ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಮರು ನಿರ್ಮಾಣಕ್ಕೆ ಸಿದ್ಧತೆ

ಕಬ್ಬು ಕೃಷಿ ಕ್ರಾಂತಿ ಸಂಕಲ್ಪ ; ನವೆಂಬರ್‌ನಲ್ಲಿ ಚಾಲನೆ ಸಿಗುವ ಸಾಧ್ಯತೆ

Team Udayavani, Oct 4, 2021, 6:09 AM IST

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಮರು ನಿರ್ಮಾಣಕ್ಕೆ ಸಿದ್ಧತೆ

ಉಡುಪಿ: ಬ್ರಹ್ಮಾವರದ ದ.ಕ. ಸಹಕಾರಿ ಸಕ್ಕರೆ ಕಾರ್ಖಾನೆ ಪುನರ್‌ ನಿರ್ಮಾಣಕ್ಕೆ ಪೂರಕವಾಗಿ ಉಡುಪಿ ಜಿಲ್ಲೆಯಾದ್ಯಂತ ಕಬ್ಬು ಕೃಷಿಯ ಕ್ರಾಂತಿ ಮಾಡುವ ಸಂಕಲ್ಪ ಮಾಡಲಾಗಿದ್ದು, ಪ್ರಥಮ ಹಂತದ ಅಭಿಯಾನವಾಗಿ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯುವ ಯೋಜನೆಗೆ ನವೆಂಬರ್‌ ತಿಂಗಳಲ್ಲಿ ಚಾಲನೆ ಸಿಗುವ ಸಾಧ್ಯತೆಗಳಿವೆ.

ಸಕ್ಕರೆ ಕಾರ್ಖಾನೆಯ ಪುನರ್‌ನಿರ್ಮಾಣಕ್ಕೆ ಆಡಳಿತ ಮಂಡಳಿಯು ಸಮಗ್ರ ಯೋಜನೆ ರೂಪಿಸಿದ್ದು, ಇದಕ್ಕೆ ಪುಷ್ಟಿ ನೀಡುವ ಪ್ರಯತ್ನವಾಗಿ ಜಿಲ್ಲೆಯ ರೈತರು, ಸಹಕಾರಿ ಸಂಸ್ಥೆ, ಜನಪ್ರತಿನಿಧಿಗಳು, ಉದ್ಯಮಿಗಳನ್ನು ಸಂಪರ್ಕಿಸಿ ವ್ಯಾಪಕ ಕಬ್ಬು ಬೆಳೆಯುವ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ 8ರಿಂದ 10 ಸಾವಿರ ಮಂದಿ ಸ್ಥಳೀಯರಿಗೆ ಉದ್ಯೋಗಾವ ಕಾಶವೂ ಲಭ್ಯವಾಗಲಿದೆ.

100 ಗ್ರಾಮಗಳ ಗುರುತು
ಪ್ರಥಮ ಹಂತದಲ್ಲಿ ಜಿಲ್ಲೆಯ 100 ಗ್ರಾಮಗಳನ್ನು ಗುರುತಿಸಿ ರೈತರಿಗೆ ಉಚಿತ ಕಬ್ಬಿನ ಸಸಿಯನ್ನು ವಿತರಣೆ ಮಾಡುವ ಉದ್ದೇಶವನ್ನು ಇರಿಸಲಾಗಿದೆ.

ರೈತರಿಂದ ವ್ಯಾಪಕ ಬೆಂಬಲ
ಸಕ್ಕರೆ ಕಾರ್ಖಾನೆಯ ಪುನರ್‌ ನಿರ್ಮಾಣಕ್ಕೆ ಪೂರಕವಾಗಿ ವಾಣಿಜ್ಯ ಬೆಳೆಯಾದ ಕಬ್ಬು ಬೆಳೆಯುವ ಬಗ್ಗೆ ಉಡುಪಿ ಜಿಲ್ಲೆಯಾದ್ಯಂತ ರೈತರಿಂದ ವ್ಯಾಪಕ ಬೆಂಬಲ ದೊರೆತಿದೆ. ಈಗಾಗಲೇ ಆಡಳಿತ ಮಂಡಳಿ ಹಾಗೂ ವಿವಿಧ ರೈತ ಸಂಘಟನೆಗಳ ಮೂಲಕ ಸುಮಾರು 1,500ಕ್ಕೂ ಅಧಿಕ ಮಂದಿ ರೈತರನ್ನು ಸಂಪರ್ಕಿಸಲಾಗಿದ್ದು, ಕಬ್ಬು ಬೆಳೆಯುವ ಬಗ್ಗೆ ಕಾರ್ಖಾನೆಗೆ ತಮ್ಮ ಇಚ್ಛೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿ ಜಿಲ್ಲೆಯ ವಿವಿಧ ರೈತ ಸಂಘಟನೆಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಕಾರ್ಯಯೋಜನೆ ರೂಪಿಸಲಾಗುತ್ತದೆ.

