36 ಸಾವಿರ ಹೆಕ್ಟೇರ್‌ನಲ್ಲಿ ಭತ್ತ ಕೃಷಿಗೆ ಸಿದ್ಧತೆ

ಜಿಲ್ಲೆಯಲ್ಲಿ ಶೇ 80 ಮಳೆ ಕ್ಷೀಣ ; ಭತ್ತದ ಕೃಷಿಯಲ್ಲಿ ಗುರಿ ಕಡಿತ

Team Udayavani, Jun 8, 2019, 6:00 AM IST

0406UDTP01

ಉಡುಪಿ: ಕೃಷಿ ಇಲಾಖೆ ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಒಟ್ಟು 36,000 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಕೃಷಿ ಮಾಡಲು ಉದ್ದೇಶಿಸಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಕೆಲವೇ ದಿನದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು, ಜೂನ್‌ ಎರಡನೇ ವಾರದಿಂದ ಭತ್ತದ ಬೀಜ ಬಿತ್ತನೆ ಕಾರ್ಯ ನಡೆಯಲಿದೆ. ಈಗಾಗಲೇ ಕೆಲವೊಂದು ಪ್ರದೇಶದಲ್ಲಿ ಒಣ ಬೀಜ ಬಿತ್ತನೆ ಆರಂಭವಾಗಿದೆ.

ಕಡಿಮೆ ಬಿತ್ತನೆ ಗುರಿ
ಇಲಾಖೆಯು 2018-19ನೇ ಸಾಲಿನಲ್ಲಿ ಮುಂಗಾರಿನಲ್ಲಿ 44,000 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತವನ್ನು ಬೆಳೆಸುವ ಗುರಿ ತಲುಪುವಲ್ಲಿ ವಿಫ‌ಲವಾಗಿದೆ.ಆದರಿಂದ ಈ ಬಾರಿಯಲ್ಲಿ ಗುರಿಯನ್ನು 8,000 ಹೆಕ್ಟೇರ್‌ ಪ್ರದೇಶ ಕಡಿತಗೊಳಿಸಲಾಗಿದೆ.ಪ್ರಸಕ್ತ ಉಡುಪಿ ತಾಲೂಕಿನಲ್ಲಿ 15,500 ಹೆಕ್ಟೇರ್‌, ಕುಂದಾಪುರ ತಾಲೂಕಿನಲ್ಲಿ 14,000 ಹೆಕ್ಟೇರ್‌ ಹಾಗೂ ಕಾರ್ಕಳ ತಾಲೂಕಿನಲ್ಲಿ 6,500 ಹೆಕ್ಟೇರ್‌ ಬಿತ್ತನೆ ಗುರಿ ಹೊಂದಿದೆ.

ಎಂಓ4 ತಳಿಗೆ ಬೇಡಿಕೆ ಹೆಚ್ಚು
ಜಿಲ್ಲೆಯಲ್ಲಿ ಎಂಒ4 ತಳಿ ಹೆಚ್ಚಿನ ಬೇಡಿಕೆಯಿದೆ. ಇಲಾಖೆಯಿಂದ ಈಗಾಗಲೇ 1,900 ಕ್ವಿಂ., ಎಂ16 ತಳಿ 10 ಕ್ವಿಂ., ಜ್ಯೋತಿ ತಳಿ 20 ಕ್ವಿಂ., ಜಯ ತಳಿ 10 ಕ್ವಿಂ. ಸೇರಿದಂತೆ ಒಟ್ಟು 2,950 ಬಿತ್ತನೆ ಬೀಜಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಈಗಾಗಲೇ ಒಟ್ಟು 1,528 ಕ್ವಿಂಟಾಲ್‌ ಭತ್ತದ ಬಿತ್ತನೆ ಬೀಜ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನಿರಿಸಲಾಗಿದೆ.

