ಡಿಸಿಯಿಂದ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ
ಕುಂಭಾಸಿ ರಾ.ಹೆ. 66 ಬಳಿ ಸರ್ವಿಸ್ ರಸ್ತೆಗಾಗಿ ಡಿಸಿಗೆ ಗ್ರಾ.ಪಂ.ಮನವಿ
Team Udayavani, Aug 15, 2019, 5:24 AM IST
ತೆಕ್ಕಟ್ಟೆ: ಕುಂಭಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾ.ಹೆ.66 ಕುಂಭಾಸಿ-ಕೊರವಡಿ ಕರಾವಳಿ ಗ್ರಾಮೀಣ ಸಂಪರ್ಕಕ್ಕಾಗಿ ಸರ್ವಿಸ್ ರಸ್ತೆ ನಿರ್ಮಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರಿಗೆ ಸಾರ್ವಜನಿಕರ ಪರವಾಗಿ ಕುಂಭಾಸಿ ಗ್ರಾ.ಪಂ. ವತಿಯಿಂದ ಆ. 14ರಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕುಂಭಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀವಾಣಿ ಅಡಿಗ ಮನವಿ ಸಲ್ಲಿಸಿ ಮಾತನಾಡಿ, ಈ ಪರಿಸರದ ಬಸ್ ಹಾಗೂ ಆಟೋ ಚಾಲಕರು ರಾ.ಹೆ.66ರಲ್ಲಿ ವಿರುದ್ಧ ದಿಕ್ಕಿನಿಂದ ಸಾಗಬೇಕಾದ ಅನಿವಾರ್ಯತೆ ಇರುವ ಪರಿಣಾಮ ಪೊಲೀಸರು ವೈಜ್ಞಾನಿಕವಾಗಿ ಚಿಂತನೆ ಮಾಡದೆ ಏಕಾಏಕಿ ದಂಡ ವಿಧಿಸುತ್ತಿದ್ದಾರೆ, ಇದರಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ . ಈ ಸಂಬಂಧ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಉದಯ ವಾಣಿಗೆ ಪ್ರತಿಕ್ರಿಯಿಸಿ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳು ತ್ತೇನೆ. ರಾ.ಹೆ. 66ರಲ್ಲಿ ಈಗಾಗಲೇ ಸೃಷ್ಟಿಯಾಗಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ಚುವಂತೆ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರಾದ ರಾಧಾದಾಸ್, ರಾಘವೇಂದ್ರ ಮೊಗವೀರ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