ಇದನ್ನೂ ಓದಿ:ಪಂಜಾಬ್ ಗೆ ಸೋಲುಣಿಸಿದ ಕೊಹ್ಲಿ ಪಡೆ ಪ್ಲೇ ಆಫ್ ನತ್ತ

ಕಬ್ಬು ಬೆಳೆಗೆ ವಾರಾಹಿ ಯೋಜನೆ ಪೂರಕ
ಪ್ರಸ್ತುತ ವಾರಾಹಿ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ವಾರಾಹಿ ಜಲ ವಿದ್ಯುತ್‌ ಯೋಜನೆಯ ಟೇಲ್‌ ರೇಸ್‌ನಿಂದ ಪ್ರತಿನಿತ್ಯ ಹೊರಬರುವ 1,100 ಕ್ಯೂಸೆಕ್ಸ್‌ ನೀರನ್ನು ಉಪಯೋಗಿಸಿಕೊಂಡು ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ತಾಲೂಕುಗಳ ಸುಮಾರು 38 ಸಾವಿರ ಎಕರೆ ಕೃಷಿಗೆ ನೀರಾವರಿ ಸೌಲಭ್ಯ ಒದಗಿಸುವ ಯೋಜನೆ ಇದಾಗಿದೆ. ಈ ಯೋಜನೆಯು 42.73 ಕಿ.ಮೀ.ಉದ್ದದ ಬಲದಂಡೆ ಕಾಲುವೆ, 44.35 ಕಿ.ಮೀ.ಉದ್ದದ ಎಡದಂಡೆ ಕಾಲುವೆ ಹಾಗೂ 33 ಕಿ.ಮೀ.ಉದ್ದದ ಲಿಫ್ಟ್ ಕಾಲುವೆಗಳನ್ನು ಒಳಗೊಂಡಿರುತ್ತದೆ.

ಬೆಳೆಗಾರರಿಗೆ ಅವಕಾಶ
ಈಗಾಗಲೇ ಸುಮಾರು 10 ಸಾವಿರ ಎಕ್ರೆ ರೈತರ ಜಮೀನಿಗೆ ಕಾಲುವೆ ಮೂಲಕ ನೀರು ಹರಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ ಕಾಮಗಾರಿ ನಡೆಯುತ್ತಿದ್ದು, ಸುಮಾರು 8 ಸಾವಿರ ಎಕ್ರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಒಟ್ಟು ವಾರಾಹಿ ನೀರಾವರಿ ಯೋಜನೆ ಪೂರ್ಣಗೊಂಡಾಗ ಎಡದಂಡೆ, ಬಲದಂಡೆ ಕಾಲುವೆ ಪ್ರದೇಶಗಳಲ್ಲಿ ಸುಮಾರು 2 ಸಾವಿರ ಎಕ್ರೆ ಕಬ್ಬು ಬೆಳೆಯುವ ಅವಕಾಶ ಸಿಗಲಿದೆ.

