ಪಾದಚಾರಿ ಮೇಲ್ಸೇತುವೆಗೆ ಪ್ರಸ್ತಾವನೆ ಸಿದ್ಧ


Team Udayavani, Oct 15, 2017, 8:36 AM IST

15–1.jpg

ಉಡುಪಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ನಿರ್ಮಾಣಗೊಂಡು ಅಂತಿಮ ಹಂತದಲ್ಲಿರುವ ಸುರತ್ಕಲ್‌-ಕುಂದಾಪುರ ರಾ.ಹೆ. 66 ಹಾಗೂ ಇನ್ನಷ್ಟೇ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊಳ್ಳಲಿರುವ ಮಲ್ಪೆ-ಮೊಳಕಾಲ್ಮೂರು ರಾ.ಹೆ. 169 (ಎ) ಇವುಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲಿ ಒಂದೇ ಒಂದು ಪಾದಚಾರಿ ಮೇಲ್ಸೇತುವೆ ಇಲ್ಲ. ಜನರ ಸುರಕ್ಷೆ ದೃಷ್ಟಿಯಿಂದ ಉಡುಪಿ ಜಿಲ್ಲಾ ಎಸ್‌ಪಿ ಡಾ| ಸಂಜೀವ ಎಂ. ಪಾಟೀಲ್‌  ಜಿಲ್ಲೆಯ 28 ಕಡೆಗಳಲ್ಲಿ ಸಾರ್ವಜನಿಕರು ರಸ್ತೆ ದಾಟಲು ಆವಶ್ಯಕತೆ ಇರುವ ಸ್ಕೈ 
ವಾಕರ್‌ (ಪಾದಚಾರಿ ಮೇಲ್ಸೇತುವೆ) ಕಾಮಗಾರಿ ನಡೆಸಬೇಕು ಎನ್ನುವ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದಾರೆ.

ಪಾದಚಾರಿ ಮಾರ್ಗ ಸೂಕ್ತವೇ?
ಪಾದಚಾರಿ ಮಾರ್ಗ ನಿರ್ಮಿಸಿದರೂ ಅದನ್ನೇ ಜನರು ರಸ್ತೆ ದಾಟಲು ಬಳಸುತ್ತಾರೆಯೇ ಎಂಬ ಪ್ರಶ್ನೆ ಎದುರಾಗುತ್ತದೆ. ಪಾದಚಾರಿ ಮಾರ್ಗಗಳನ್ನೇ ಕಡ್ಡಾಯ ವಾಗಿ ಬಳಸುವಂತಾಗಲು ಹೆದ್ದಾರಿ ಪ್ರಾಧಿಕಾರದವರು ರಸ್ತೆ ಇಕ್ಕೆಲಗಳಲ್ಲಿ ಮೆಷ್‌ಗಳನ್ನು ಹಾಕಿ ಜನರು ರಸ್ತೆ ದಾಟಲು ಒಳಬರಲಾಗದಂತೆ ತಡೆ ಹಾಕಬೇಕು. ಆಗ ಪಾದಚಾರಿ ಮಾರ್ಗದಲ್ಲೇ ಜನರು ದಾಟುತ್ತಾರೆ ಎನ್ನುವುದು ತಾಂತ್ರಿಕ ತಜ್ಞರ ಅಭಿಪ್ರಾಯವಾಗಿದೆ. 

ಸ್ಕೈವಾಕರ್‌ಗೆ ಪ್ರಸ್ತಾವನೆ ಇರಲಿಲ್ಲ!
ಪೊಲೀಸ್‌ ಇಲಾಖೆ ಏನೋ ಪಾದಚಾರಿ ಮಾರ್ಗಕ್ಕೆ ಪ್ರಸ್ತಾವನೆ ಸಿದ್ಧಪಡಿಸಿದೆ. ಆದರೆ ರಾ.ಹೆ. ಪ್ರಾಧಿಕಾರ ಹೇಳುವ ಪ್ರಕಾರ ರಾ.ಹೆ. 66ರ ಹೆಜಮಾಡಿ- ಕುಂದಾಪುರದ ನಡುವೆ ಒಂದೇ ಒಂದು ಸ್ಕೈವಾಕರ್‌ ನಿರ್ಮಾಣ ಯೋಜನೆ ರೂಪಿಸಿಲ್ಲ. ಕಾಪು ಪೇಟೆ, ಉಡುಪಿಯ ಕರಾವಳಿ ಜಂಕ್ಷನ್‌, ಬ್ರಹ್ಮಾವರ, ಕೋಟ, ಕುಂದಾಪುರ ಶಾಸ್ತ್ರಿ ಸರ್ಕಲ್‌ ಮತ್ತು ಕಿರಿಮಂಜೇಶ್ವರದಲ್ಲಿ ಮಾತ್ರ 6 ಅಂಡರ್‌ಪಾಸ್‌/ಓವರ್‌ಬ್ರಿಜ್‌ಗಳನ್ನು ರಚಿಸಿರುವುದಾಗಿ ಹೆದ್ದಾರಿ ಪ್ರಾಧಿಕಾರ ಹೇಳಿದೆ.

