ಗೊಂಬೆಯಾಟ ಅಕಾಡೆಮಿಯಲ್ಲಿ ಗಮನ ಸೆಳೆದ ಗಾನಸುಧಾ
Team Udayavani, Jul 18, 2017, 2:10 AM IST
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆ ಮನೆಯಲ್ಲಿ ಜೂನ್ ತಿಂಗಳ ಕಾರ್ಯಕ್ರಮದಲ್ಲಿ ಉದಯೋನ್ಮುಖ ಕಲಾವಿದ, ಸಂಗೀತಗಾರ ಗಂಗೊಳ್ಳಿ ಪ್ರಕಾಶ್ ಶೆಣೈ ಅವರನ್ನು ಅಕಾಡೆಮಿ ವತಿಯಿಂದ ಸಮ್ಮಾನಿಸಲಾಯಿತು. ಖ್ಯಾತ ಗಿಂಡಿ ನರ್ತನ ಕಲಾವಿದ ಗುಡ್ಡೆಯಂಗಡಿ ಸತೀಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ತಲ್ಲೂರು ನಾರಾಯಣ ವಿಕಲ ಚೇತನ ಮಕ್ಕಳ ಶಾಲೆ ರೂವಾರಿ ತಲ್ಲೂರು ಸುರೇಶ್ ಅವರು ಭಾಗವಹಿಸಿದ್ದರು. ಅಕಾಡೆಮಿಯ ಅಧ್ಯಕ್ಷ ಭಾಸ್ಕರ ಕೊಗ್ಗ ಕಾಮತ್ ವಂದಿಸಿದರು. ಅನಂತರ ಪ್ರಕಾಶ್ ಶೆಣೈ ಗಂಗೊಳ್ಳಿ ಹಾಗೂ ಬಳಗದವರಿಂದ ಗಾನಸುಧಾ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ರಂಜಿಸಿತು. ಇದೇ ಸಂದರ್ಭ ತಲ್ಲೂರು ವಿಠಲ ಭಜನ ಮಂಡಳಿ ಸದಸ್ಯರಾದ ಮಮತಾ ಪ್ರಭು, ದೇವಕಿ ಪ್ರಭು, ರಜನಿ ಪ್ರಭು ಇನ್ನಿತರರಿಂದ ಭಜನಾ ಸಂಗೀತ ನಡೆಯಿತು. ಅಕಾಡೆಮಿ ಬಳಗದ ನಾಗೇಶ್ ಶ್ಯಾನುಭೋಗ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