ಆಹಾರ ಅರಸಿ ಬಂದು ಉರುಳಿಗೆ ಬಿದ್ದ ಚಿರತೆಯ ರಕ್ಷಣೆ
ರಾಜ್ಯ ಹೆದ್ದಾರಿಯ ಪಳ್ಳಿ ಪೇಟೆ ಸಮೀಪ ಮುಖ್ಯ ರಸ್ತೆ
Team Udayavani, Jan 21, 2020, 5:24 AM IST
ಪಳ್ಳಿ: ಪಳ್ಳಿ ಪೇಟೆಯ ಸಮೀಪ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಜ.20ರಂದು ಸಂಭವಿಸಿದೆ.ಕಾರ್ಕಳ ಪಳ್ಳಿ ಮಾರ್ಗವಾಗಿ ಉಡುಪಿ ರಾಜ್ಯ ಹೆದ್ದಾರಿಯ ಪಳ್ಳಿ ಪೇಟೆ ಸಮೀಪ ಮುಖ್ಯ ರಸ್ತೆಯ ಬಳಿ ಯಾರೋ ಅಪರಿಚಿತರು ಇರಿಸಿದ್ದ ಉರುಳಿಗೆ ಚಿರತೆ ಬಿದ್ದಿದೆ.
ರಾತ್ರಿ ಆಹಾರಕ್ಕಾಗಿ ಸಂಚರಿಸುವ ಸಂದರ್ಭ ಉರುಳಿಗೆ ಚಿರತೆಯು ಬಿದ್ದಿದ್ದು ಬೆಳಗ್ಗೆ ಚಿರತೆಯ ನರಳಾಟನ್ನು ಕಂಡು ಸ್ಥಳೀಯರು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತತ್ಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಚಿರತೆಯ ರಕ್ಷಣಾ ಕಾರ್ಯದಲ್ಲಿ ಕಾರ್ಕಳ ವಲಯ ಅರಣ್ಯಾಧಿಕಾರಿ ದಿನೇಶ್ ಜಿ.ಡಿ., ಬೈಲೂರು ಉಪ ವಲಯ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ, ಅರಣ್ಯ ರಕ್ಷಕರಾದ ಪ್ರತಾಪ್ ಬಿ., ಶ್ರೀಧರ್, ಸಂಜೀವ ಭಾಗಿಯಾಗಿದ್ದಾರೆ.
ಬಳಿಕ ಮಂಗಳೂರಿನಿಂದ ಅರಿವಳಿಕೆ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಅರಿವಳಿಕೆ ನೀಡಿ ಚಿರತೆಯನ್ನು ಉರುಳಿನಿಂದ ಬಿಡಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಪಿಲಿಕುಳ ಉದ್ಯಾನವನ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಯಾಚರಣೆಗೆ ಪಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಸತ್ಯಾನಂದ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಶ್ರೀಕಾಂತ್ ಪ್ರಭು, ಸಂದೀಪ್ ಅಮೀನ್ ಹಾಗೂ ಗ್ರಾಮಸ್ಥರು ಸಹಕರಿಸಿದರು.
2 ದಿನಗಳ ಹಿಂದೆ ಕಲ್ಯಾ ಪರಿಸರದಲ್ಲಿ ಚಿರತೆ ಹಾವಳಿ ಕುರಿತು ಉದಯವಾಣಿ ಸುದಿನವು ವರದಿ ಪ್ರಕಟಿಸಿತ್ತು. ಇದೀಗ ಪಳ್ಳಿ ಪರಿಸರದಲ್ಲಿ ಚಿರತೆ ಉರುಳಿಗೆ ಬಿದ್ದಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು