ಡಿ. 27: ಉಡುಪಿಗೆ ರಾಷ್ಟ್ರಪತಿ?
Team Udayavani, Dec 6, 2018, 10:38 AM IST
ಉಡುಪಿ: ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸನ್ಯಾಸ ಸ್ವೀಕರಿಸಿ 80 ವರ್ಷಗಳಾಗುತ್ತಿರುವ ಸಂದರ್ಭ ಅವರನ್ನು ಸಮ್ಮಾನಿಸುವ ಕಾರ್ಯಕ್ರಮವನ್ನು ಶಿಷ್ಯೆ, ಕೇಂದ್ರ ಸಚಿವೆ ಉಮಾ ಭಾರತಿ ಆಯೋಜಿಸಿದ್ದು, ಇದರಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಡಿ. 27ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಾರ್ಯಕ್ರಮ ನಿಗದಿಯಾಗಿದೆ.
1931ರಲ್ಲಿ ರಾಮಕುಂಜ ಗ್ರಾಮದಲ್ಲಿ ಜನಿಸಿದ ಶ್ರೀಪಾದರು 1938ರಲ್ಲಿ ಹೊಸಪೇಟೆ ಸಮೀಪ ಚಕ್ರತೀರ್ಥದ ವ್ಯಾಸರಾಜ ಪ್ರತಿಷ್ಠಾಪಿತ ಯಂತ್ರೋದ್ಧಾರ ಪ್ರಾಣದೇವರ ಸನ್ನಿಧಿಯಲ್ಲಿ ಸನ್ಯಾಸಾಶ್ರಮ ಸ್ವೀಕರಿಸಿದರು. ಈಗ ಸನ್ಯಾಸದೀಕ್ಷೆ ಪಡೆದು 80ನೇ ವರ್ಷಕ್ಕೆ ಕಾಲಿಡುವ ಸಂದರ್ಭ ಅಭಿನಂದಿಸಲಾಗುತ್ತಿದೆ. ಸನ್ಯಾಸ ಸ್ವೀಕರಿಸಿದ ದಿನ ಡಿ. 18ರಂದು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