Udupi ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಮೂವರ ಸೆರೆ
Team Udayavani, Feb 2, 2024, 10:24 PM IST
ಉಡುಪಿ: ಇಲ್ಲಿನ ಬೊಮ್ಮರಬೆಟ್ಟುವಿನ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪವನ್, ಚೇತನ್ ಸಿ.ಬಿ., ಪಂಜು ಪ್ರಕರಣದ ಆರೋಪಿಗಳು, ಹೆರ್ಗ ಗ್ರಾಮದ ಈಶ್ವರ ನಗರದ ರೆಸಿಡೆನ್ಸಿಯೊಂದರ ಸಮೀಪ ಓರ್ವ ವ್ಯಕ್ತಿ ಮಹಿಳೆಯರನ್ನು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣಾ ಪೊಲೀಸರು ಗುರುವಾರ ರಾತ್ರಿ ಸ್ಥಳಕ್ಕೆ ದಾಳಿ ಮಾಡಿ ಪವನ್ನನ್ನು ವಶಕ್ಕೆ ಪಡೆದುಕೊಂಡಿದ್ದರು.
ಬಳಿಕ ಈತ ನೀಡಿದ ಮಾಹಿತಿಯ ಆಧಾರದ ಮೇಲೆ ಉಡುಪಿ ಬೊಮ್ಮರಬೆಟ್ಟುವಿನಲ್ಲಿರುವ ಮನೆಯೊಂದಕ್ಕೆ ದಾಳಿ ಮಾಡಿದ ಪೊಲೀಸರು ಚೇತನ್ ಸಿ.ಬಿ. ಮತ್ತು ಪಂಜು ಎಂಬ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