಾರೆ.

ಸಿದ್ಧತೆ ಪ್ರಕ್ರಿಯೆ ಆರಂಭ:ಗ್ರಾ.ಪಂ. ಚುನಾವಣೆ ನಿಮಿತ್ತ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ಧತೆ ಪ್ರಕ್ರಿಯೆಗಳನ್ನು ಮಾಡಲಾಗುತ್ತಿದೆ. ಮತದಾರರು ಹಾಗೂ ಮತಗಟ್ಟೆಯ ವಿವರಗಳನ್ನು ಸಂಗ್ರಹಿಸಲಾಗಿದೆ. ಚುನಾವಣೆ ದಿನಾಂಕ ಯಾವುದೇ ಸಂದರ್ಭದಲ್ಲಿ ಘೋಷಣೆಯಾಗಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಕಲ ತಯಾರಿ ಮಾಡಲಾಗಿದೆ.-ಸದಾಶಿವ ಪ್ರಭು, ಅಪರ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ

ಪೂರ್ವ ತಯಾರಿ ಆರಂಭ :ಜಿಲ್ಲೆಯ 7 ತಾಲೂಕುಗಳ 154 ಗ್ರಾ.ಪಂ. ಗಳಲ್ಲಿ ಚುನಾವಣೆ ಸಿದ್ಧತೆ ಪ್ರಕ್ರಿಯೆಗಳು ನಡೆಯುತ್ತಿವೆ. ಸರಕಾರ ನೀಡಿದ ಸೂಚನೆಯಂತೆ ಚುನಾವಣ ಶಾಖೆ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಚುನಾವಣೆಗೆ ದಿನ ನಿಗದಿಯೊಂದೇ ಬಾಕಿ ಇರುವಂತೆ ಪೂರ್ವತಯಾರಿ ಪ್ರಕ್ರಿಯೆ ನಡೆಯುತ್ತಿದೆ. ಮತಪೆಟ್ಟಿಗೆ ಜೋಡಣೆ ಮಾಡಿ, ಬಣ್ಣ ಬಳಿಯುವುದು ಸೇರಿದಂತೆ ಅಗತ್ಯ ಪರಿಕರಗಳ ಜೋಡಣೆಯಲ್ಲಿ ತೊಡಗಿದೆ.ಈಗಾಗಲೇ ಚುನಾವಣಾ ಪಟ್ಟಿಗೆ ಹೊಸ ಮತದಾರರ ಸೇರ್ಪಡೆ, ಹೆಸರು ಬದಲಾವಣೆ, ದಾಖಲಾತಿ ತಿದ್ದುಪಡಿಗೆ ಕಡತಗಳನ್ನು ಪರಿಶೀಲಿಸುವ ಪ್ರಕ್ರಿಯೆ ನಡೆಯುತ್ತಿದೆ.

 

ತಾಲೂಕು            ಗ್ರಾ.ಪಂ. ಮತಗಟ್ಟೆ ಪುರುಷರು            ಮಹಿಳೆಯರು        ಇತರ     ಒಟ್ಟು

ಉಡುಪಿ  16       125      53,101   57,294  4        1,10,399

ಕಾಪು     16       107      45,424 50,411   2        95,837

ಕಾರ್ಕಳ  27       150      62,610  68,648  0        1,31,258

ಕುಂದಾಪುರ       44      210      91,978   98,350  1         1,90,329

ಬ್ರಹ್ಮಾವರ           27       155      66,488  71,750   0        1,38,238

ಬೈಂದೂರು        15       95       42,746  44,802 2        87,550

ಹೆಬ್ರಿ     09       48       19,520  20,566  0        40,086

ಒಟ್ಟು      154       890       3,81,867            4,11,821            9          7,93,697

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.