2006ರಲ್ಲಿ ಮುಚ್ಚುಗಡೆ
1985ರಲ್ಲಿ ಸಕ್ಕರೆ ಉತ್ಪಾದನೆ ಆರಂಭಿಸಿದ್ದ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪ್ರತಿದಿನ 1,250 ಮೆಟ್ರಿಕ್‌ ಟನ್‌ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿತ್ತು. ವಾರಾಹಿ ನೀರಿನ ಯೋಜನೆ ಸರಿಯಾಗಿ ಅನುಷ್ಠಾನಗೊಳ್ಳದೆ ಕಬ್ಬಿನ ಕೊರತೆ, ಬಂಡವಾಳದ ಅಭಾವದಿಂದ 2006ರಲ್ಲಿ ಮುಚ್ಚುಗಡೆಗೊಂಡು ಕಾರ್ಖಾನೆಯ ಎಲ್ಲ ಕಾರ್ಮಿಕರನ್ನು ಸೇವೆಯಿಂದ ವಿಮುಕ್ತಿಗೊಳಿಸ ಲಾಗಿತ್ತು.

ಏನೆಲ್ಲ ಉತ್ಪಾದನೆ
ಕೇಂದ್ರ ಸರಕಾರದ ಮಹತ್ವದ ಯೋಜನೆಯಂತೆ ಎಥೆನಾಲ್‌ ಉತ್ಪಾದನೆಗೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಉತ್ಸುಕ ವಾಗಿದೆ. ಈಗಾಗಲೇ ಆಹಾರ ನಾಗರಿಕ ಪೂರೈಕೆ ಇಲಾಖೆಯು ಇ-ಪೋರ್ಟಲ್‌ ನೋಂದಾಯಿಸಲಾಗಿದೆ. 60 ಕೆಎಲ್‌ಪಿಡಿ ಎಥೆನಾಲ್‌ ತಯಾರಿಸುವ ಬಗ್ಗೆ ಯೋಜನಾ ವರದಿ ಸಿದ್ದಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯ ಜತೆಗೆ ಸಕ್ಕರೆ, ವಿದ್ಯುತ್‌, ಬೆಲ್ಲ, ರೈಸ್‌ಮಿಲ್‌, ಎಣ್ಣೆ, ಹಿಟ್ಟಿನ ಗಿರಣಿಯನ್ನು ಉತ್ಪಾದಿಸುವ ಘಟಕವನ್ನು ಪ್ರಾರಂಭಿಸುವ ಉದ್ದೇಶ ಹೊಂದಲಾಗಿದೆ. ಸಂಸ್ಥೆಯ ಆರ್ಥಿಕ ಪ್ರಗತಿಗೋಸ್ಕರ ಸಂಸ್ಕರಣಾ ಘಟಕ, ಆಹಾರ ಉತ್ಪನ್ನ, ಔಷಧ ತಯಾರಿ, ಬಯಲು ರಂಗಮಂದಿರದಂತಹ ಯೋಜನೆಗಳನ್ನು ರೂಪಿಸಲು ಉದ್ದೇಶಿಸಲಾಗಿದೆ.

ಸಾಲ ಮನ್ನಾ ನಿರೀಕ್ಷೆ
2023ರೊಳಗೆ ಸಕ್ಕರೆ ಕಾರ್ಖಾನೆ ಮತ್ತೆ ಪುನರಾರಂಭ ಮಾಡಲಾಗುವುದು. ರೈತರ ಹಿತಾಸಕ್ತಿ ಗಮನಿಸಿಕೊಂಡು ಈಗ ಇರುವ ಸಾಲವನ್ನು ಸರಕಾರ ಮನ್ನಾ ಮಾಡಬೇಕಿದೆ. ನವೆಂಬರ್‌ ತಿಂಗಳಿನಿಂದ ಕಬ್ಬು ಬೆಳೆಯುವ ಪ್ರಕ್ರಿಯೆ ಆರಂಭಗೊಳ್ಳಲಿದೆ. 5 ತಿಂಗಳು ಕಬ್ಬಿನಿಂದ ಎಥೆನಾಲ್‌ ಮತ್ತೆ 5 ತಿಂಗಳು ಆಹಾರ ಧಾನ್ಯಗಳಿಂದ ಎಥೆನಾಲ್‌ ತಯಾರಿಸುವ ಉದ್ದೇಶ ಹೊಂದಲಾಗಿದೆ.
-ಬೈಕಾಡಿ ಸುಪ್ರಸಾದ್‌ ಶೆಟ್ಟಿ,,
ಅಧ್ಯಕ್ಷರು, ಬ್ರಹ್ಮಾವರ ಸಕ್ಕರೆ ಕಾರ್ಖಾನೆ

– ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.