ಖಾಸಗಿ ಕ್ಲಿನಿಕ್‌ ಸ್ಥಗಿತಗೊಳಿಸದಂತೆ ಕಾರ್ಕಳ ಶಾಸಕರ ಮನವಿ


Team Udayavani, Mar 27, 2020, 4:30 PM IST

ಖಾಸಗಿ ಕ್ಲಿನಿಕ್‌ ಸ್ಥಗಿತಗೊಳಿಸದಂತೆ ಕಾರ್ಕಳ ಶಾಸಕರ ಮನವಿ

ಕಾರ್ಕಳ: ಕಾರ್ಕಳದಲ್ಲಿ ಖಾಸಗಿ ಕ್ಲಿನಿಕ್‌ಗಳು ಮುಚ್ಚಿದ್ದು ವೈದ್ಯರ ಸೇವೆ ದೊರೆಯುತ್ತಿಲ್ಲ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಖಾಸಗಿ ವೈದ್ಯರು ಜನತೆಗೆ ವೈದ್ಯಕೀಯ ಸೇವೆ ನೀಡುವಂತೆ ಶಾಸಕ ವಿ. ಸುನಿಲ್‌ ಕುಮಾರ್‌ ಮನವಿ ಮಾಡಿಕೊಂಡರು.

ಅವರು ಮಾ. 27ರಂದು ತಾ.ಪಂ. ಸಭಾಂಗಣದಲ್ಲಿ ನಡೆದ ಖಾಸಗಿ ವೈದ್ಯರ ಸಭೆಯಲ್ಲಿ ಮಾತನಾಡಿ, ಕೊರೊನಾ ವೈರಸ್‌ನಿಂದ ವಿಶ್ವವೇ ತತ್ತರಿಸಿದೆ. ಇಂತಹ ಸಂದರ್ಭ ಖಾಸಗಿ ವೈದ್ಯರು ಅಗತ್ಯ ಸಲಹೆ-ಸೇವೆ ನೀಡಬೇಕು. ನಿಮ್ಮ ಸಲಹೆ-ಬೇಡಿಕೆ ಕುರಿತು ಸರಕಾರ ಮತ್ತು ತಾಲೂಕು ಆಡಳಿತ ಸ್ವೀಕರಿಸಿ ಸ್ಪಂದಿಸಲಿದೆ. ಖಾಸಗಿ ವೈದ್ಯರು ತಮ್ಮ ಸಂಪರ್ಕ ಸಂಖ್ಯೆಯನ್ನು ಗ್ರಾಮಸ್ಥರಿಗೆ ನೀಡಿ ನೆರವಾಗಬೇಕೆಂದು ಶಾಸಕರು ವಿನಂತಿಸಿಕೊಂಡರು.

ಸಾರ್ವಜನಿಕರು ಕ್ಲಿನಿಕ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಿಲ್ಲ ಎಂಬ ನಿಟ್ಟಿನಲ್ಲಿ ಹೆಚ್ಚಿನ ಕ್ಲಿನಿಕ್‌ಗಳನ್ನು ಮುಚ್ಚಲಾಗಿದೆ ಎಂದು ಡಾ| ರಾಮಚಂದ್ರ ಜೋಷಿ ಹೇಳಿದರು.

ತುರ್ತು ಚಿಕಿತ್ಸೆ ಮಾತ್ರ ಲಭ್ಯ
ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಮಾತ್ರ ನೀಡಲಾಗುವುದು ಎಂದು ತಿಳಿಸಿದ್ದರೂ ತಲೆನೋವು, ಹೊಟ್ಟೆನೋವು ಅಂತ ಜನತೆ ಆಸ್ಪತ್ರೆಗೆ ಧಾವಿಸುತ್ತಿದ್ದಾರೆ. ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವೆಂದು ಡಾ| ಮಂಜುನಾಥ ಕಿಣಿ ಅಭಿಪ್ರಾಯಪಟ್ಟರು.

ಡಾ| ಸಚ್ಚಿದಾನಂದ ಮಾತನಾಡಿ, ಕೊರೊನಾ ಶಂಕಿತರು ಹಾಗೂ ಸೋಂಕಿತರ ಕುರಿತು ಆರೋಗ್ಯ ಇಲಾಖೆ ಸ್ಪಷ್ಟ ಮಾಹಿತಿ ನೀಡುವುದು ಅಗತ್ಯ. ಇದರಿಂದ ಶಂಕಿತರ ಭಾಗದ ಜನತೆ ಮತ್ತಷ್ಟು ಮುಂಜಾಗ್ರತೆ ಕ್ರಮ ವಹಿಸಿಕೊಳ್ಳಬಹುದಾಗಿದೆ ಎಂದರು.

ಡಾ| ಸುರೇಶ್‌ ಕುಡ್ವ ಮಾತನಾಡಿ, ವೈದ್ಯರಿಗೆ ಅಗತ್ಯವಾಗಿ ಬೇಕಾಗಿದ್ದ ಮಾಸ್ಕ್, ಸ್ಯಾನಿಟೈಜೇಶನ್‌ ಲಿಕ್ವಿಡ್‌ ಅನ್ನು ಸರಕಾರ ಪೂರೈಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಮಾಸ್ಕ್ ದೊರೆತಲ್ಲಿ ಮಾತ್ರ ರೋಗಿಗಳಿಗೆ ಆರೋಗ್ಯ ಸೇವೆ ನೀಡಲು ಅನುಕೂಲವಾಗುವುದರೊಂದಿಗೆ ವೈದ್ಯರಿಂದ ರೋಗಿಗಳಿಗೆ ಕೊರೊನಾ ಹರಡುವುದನ್ನೂ ತಡೆಗಟ್ಟಬಹುದೆಂದರು.

ಕೆಎಂಸಿ ಮಣಿಪಾಲ ಆಸ್ಪತ್ರೆಗೆ ಕೋವಿಡ್‌ -19 ಟೆಸ್ಟ್‌ಗೆ ಅನುಮತಿ ದೊರೆತಿದ್ದರೂ ಎರಡು ದಿನಗಳ ಬಳಿಕ ಅದನ್ನು ರದ್ದುಪಡಿಸಲಾಗಿದೆ. ಇದರಿಂದಾಗಿ ನಮ್ಮ ಜಿಲ್ಲೆಯ ರೋಗಿಯ ಗಂಟಲು ದ್ರವ ಸ್ಯಾಂಪಲನ್ನು ಪರೀಕ್ಷೆಗಾಗಿ ದೂರದ ಶಿವಮೊಗ್ಗಕ್ಕೆ ಕಳುಹಿಸಿಕೊಡಬೇಕಾಗುತ್ತಿದೆ. ಅಲ್ಲಿಂದ ವರದಿ ಬರಲು ಮೂರ್‍ನಾಲ್ಕು ದಿನ ವ್ಯಯವಾಗುತ್ತಿದೆ ಎಂದು ಡಾ| ಕೀರ್ತಿನಾಥ್‌ ಬಳ್ಳಾಲ್‌ ಹೇಳಿದರು.

ಡಾ| ಗೀತಾ ನಾಯಕ್‌, ಡಾ| ಆನಂದ ನಾಯಕ್‌ ಕೆಲವೊಂದು ಸಲಹೆ ನೀಡಿದರು.

ತಹಶೀಲ್ದಾರ್‌ ಪುರಂದರ ಹೆಗ್ಡೆ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ| ಮೇ| ಹರ್ಷ ಕೆ.ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಕೃಷ್ಣಾನಂದ ಶೆಟ್ಟಿ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ಸುಮಾರು 30 ಮಂದಿ ಖಾಸಗಿ ವೈದ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.