ಸಂಪರ್ಕ ಸೇತುವೆ ಇಲ್ಲದೆ ಸಮಸ್ಯೆ 


Team Udayavani, Aug 11, 2021, 3:50 AM IST

ಸಂಪರ್ಕ ಸೇತುವೆ ಇಲ್ಲದೆ ಸಮಸ್ಯೆ 

ಹೊಳೆ ದಾಟಿಸುವ ದೋಣಿ ನಿಂತು ಹಲವು ವರ್ಷವಾಯಿತು. ಸಂಪರ್ಕ ಸೇತುವೆಯೂ ನಿರ್ಮಾಣ ಆಗಿಲ್ಲ. ಊರೂರು ಸುತ್ತು ಬಳಸಿ ಹೋಗಬೇಕಾದ ದುಸ್ಥಿತಿ ಇಲ್ಲಿಯದ್ದು.  ಶೀಘ್ರ ಇಲ್ಲೊಂದು ಸಂಪರ್ಕ ಸೇತುವೆ ನಿರ್ಮಾಣವಾದರೆ ಇಲ್ಲಿನವರಿಗೆ ಹೆಚ್ಚಿನ ಅನುಕೂಲವಾದೀತು.

ಕಟಪಾಡಿ: ತುಳುನಾಡಿನ ರಾಜಧಾನಿಯಾಗಿ ಗುರುತಿಸಲ್ಪಟ್ಟಿದ್ದ‌ ಉದ್ಯಾವರ ಗ್ರಾಮದ  ಪಡುಕರೆ, ಕನಕೋಡ, ತೆಂಕೊಪ್ಲ  ಪ್ರದೇಶವು ಉದ್ಯಾವರ ಪೇಟೆಗೆ ಬಲು ದೂರದಲ್ಲಿದೆ. ಗ್ರಾಮಾಡಳಿತದ ಕೇಂದ್ರ ಬಿಂದುವಾಗಿರುವ ಪಂಚಾಯತನ್ನು ತಲುಪಲು ಸುಮಾರು ಹತ್ತು  ಕಿ.ಮೀ. ಸುತ್ತುಬಳಸಿ ತಲುಪಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿದೆ.

420ಕ್ಕೂ ಅಧಿಕ ಮತದಾರರು:

ಇಲ್ಲಿ ಸುಮಾರು 600ರಷ್ಟು ಜನಸಂಖ್ಯೆ ಇದ್ದು, 114 ಮನೆಗಳಿವೆೆ. ಸುಮಾರು 420ಕ್ಕೂ ಮಿಕ್ಕಿದ ಮತದಾರರು ಇದ್ದಾರೆ. ಕುಡಿಯುವ ನೀರಿನ ಮೂಲವನ್ನೇ ಹೊಂದಿರದ ಈ ಪ್ರದೇಶದ 97 ಮನೆಗಳಿಗೆ ಕುಡಿಯುವ ನಳ್ಳಿ ನೀರಿನ ಸಂಪರ್ಕವನ್ನು ಗ್ರಾ.ಪಂ. ಹೆಚ್ಚಿನ ನಿಗಾ ವಹಿಸಿ ಇಲ್ಲಿ ಹರಿಯುವ ಪಾಪನಾಶಿನಿ ಹೊಳೆಯ ಮೂಲಕ ಪೈಪ್‌ಲೈನ್‌ ಅಳವಡಿಸಿ  ವರ್ಷವಿಡೀ ಪೂರೈಸಬೇಕಾದ ಆವಶ್ಯಕತೆ ಹೊಂದಿದೆ. ಇಬ್ಬರು ವಾರ್ಡ್‌ ಸದಸ್ಯರನ್ನು ಹೊಂದಿದೆ.

ಮೀನುಗಾರಿಕೆಯೇ ಜೀವಾಳವಾಗಿರುವ ಈ ಪ್ರದೇಶವು ಪಂ. ವ್ಯಾಪ್ತಿಯಲ್ಲಿದ್ದರೂ ಪಂಚಾಯತ್‌ ಕಚೇರಿಯಿಂದ ದೂರ ಉಳಿದುಕೊಂಡು ಯಾವುದೇ ಅಗತ್ಯ ಸೌಲಭ್ಯಗಳ ಇಲ್ಲಗಳೇ ಇರುವ  ವಾರ್ಡ್‌ ನಂ. 13 ಪಡುಕರೆ, ಉದ್ಯಾವರ ಪಂಚಾಯತ್‌ನಲ್ಲಿದೆ. ಸಮರ್ಪಕ ಸಂಪರ್ಕವೇ ಇಲ್ಲದೆ  ಸವಲತ್ತುಗಳಿಗಾಗಿ ಪರದಾಟ ನಡೆಸುವ ಮೂಲಕ ಉದ್ಯಾವರ ಪಡುಕರೆ ಎಂಬ ಪ್ರದೇಶವು ಅತ್ತಲಿಂದ ಕಡಲು-ಇತ್ತಲಿಂದ ಪಾಪನಾಶಿನಿ ಹೊಳೆಯಿಂದ ಆವೃತವಾಗಿದ್ದು ನೇರ ಸಂಪರ್ಕವಿಲ್ಲದೆ ಅನಾಥ ಸ್ಥಿತಿಯಲ್ಲಿರುವಂತೆ ಕಂಡು ಬರುತ್ತಿದೆ.