1,528.75 ಕ್ವಿಂ. ಭತ್ತದ ಬೀಜ ವಿತರಣೆ
ಈವರೆಗೆ 3,448 ಮಂದಿ ರೈತರಿಗೆ 1,528.75 ಕ್ವಿಂ. ಬಿತ್ತನೆ ಬೀಜ ವಿತರಿಸಲಾಗಿದೆ. ಸಾಮಾನ್ಯ ವರ್ಗದವರಿಗೆ ಪ್ರತಿ ಕೆಜಿ ಬಿತ್ತನೆ ಬೀಜಕ್ಕೆ 8 ರೂ. ಹಾಗೂ ಪ.ಜಾತಿ, ಪಂ.ಕ್ಕೆ 12 ರೂ. ಸಹಾಯಧನ ನೀಡಲಾಗುತ್ತದೆ.ರೈತರು ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆಯಬಹುದು. ಎಕರೆಗೆ 25 ಕೆಜಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತದೆ.

ರಸಗೊಬ್ಬರ 8,500 ಟನ್‌ ಬೇಡಿಕೆ
ಜಿಲ್ಲೆಯಲ್ಲಿ ರಸಗೊಬ್ಬರಸ ದಾಸ್ತಾನು ಸಮರ್ಪಕವಾಗಿದೆ. 2019-20ನೇ ಸಾಲಿನಲ್ಲಿ 8,500 ಟನ್‌ ಬೇಡಿಕೆಯಿದೆ. ಮೇ ತಿಂಗಳಲ್ಲಿ 2,300 ಟನ್‌ ರಸಗೊಬ್ಬರ ದಾಸ್ತಾನಾಗಿದೆ. ಅದರಲ್ಲಿ 750 ಟನ್‌ ರಸಗೊಬ್ಬರ ವಿತರಿಸಲಾಗಿದೆ.

ಪರಿಷ್ಕೃತ ದರದಲ್ಲಿ ಖರೀದಿಸಿ
ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರಗಳು ಲಭ್ಯವಿದ್ದು, ಸಂಬಂಧಿತ ರೈತ ಸಂಪರ್ಕ ಕೇಂದ್ರದಲ್ಲಿ ಪಡೆಯಬಹುದು. ರೈತರು ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಖರೀದಿ ಮಾಡುವಾಗ ಪರಿಷ್ಕೃತ ದರದಲ್ಲಿ ರಸಗೊಬ್ಬರವನ್ನು ಮಾರಾಟ ಮಾಡಿರುವ ಕುರಿತು ಖಚಿತಪಡಿಕೊಳ್ಳಬೇಕು.

ವಾಡಿಕೆಗಿಂತ ಕಡಿಮೆ ಮಳೆ
ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜನವರಿಯಿಂದ ಮೇ 31 ವರೆಗೆ ಜಿಲ್ಲೆಯಲ್ಲಿ 201.6 ಮಿಲಿ ಮೀಟರ್‌ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 20.6 ಮಿ.ಮೀ ಮಳೆಯಾಗಿದೆ. ಶೇ. 80ಮಳೆ ಕ್ಷೀಣಿಸಿದೆ.

ಉತ್ತಮ ಗುಣಮಟ್ಟದ ಬಿತ್ತನೆ
ರೈತರು ಸ್ವಂತ ಬಿತ್ತನೆ ಬೀಜ ಉಪಯೋಗಿಸುವ ಮೊದಲು 1 ಕೆಜಿ ಉಪ್ಪು ಹಾಗೂ 4 ಲೀ. ನೀರಿನ ಪ್ರಮಾಣದ ದ್ರಾವಣ ತಯಾರಿಸಿ, ಅದರಲ್ಲಿ ಬಿತ್ತನೆ ಬೀಜವನ್ನು ಅದ್ದಿ, ಶುದ್ಧ ನೀರಿನಿಂದ ತೊಳೆದು, ಉತ್ತಮ ಗುಣಮಟ್ಟದ ಬಿತ್ತನೆ ಬೀಜವನ್ನು ಆಯ್ಕೆ ಮಾಡಬೇಕು.
-ಸತೀಶ್‌ ಬಿ, ಕೃಷಿ ಅಧಿಕಾರಿ, ಉಡುಪಿ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.