ಪಾದಚಾರಿ ಮೇಲ್ಸೇತುವೆ ಎಲ್ಲೆಲ್ಲಿ ? 
ರಾ.ಹೆ. 66 (ಹೆಜಮಾಡಿ-ಕುಂದಾಪುರ) ಕಟಪಾಡಿ ಜಂಕ್ಷನ್‌ ಪೊಲಿಪು ಜಂಕ್ಷನ್‌ ಉಚ್ಚಿಲ ಜಂಕ್ಷನ್‌ ಪಡುಬಿದ್ರಿ ಜಂಕ್ಷನ್‌ ಅಂಬಲಪಾಡಿ ಜಂಕ್ಷನ್‌ ಸಂತೆಕಟ್ಟೆ ಜಂಕ್ಷನ್‌ ಉದ್ಯಾವರ ಬಲಾಯಿಪಾದೆ ಕೋಟ ಹೈಸ್ಕೂಲ್‌ ಬಳಿ ಕೋಟ ಬಸ್‌ ನಿಲ್ದಾಣ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನ ಬ್ರಹ್ಮಾವರ ಬಸ್‌ ನಿಲ್ದಾಣ ಬ್ರಹ್ಮಾವರ ಆಕಾಶವಾಣಿ  ಎಸ್‌ಎಂಎಸ್‌ ಕಾಲೇಜು ಬ್ರಹ್ಮಾವರ ಶಿರೂರು ಕೆಳಪೇಟೆ ಜಂಕ್ಷನ್‌ ಯಡ್ತರೆ ಹೊಸ ಬಸ್‌ ನಿಲ್ದಾಣ ಬೈಂದೂರು ಜಂಕ್ಷನ್‌ ಉಪ್ಪುಂದ ಶಾಲೆಬಾಗಿಲು  ಕಂಬದಕೋಣೆ ಜಂಕ್ಷನ್‌ ಅರೆಹೊಳೆ ಜಂಕ್ಷನ್‌ ಅರಾಟೆ ಜಂಕ್ಷನ್‌ ಮುಳ್ಳಿಕಟ್ಟೆ ಜಂಕ್ಷನ್‌ ತ್ರಾಸಿ ಜಂಕ್ಷನ್‌ ತ್ರಾಸಿ ಬೀಚ್‌ ರಸ್ತೆ ಮರವಂತೆ ಮಾರಸ್ವಾಮಿ ದೇವಸ್ಥಾನದ ಬಳಿ ರಾ.ಹೆ. 169 (ಎ) (ಉಡುಪಿ-ಮಣಿಪಾಲ) ಎಂಜಿಎಂ ಕಾಲೇಜು ಸಿಂಡಿಕೇಟ್‌ ಸರ್ಕಲ್‌ ಟೈಗರ್‌ ಸರ್ಕಲ್‌ ಎಂಐಟಿ ಜಂಕ್ಷನ್‌

“ಕಳಪೆ ನಿರ್ವಹಣೆ ಸಹಿಸಲಾಗದು’
ಈ ಮಾಸಾಂತ್ಯ ಇಲ್ಲವೇ ನವೆಂಬರ್‌ ಮೊದಲ ವಾರದಲ್ಲಿ ರಾ.ಹೆ. ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಈ ಸಭೆಗೆ ಎನ್‌ಎಚ್‌ ಪ್ರಾದೇಶಿಕ ಮ್ಯಾನೇಜರ್‌ ವೈ.ವಿ. ಪ್ರಸಾದ್‌ ಬರಲಿದ್ದಾರೆ. ಅವರಿಗೆ ನಾವು ಪ್ರಸ್ತಾವನೆ ಸಲ್ಲಿಸಲಿದ್ದೇವೆ. ಜನರ ಸುರಕ್ಷತೆ ದೃಷ್ಟಿಯಿಂದ ಈ ಕೆಲಸ ಮಾಡಲಾಗಿದೆ. ಬೇರೆ ಕಡೆಗಳಲ್ಲಿನ ರಾ. ಹೆ. ಕಾಮಗಾರಿ ನಿರ್ವಹಣೆ ಉತ್ತಮವಾಗಿದೆ. ಆದರೆ ಉಡುಪಿ ಜಿಲ್ಲೆಯ ರಾ.ಹೆ. 66ರಲ್ಲಿ ಹೆದ್ದಾರಿ ನಿರ್ವಹಣೆಯು ಉತ್ತಮವಾಗಿಲ್ಲ. ಉಡುಪಿ ಜಿಲ್ಲೆಯ ಬಸ್‌ ನಿಲ್ದಾಣ, ಮಾರುಕಟ್ಟೆ, ಶಾಲೆ, ಕಾಲೇಜು ಇಂತಹ ಕಡೆಗಳಲ್ಲಿಯೂ ಪಾದಾಚಾರಿ ಸೇತುವೆರಚನೆ ಮಾಡಲು, ಬ್ಲಿಂಕರ್, ರಿಫ್ಲೆಕ್ಟರ್, ರಸ್ತೆ ಇಕ್ಕೆಲಗಳಲ್ಲಿ ಮೆಷ್‌ಗಳನ್ನು ಅಳವಡಿಸಲು ಹಾಗೂ ಎಲ್ಲ ರಸ್ತೆ ಸುರಕ್ಷತಾ ಕ್ರಮಕೈಗೊಳ್ಳಲು ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಲಾಗುವುದು.   
ಡಾ| ಸಂಜೀವ ಎಂ. ಪಾಟೀಲ್‌, ಉಡುಪಿ ಎಸ್‌ಪಿ

ಚೇತನ್‌ ಪಡುಬಿದ್ರಿ

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.