ಗ್ರಾಮ ಕೇಂದ್ರದಿಂದ 10 ಕಿ.ಮೀ. ದೂರ  :

ಪಡುಕರೆ, ಕನಕೋಡ, ತೆಂಕೊಪ್ಲ  ಭಾಗದ ಗ್ರಾಮಸ್ಥರಿಗೆ ಯಾವುದೇ ಸರಕಾರಿ ಸವಲತ್ತುಗಳನ್ನು ಪಡೆಯಲು  ಉದ್ಯಾವರ ಗ್ರಾ.ಪಂ., ಮೆಸ್ಕಾಂ ಕಚೇರಿ, ಪಶುವೈದ್ಯಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಿಕ್ಷಣ, ಶಾಲೆಗಳು, ಬ್ಯಾಂಕ್‌, ಅಂಚೆ ಕಚೇರಿ, ಸಹಿತ ಇತರ ಸರಕಾರಿ ಕಚೇರಿಗಳಿಗೆ ಸೌಲಭ್ಯ ಕ್ಕಾಗಿ ಉದ್ಯಾವರವನ್ನು ತಲುಪಲು  ಸುಮಾರು 10 ಕಿ.ಮೀ. ಸುತ್ತು ಬಳಸಿ ಸಂಚರಿಸಬೇಕಾದ ಅನಿವಾರ್ಯ ಇದೆ.

ಇಲ್ಲಿನ ಗ್ರಾಮಸ್ಥರು ಕೋಟೆ ಗ್ರಾ.ಪಂ. ವ್ಯಾಪ್ತಿಯ  ಮಟ್ಟು ಸೇತುವೆಯ ಮೂಲಕ (ಲಘು ವಾಹನ ಬಳಕೆ ಮಾತ್ರ ಸಾಧ್ಯ) ಕಟಪಾಡಿ ಪೇಟೆಗೆ ತಲುಪಿ ಮತ್ತೆ ರಾಷ್ಟ್ರೀಯ ಹೆದ್ದಾರಿ 66ರ ಮೂಲಕವೇ ಉದ್ಯಾವರವನ್ನು  ಕ್ರಮಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ. ಮತ್ತೂಂದೆಡೆ ದೂರದ ಮಲ್ಪೆ ಭಾಗಕ್ಕೆ ಸಂಚರಿಸಬೇಕಾದರೆ ಕಿದಿಯೂರು, ಕಡೆಕಾರು ಭಾಗವಾಗಿ ಸುತ್ತುಬಳಸಿ ಕ್ರಮಿಸಬೇಕಾಗಿದೆ.

ಸೇತುವೆಯೇ ಪರಿಹಾರ :

ಈ ಮೊದಲು ಪಡುಕರೆ ಭಾಗದ ಸಂಪರ್ಕಕ್ಕೆ ದೋಣಿಯನ್ನು ಬಳಸಲಾಗುತ್ತಿದ್ದು ಮಳೆಗಾಲದಲ್ಲಿ ಗಾಳಿ ಮತ್ತು ಹೊಳೆಯ ಆಳವು ಅಪಾಯಕಾರಿಯಾಗಿದ್ದು  ಕಳೆದ ಸುಮಾರು 9 ವರ್ಷಗಳ ಹಿಂದೆಯೇ ಇದನ್ನು ನಿಲ್ಲಿಸಲಾಗಿದೆ. ಪಡುಕರೆ ಪ್ರದೇಶವನ್ನು  ಸುವ್ಯವಸ್ಥಿತಗೊಳಿಸಲು ಪಿತ್ರೋಡಿ-ಕಲಾೖಬೈಲು ಭಾಗದಿಂದ ಸುಮಾರು 300 ಮೀ.ನಷ್ಟು ಉದ್ದದ ಸುವ್ಯವಸ್ಥಿತ ಸಂಪರ್ಕ ಸೇತುವೆ ನಿರ್ಮಾಣವಾದಲ್ಲಿ  ಜ್ವಲಂತ  ಸಮಸ್ಯೆಗಳಿಗೆ ಮುಕ್ತಿ ಕಲ್ಪಿಸಲು ಸಾಧ್ಯ.  ಆಗ ಪಡುಕರೆಯು ಉದ್ಯಾವರಕ್ಕೆ ಬಹಳಷ್ಟು ಹತ್ತಿರವಾಗುತ್ತದೆ. ಇಲ್ಲಿನವರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ.

