ಖಾಸಗಿ ವೈದ್ಯರ ಮುಷ್ಕರ: ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸರತಿ ಸಾಲು


Team Udayavani, Jun 18, 2019, 6:08 AM IST

170619ASTRO02

ಉಡುಪಿ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮತ್ತು ಆರೋಗ್ಯ ಸಂಸ್ಥೆಗಳ ಮೇಲಿನ ದಾಳಿ ತಡೆಯಲು ಕಾಯ್ದೆ ರೂಪಿಸುವಂತೆ ಆಗ್ರಹಿಸಿ ಸೋಮವಾರ ಭಾರತೀಯ ವೈದ್ಯಕೀಯ ಸಂಘ ನೀಡಿರುವ ಮುಷ್ಕರ ಕರೆಗೆ ವೈದ್ಯಕೀಯ ಸಂಘದ ಜಿಲ್ಲಾ ಘಟಕ ಬೆಂಬಲ ಸೂಚಿಸಿದೆ.

ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ವಿಭಾಗ ಹಾಗೂ ಕ್ಲಿನಿಕ್‌ ಬಂದ್‌ ಹಿನ್ನೆಲೆಯಲ್ಲಿ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆ ರೋಗಿಗಳಿಂದ ತುಂಬಿ ಹೋಗಿತ್ತು. ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಬಂದಿದ್ದೆವು. ಆದರೆ ಅಲ್ಲಿ ಸೇವೆ ಇಲ್ಲ ಎಂದು ಬೋರ್ಡ್‌ ಹಾಕಲಾಗಿತ್ತು. ಜಿಲ್ಲಾಸ್ಪತ್ರೆಗೆ ಹೋಗುವಂತೆ ಸೂಚಿಸಿದರು ಎಂದು ತಿಳಿಸುತ್ತಾರೆ ಮಂದಾರ್ತಿಯ ನಿವಾಸಿ.

ಸರತಿ ಸಾಲು
ಜಿಲ್ಲಾಸ್ಪತ್ರೆಯಲ್ಲಿ ಎಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆ ಪಡೆಯಲು ಆಗಮಿಸಿದ್ದರು. ರೋಗಿಗಳ ಸಂಖ್ಯೆ ಹೆಚ್ಚಳವಾದ ಕಾರಣ ಹೊರ ರೋಗಿಗಳ ವಿಭಾಗ, ಕೌಂಟರ್‌ನಲ್ಲಿ ಚಿಕಿತ್ಸೆ ಪಡೆಯಲು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂತು.

ರ್‍ಯಾಂಪ್‌ ಇಲ್ಲದೆ ಅಂಗವಿಕಲರಿಗೆ ತೊಂದರೆ
ಜಿಲ್ಲಾಸ್ಪತ್ರೆಯಲ್ಲಿ ಕಚೇರಿ, ಬಿಲ್‌ ಮೊತ್ತದ ಕ್ಲೈಮ್‌ ಮಾಡಲು ಜಿಲ್ಲಾ ಸರ್ಜನ್‌ ಅನ್ನು ಭೇಟಿಯಾಗಲು ಮೊದಲ ಅಂತಸ್ತಿಗೆ ತೆರಳಬೇಕಾಗುತ್ತದೆ. ಆದರೆ ಅಂಗವಿಕಲರಿಗೆ ಇಲ್ಲಿಗೆ ತೆರಳಲು ಯಾವುದೇ ಮೂಲಸೌಲಭ್ಯ ಇಲ್ಲದ ಕಾರಣ ತೆವಳಿಕೊಂಡು, ಅಥವಾ ಇನ್ನೊಬ್ಬರ ಸಹಾಯ ಪಡೆದು ಹೋಗಬೇಕಾಗುತ್ತದೆ. ಸೋಮವಾರವೂ ಅಂಗವಿಕಲ ರೋಗಿಗಳು ಮೊದಲ ಅಂತಸ್ತಿಗೆ ಬರಲು ಪ್ರಯಾಸಪಡುವ ದೃಶ್ಯ ಕಂಡುಬಂತು.

ಎಂದಿನಂತೆ ಚಿಕಿತ್ಸೆ
ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್‌ ಹಾಜಿ ಅಬ್ದುಲ್ಲ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿಯೂ ಎಂದಿನಂತೆ ಚಿಕಿತ್ಸೆ ನೀಡಲಾಗಿತ್ತು. ಸೋಮವಾರ ಸಹಜವಾಗಿಯೇ ರೋಗಿಗಳ ಸಂಖ್ಯೆ ಅಧಿಕವಿರುತ್ತದೆ. ಇಂದು ಕೂಡ ಎಂದಿನಂತೆ ಸೇವೆ ನೀಡುತ್ತಿದ್ದೇವೆ ಎಂದು ತಿಳಿಸುತ್ತಾರೆ ಇಲ್ಲಿನ ಸಿಬಂದಿ.

ಹೆಚ್ಚುವರಿ ಕಾರ್ಯ
ನಿರ್ವಹಿಸಲು ಸೂಚನೆ
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಲಭ್ಯ ಇರದ ಕಾರಣ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೇವೆ ಒದಗಿಸುವಂತೆ ಸರಕಾರ ಶನಿವಾರವೇ ಸುತ್ತೋಲೆ ಹೊರಡಿಸಿದೆ. ಆಸ್ಪತ್ರೆಯ ಯಾವುದೇ ಸಿಬಂದಿಗೂ ರಜೆ ನೀಡಿಲ್ಲ. ಅಗತ್ಯ ಬಿದ್ದರೆ ಹೆಚ್ಚುವರಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.
-ಡಾ| ಮಧುಸೂದನ್‌ ನಾಯಕ್‌, ಜಿಲ್ಲಾ ಸರ್ಜನ್‌

15 ನಿಮಿಷ ಕ್ಯೂ
ಚಿಕಿತ್ಸೆ ಪಡೆಯಲೆಂದು ಬೆಳಗ್ಗೆ 10 ಗಂಟೆಗೆ ಬಂದಿದ್ದೇನೆ. ಆದರೆ ತುಂಬಾ ಸರತಿ ಸಾಲು ಇದ್ದ ಕಾರಣ 15 ನಿಮಿಷ ಕಾಯಬೇಕಾಯಿತು. ಸಿಬಂದಿ ಉತ್ತಮವಾಗಿ ಸಹಕರಿಸಿದರು.
-ಪುಷ್ಪಾ, ಚಿಕಿತ್ಸೆಗೆ ಬಂದವರು

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.