ಜಿಲ್ಲಾ ಹೈನುಗಾರರ ಪರಿವಾರ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ


Team Udayavani, Jan 22, 2023, 5:48 PM IST

ಜಿಲ್ಲಾ ಹೈನುಗಾರರ ಪರಿವಾರ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ

ಬ್ರಹ್ಮಾವರ: ಉಡುಪಿ ಜಿಲ್ಲಾ ಹೈನುಗಾರರ ಪರಿವಾರ ಒಕ್ಕೂಟದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶನಿವಾರ ಉಪ್ಪೂರು ಡೇರಿ ಆವರಣದಲ್ಲಿ ಬೃಹತ್‌ ಪ್ರತಿಭಟನ ಸಭೆ ಜರಗಿತು. ಜಿಲ್ಲೆಯ ಹೈನುಗಾರರು ಮತ್ತು ಸಿಬಂದಿ ಸಾವಿರಾರು ಸಂಖ್ಯೆಯಲ್ಲಿ ಸೇರಿ ತಮ್ಮ ದುಃಖವ‌ನ್ನು ಸಭೆಯಲ್ಲಿ ತೋಡಿಕೊಂಡರು.

ಪ್ರಮುಖ ಬೇಡಿಕೆಗಳು: ಮುಂದಿನ ಆರ್ಥಿಕ ವರ್ಷದ ಪ್ರಾರಂಭ ಅಂದರೆ ಎ.1ರಿಂದ ಪ್ರತೀ ಲೀಟರ್‌ ಹಾಲಿಗೆ ಕನಿಷ್ಠ 2 ರೂಪಾಯಿಯನ್ನು ಒಕ್ಕೂಟವು ಪ್ರೋತ್ಸಾಹ ಧನ ರೂಪದಲ್ಲಿ ಹೈನುಗಾರರಿಗೆ ನೀಡಬೇಕು. ಹಾಲಿನ ಮಾರುಕಟ್ಟೆ ದರವನ್ನು 3 ರೂ. ಹೆಚ್ಚಿಸಿ ಅದರಲ್ಲಿ 2.50 ರೂ.ನ್ನು ಹಾಲಿನ ದರ ಶಿರೋನಾಮೆಯಡಿ ರೈತರಿಗೂ, 25 ಪೈಸೆಯನ್ನು ಸಂಘಕ್ಕೂ ಮಿಕ್ಕುಳಿದ 25 ಪೈಸೆಯನ್ನು ಸಿಬಂದಿಗೂ ನೀಡಬೇಕು.

ಹಾಲಿನ ಉತ್ಪನ್ನಗಳಾದ ತುಪ್ಪ, ಬೆಣ್ಣೆ, ಹಾಲಿನ ಪುಡಿ, ಸಿಹಿ ಉತ್ಪನ್ನ ಬೆಲೆಯು ಏರಿಕೆಯಾಗಿರುದರಿಂದ ಅದಕ್ಕೆ ಪೂರಕವಾಗಿ ಫ್ಯಾಟಿನ ದರವನ್ನು ಪರಿಷ್ಕರಿಸಬೇಕು. ಪ್ರತಿ 0.1 ಫ್ಯಾಟ್‌ಗೆ ಪ್ರಕೃತ 17 ಪೈಸೆ ದರವಿದ್ದು ಅದನ್ನು 25 ಪೈಸೆಗೆ ಏರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಮಾರ್ಜಿನ್‌ನನ್ನು ಇದೇ ಜ.1ರಿಂದ ಜ್ಯಾರಿಗೆ ಬರುವಂತೆ ಕನಿಷ್ಠ 25 ಪೈಸೆ ಹೆಚ್ಚಿಸಬೇಕು.

ಜಿಲ್ಲಾ ಹೈನುಗಾರರ ಪರಿವಾರ ಒಕ್ಕೂಟ ಪರವಾಗಿ ಶೇಡಿಕೊಡ್ಲು ವಿಠಲ ಶೆಟ್ಟಿ, ಜಗದೀಶ ಕಾರಂತ, ಸಬ್ಲಾಡಿ ಮಂಜಯ್ಯ ಶೆಟ್ಟಿ, ಹಂದಟ್ಟು ಜಾನಕಿ ಹಂದೆ, ಕೆಂಚನೂರು ಸೋಮಶೇಖರ ಶೆಟ್ಟಿ, ಬಾಂಡ್ಯ ಸುಬ್ಬಣ್ಣ ಶೆಟ್ಟಿ, ತೆಕ್ಕಟ್ಟೆ ಸೂರ್ಯ ಶೆಟ್ಟಿ, ಕಾರ್ಕಳ ಉದಯ ಕೋಟ್ಯಾನ್‌, ಸಿದ್ಧಾಪುರ ಗೋಪಾಲಕೃಷ್ಣ ಕಾಮತ್‌, ನೀರೆ ಕೃಷ್ಣ ಶೆಟ್ಟಿ, ಚೇರ್ಕಾಡಿ ಅಶೋಕ್‌ ಕುಮಾರ್‌ ಶೆಟ್ಟಿ, ವಡ್ಡಮೇಶ್ವರ ಶ್ರೀಪಾದ ರೈ ಮಾತನಾಡಿದವರು. ಸಿಬಂದಿ  ಪರವಾಗಿ ಸುಜಾತ ಬಾಯರಿ, ಸುರೇಖ ಶೆಟ್ಟಿ, ಹೈನುಗಾರ ಪರವಾಗಿ ಸುರೇಂದ್ರ ಶೆಟ್ಟಿ, ವೆಂಕಟೇಶ್‌ ರಾವ್‌, ಬೆಳಪು ದೇವಿ ಪ್ರಸಾದ್‌ ಶೆಟ್ಟಿ, ಮಮತಾ ಆರ್‌. ಶೆಟ್ಟಿ, ರಾಮಚಂದ್ರ ನಾವಡ, ಪ್ರಕಾಶ್‌ ಶೆಟ್ಟಿ, ಚಂದ್ರ ಪೂಜಾರಿ, ಶ್ರೀಪತಿ ಅಧಿ ಕಾರಿ ಮುಂತಾದವರು ಮಾತಾಡಿದರು.

ಒಕ್ಕೂಟದ ಪರವಾಗಿ ಮನವಿ ಸ್ವೀಕರಿಸಿದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಅವರು ಹಾಲು ಉತ್ಪಾದಕರ ಹಾಗೂ ಸಿಬಂದಿ  ಪರವಾಗಿ ಒಕ್ಕೂಟ ಕಾರ್ಯಕ್ರಮ ರೂಪಿಸಲಿದೆ ಎಂದು ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ರವಿರಾಜ ಹೆಗ್ಡೆ, ಪ್ರಕಾಶ್ಚಂದ್ರ ಶೆಟ್ಟಿ, ದಿವಾಕರ ಶೆಟ್ಟಿ ಭಾಗವಹಿಸಿದರು. ಪ್ರತಿಭಟನಾ ಸಭೆಯಲ್ಲಿ ಜಿಲ್ಲೆಯ ಹಳ್ಳಿ ಹಳ್ಳಿಯಿಂದ ಸಾವಿರಾರು ಹೈನುಗಾರರು ಭಾಗವಹಿಸಿ ಹೈನುಗಾರ ವಿರೋಧಿ  ಧೋರಣೆಗೆ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.