ದರ್ಬಾರ್‌ ನಿಲ್ಲಿಸಿದ ಶಾಲೆ  :

ಈ ಭಾಗದಲ್ಲಿ ಯಾವುದೇ ಶಾಲೆಗಳು ಕಾರ್ಯಾಚರಿಸುತ್ತಿಲ್ಲ. ಇದ್ದ 1 ಸರಕಾರಿ ಹಿರಿಯ ಪ್ರಾಥಮಿಕ (ದರ್ಬಾರ್‌) ಶಾಲೆಯು ತನ್ನ  ದರ್ಬಾರನ್ನು ನಿಲ್ಲಿಸಿದೆ. ಇದೀಗ ಮತಗಟ್ಟೆ ಯಾಗಿ ಚುನಾವಣೆಯ ಸಂದರ್ಭ ಮಾತ್ರ ಬಳಕೆಯಾಗುತ್ತಿದೆ.

ಪ್ರವಾಸಿಗರಿಗೂ ಅನುಕೂಲ :

ಕಡಲ್ಕೊರೆತ, ನದಿ ಕೊರೆತ ಸಹಿತ ಇತರೇ ತುರ್ತು ಸಂದರ್ಭಗಳಲ್ಲಿ ಸುರಕ್ಷಾ ಕ್ರಮ ನಿರ್ವಹಣೆಗೆ ಸಂಪರ್ಕ ಸೇತುವೆ ನಿರ್ಮಾಣ ತೀರಾ ಆವಶ್ಯಕ. ಅಲ್ಲಿನ ಗ್ರಾಮಸ್ಥರಿಗೆ ತೊಂದರೆ ಆಗಬಾರದೆಂದು ಸಿಬಂದಿಯೇ ಮನೆಮನೆಗೆ ತೆರಳಿ ಮನೆ ತೆರಿಗೆ ಮತ್ತು ನೀರಿನ ತೆರಿಗೆ ಪಡೆಯಲಾಗುತ್ತದೆ. ಮೀನುಗಾರಿಕೆ ಅವಲಂಬಿತರು ಅಧಿಕವಾಗಿದ್ದು, ಸುತ್ತುಬಳಸಿ ಸಂಪರ್ಕಿಸುವ ಸ್ಥಿತಿ ಇದೆ. ನೇರ ಸಂಪರ್ಕ ಸೇತುವೆ ಆದಲ್ಲಿ ಗ್ರಾಮಸ್ಥರಿಗೂ, ಪ್ರವಾಸಿಗರಿಗೂ ಹೆಚ್ಚಿನ ಅನುಕೂಲವಾಗಲಿದೆ. -ರಾಜೇಶ್‌ ಶ್ರೀಯಾನ್‌, ಉದ್ಯಾವರ ಗ್ರಾ.ಪಂ. ಸದಸ್ಯ

 ಪ್ರವಾಸೋದ್ಯಮಕ್ಕೆ  ಹಿನ್ನಡೆ:

ಪಡುಕರೆ ಕಡಲ ಕಿನಾರೆಯು ಹೆಚ್ಚು ಆಕರ್ಷಿತವಾಗಿದ್ದು, ಈ ಭಾಗದಲ್ಲಿ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು, ಸಂಪರ್ಕ ಸೇತುವೆ  ನಿರ್ಮಾಣಗೊಂಡಲ್ಲಿ  ಕ್ರಮಿಸುವ ಹಾದಿ ಬಹಳಷ್ಟು ಸುಲಭ. ಆದರೆ ಮೂಲ ಸೌಕರ್ಯಗಳಿಲ್ಲದೆ ಪ್ರವಾಸೋದ್ಯಮಕ್ಕೆ ಹಿನ್ನಡೆಯಾಗಿದೆ. -ಕೃಷ್ಣ ಜಿ. ಕೋಟ್ಯಾನ್‌,

 ಉದ್ಯಾವರ ಗ್ರಾ.ಪಂ. ಮಾಜಿ ಸದಸ್ಯ

 

-ವಿಜಯ ಆಚಾರ್ಯ, ಉಚ್ಚಿಲ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.