ಮೂರನೇ ಅಲೆ ತಡೆಗೆ ಸಿದ್ಧತೆ: ಬೊಮ್ಮಾಯಿ
Team Udayavani, Aug 13, 2021, 7:02 AM IST
ಉಡುಪಿ: ಜಿಲ್ಲೆಯಲ್ಲಿನ ಪಾಸಿಟಿವಿಟಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಕೂಡಲೇ ನಿಯಂತ್ರಣ ಕ್ರಮಗಳನ್ನು ಜರುಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.
ಗಣೇಶ ಚತುರ್ಥಿ ಸಹಿತ ವಿವಿಧ ಹಬ್ಬಗಳು ಬರುತ್ತಿವೆ. ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ತಿಳಿಸಿದರು.
ಜಿ.ಪಂ. ಸಭಾಂಗಣದಲ್ಲಿ ಗುರುವಾರ ಕೋವಿಡ್ ನಿಯಂತ್ರಣ ಮತ್ತು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪಾಸಿಟಿವಿಟಿ ದರ ಶೇ.2.67ರಷ್ಟಿದ್ದು ಕಳೆದ ವಾರದಿಂದ ಹೆಚ್ಚಿಗೆಯಾಗಿದೆ.ದ.ಕ. ಮತ್ತು ಉಡುಪಿ ಜಿಲ್ಲೆಯ ನಡುವೆ ದಿನ ನಿತ್ಯದ ವ್ಯವಹಾರ ನಡೆಯುವ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಮೂರನೆಯ ಅಲೆ ಎದುರಿಸಲು ಆಡಳಿತ ಸಿದ್ಧ ವಾಗಿದೆ. ಸಪ್ಟೆಂಬರ್ನಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ. ಗಡಿ ಜಿಲ್ಲೆಗಳ ಮೂಲಕ ಸೋಂಕು ವ್ಯಾಪಿಸುತ್ತಿರುವ ಕಾರಣ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್ ಮೊದಲಾದ ಗಡಿ ಜಿಲ್ಲೆಗಳಿಗೆ ಪ್ರವಾಸ ನಡೆಸಿ ಮುಂಜಾ ಗ್ರತ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದರು.
ಮಾದರಿ ಪರೀಕ್ಷೆ: ಫಲಿತಾಂಶ ಶೀಘ್ರ
ಗಂಟಲ ದ್ರವ ಪರೀಕ್ಷೆ ಪ್ರಮಾಣವನ್ನು 3 ರಿಂದ 5 ಸಾವಿರಕ್ಕೆ R ಏರಿಸಿದ್ದೇವೆ. ಪರೀಕ್ಷಾ ಫಲಿತಾಂಶ 2-3 ದಿನಗಳಲ್ಲಿ ಬರುತ್ತಿದ್ದು ಮುಂದೆ 24 ಗಂಟೆಗಳೊಳಗೆ ಸಿಗಲಿದೆ. ಈಗ ಸೋಂಕಿತರ ಹತ್ತು ಮಂದಿ ಸಂಪರ್ಕಿ ತರನ್ನು ಗುರುತಿಸಲಾಗುತ್ತಿದ್ದು ಮುಂದೆ 20 ಮಂದಿಗೆ ವಿಸ್ತರಿಸುವುದಾಗಿ ತಿಳಿಸಿದರು.
ಪ್ರಸ್ತುತ ಶೇ. 80 ಸೋಂಕಿತರು ಹೋಂ ಐಸೊಲೇಶನ್ನಲ್ಲಿದ್ದಾರೆ. ಕೋವಿಡ್ ಕೇರ್ ಸೆಂಟರ್ಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಅಲ್ಲಿಗೆ ಸೋಂಕಿತರನ್ನು ಸ್ಥಳಾಂತರಿಸ ಲಾಗುವುದು. ಕಾರ್ಕಳದಲ್ಲಿ ಒಂದು ಆಕ್ಸಿಜನ್ ಉತ್ಪಾದನ ಘಟಕ ಬಂದಿದ್ದು ಇನ್ನೊಂದು 10 ದಿನಗಳಲ್ಲಿ ಬರಲಿದೆ. ಉಡುಪಿ, ಕುಂದಾಪುರದಲ್ಲಿ ಒಂದು ಬಂದಿದ್ದು ಇನ್ನೊಂದು ಘಟಕ ಬರಲಿದೆ. ಹೆಬ್ರಿ, ಬೈಂದೂರಿನಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಹೆಚ್ಚಿನ ಲಸಿಕೆ ಪೂರೈಕೆಗೆ ಕ್ರಮ
ಜಿಲ್ಲೆಯಲ್ಲಿ ಶೇ. 59 ಮಂದಿ ಮೊದಲ ಹಾಗೂ ಶೇ.21 ಮಂದಿ ಎರಡೂ ಡೋಸ್ ಪಡೆದಿದ್ದಾರೆ. ಹೆಚ್ಚಿನ ಲಸಿಕೆ ಪೂರೈಕೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಚಿವರಾದ ಡಾ| ಕೆ.ಸುಧಾಕರ್, ವಿ. ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ರಘುಪತಿ ಭಟ…,ಲಾಲಾಜಿ ಆರ್. ಮೆಂಡನ್, ಜಿÇÉಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್, ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕಚಂದ್ರ, ಜಿÇÉಾಧಿಕಾರಿ ಜಿ. ಜಗದೀಶ್, ಜಿ.ಪಂ. ಸಿಇಒ ಡಾ|ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